ಉತ್ತರ ಕೊರಿಯಾ ಸರ್ವಾಧಿಕಾರಿ ರೀತಿ ಮಾಧುಸ್ವಾಮಿ: ಬಸವರಾಜು ಆರೋಪದ ವಿಡಿಯೋ ವೈರಲ್
ಪಿಸುಮಾತಿನ ವಿಡಿಯೋ ಭಾರಿ ವೈರಲ್
Team Udayavani, Jan 6, 2022, 2:55 PM IST
ಬೆಂಗಳೂರು: ಅವನು ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟ. ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ ಇದ್ದಾನಲ್ಲ, ಅವನಂತೆ ಇವನು…ಇದು
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ಸಂಸದ ಜಿ.ಎಸ್.ಬಸವರಾಜು, ಸಚಿವ ಬೈರತಿ ಬಸವರಾಜ್ ಬಳಿ ಅಲವತ್ತುಕೊಂಡ ವಿಡಿಯೋ ಈಗ ಭಾರಿ ವೈರಲ್ ಆಗಿದೆ.
ಸುದ್ದಿಗೋಷ್ಠಿ ಸಂದರ್ಭದ ಈ ಪಿಸುಮಾತು ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಲು ಮಾಧುಸ್ವಾಮಿ ನಿರಾಕರಿಸಿದ್ದಾರೆ. “ಮಾತೆತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ. ಹಾಳು ಮಾಡಿಬಿಟ್ಟ ರೀ ನಮ್ಮ ಜಿಲ್ಲೆಯನ್ನಾ..? ಹೀಗೆ ಸಚಿವ ಜೆಸಿ ಮಾಧುಸ್ವಾಮಿ ವಿರುದ್ಧ ಪರೋಕ್ಷವಾಗಿ ಏಕವಚನದಲ್ಲೇ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.
ಉತ್ತರಕೊರಿಯಾದ ಕಿಮ್ ಜಾಂಗ್ ಉನ್ ಇವನು . ಹಾಳುಮಾಡಿಬಿಟ್ಟ ರೀ ನಮ್ಮ ಜಿಲ್ಲೆಯನ್ನಾ..? ಮಾತೆತ್ತಿದರೇ ಹೊಡಿ ಬಡಿ ಕಡಿ ಅಂತಾನೆ . ಮುಂದೆ ನಮ್ಮ ಜಿಲ್ಲೆಯಲ್ಲಿ ಒಂದು ಸೀಟು ಬರಲ್ಲ. ಅವನ್ ಯಾವನ್ ಒಬ್ಬ ಇಂಜಿನಿಯರ್ ಗೆ ಹೇಳ್ತಾನೆ. ಲೇ ನೀನು ಏನ್ ಹೆಂಡ್ತಿ ಸೀರೆ ಒಗಿಯೋಕೆ ಲಾಯಕ್ ನಡಿ ಆಚೆಗೆ ಅಂತಾನೆ. ಮೊನ್ನೆ ಸಾವಿರ ಕೋಟಿ ರೂ. ಡಿಕ್ಲೇರ್ ಮಾಡಿಕೊಂಡು ಬಂದವ್ನೆ. ಸಾವಿರ ಕೋಟಿ ಅನುದಾನ ತಂದಿದ್ದಾನೆ. ಕಾರ್ಯಕ್ರಮಕ್ಕೆ ನಮಗೆ ಯಾರಿಗೂ ಆಹ್ವಾನ ಇಲ್ಲ. ನಮ್ಮನ್ನ ಕರೆಯೋದು ಇಲ್ಲ ಎಂದು ಬೇಸರ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.