ಬೆಲೆ ಏರಿಕೆ, ಉದ್ಯೋಗವೇ ಚುನಾವಣ ವಿಷಯ


Team Udayavani, Feb 18, 2022, 6:20 AM IST

ಬೆಲೆ ಏರಿಕೆ, ಉದ್ಯೋಗವೇ ಚುನಾವಣ ವಿಷಯ

ಉತ್ತರ ಪ್ರದೇಶದ ಏಳು ಹಂತಗಳ ಚುನಾವಣೆಗಳ ಪೈಕಿ ಕಾನ್ಪುರದಲ್ಲಿ ಫೆ.20ರಂದು ಮತದಾನ ನಡೆಯಲಿದೆ. ಅಂದರೆ ಮೂರನೇ ಹಂತದಲ್ಲಿ ಅಲ್ಲಿ ಮತದಾನ ನಡೆಯಲಿದೆ. ಹೇಳಿ ಕೇಳಿ ಅದು ರಾಜ್ಯದ ಮತ್ತು ದೇಶದ ಹಳೆಯ ಕೈಗಾರಿಕ ಪ್ರದೇಶವೂ ಹೌದು. ಇದರ ಹೊರತಾಗಿಯೂ ಅಲ್ಲಿ ಪ್ರಧಾನವಾಗಿ ಕಾಡುತ್ತಿರುವ ವಿಚಾರವೆಂದರೆ ಉದ್ಯೋಗ. ಕೊರೊನಾ ಅಲೆಯ ಮೊದಲ ಮತ್ತು ಎರಡನೇ ಅವಧಿಯಲ್ಲಿ ನೂರಾರು ಮಂದಿ ಯುವಕರು ಈ ಪ್ರದೇಶದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಕಾನ್ಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಹತ್ತು ವಿಧಾನಸಭಾ ಕ್ಷೇತ್ರಗಳಿವೆ. ಅದರ ಪೈಕಿ, ಬಿಲೌØರ್‌, ಭಿತೂರ್‌, ಕಲ್ಯಾಣ್‌ಪುರ್‌, ಗೋವಿಂದ ನಗರ, ಕಿದ್ವಾಯಿನಗರ, ಮಹಾ ರಾಜಪುರ, ಘತಮ್‌ಪುರ ಕ್ಷೇತ್ರಗಳಲ್ಲಿ ಸದ್ಯ ಬಿಜೆಪಿ ಶಾಸಕರು ಇದ್ದಾರೆ. ಸಿಸಮೌ ಮತ್ತು ಆರ್ಯನಗರ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಶಾಸಕರು, ಕಾನ್ಪುರ ದಂಡು (ಕಂಟೋನ್‌ಮೆಂಟ್‌)ನಲ್ಲಿ ಕಾಂಗ್ರೆಸ್‌ ಶಾಸಕರು 2017ರ ಚುನಾವಣೆಯಲ್ಲಿ ಗೆದ್ದಿದ್ದರು.

ಬಿಜೆಪಿಯಿಂದ ಗೆದ್ದವರು ಅಭಿವೃದ್ಧಿಯ ಮಾತುಗಳನ್ನಾಡುತ್ತಿದ್ದರೆ ವಿಪಕ್ಷ ಸಮಾಜ ವಾದಿ ಪಕ್ಷ ಮತ್ತು ಕಾಂಗ್ರೆಸ್‌ ಮುಖಂಡರು ನೋಟು ಅಮಾನ್ಯ, ಉದ್ಯೋಗದ ಕೊರತೆ ಯನ್ನು ಗುರಾ ಣಿಯನ್ನಾಗಿಸಿಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ. 2017ಕ್ಕಿಂತ ಮೊದಲು ಜಿಲ್ಲೆಯಲ್ಲಿ ಅಭಿವೃದ್ಧಿ ಎಂಬ ವಿಚಾರ ನಿಧಾನಗತಿಯಲ್ಲಿ ಅಥವಾ ಅದು ಕನಸಿನಂತೆಯೇ ಇತ್ತು. ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾನ್ಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಕಾಮಗಾರಿಗಳಿಗೆ ಕೂಡ ಚಾಲನೆ ಸಿಕ್ಕಿದೆ ಎನ್ನುವುದು ಮೂಲಸೌಕರ್ಯ ಮತ್ತು ಕೈಗಾರಿಕೆ ಅಭಿವೃದ್ಧಿ ಸಚಿವ ಸತೀಶ್‌ ಮಹಾನಾ ಅವರ ಹೇಳಿಕೆ. ಮಹಾನಾ ಅವರು, 1991ರ ವಿಧಾನಸಭೆ ಚುನಾವಣೆಯಿಂದ ಸತತವಾಗಿ ಜಯ ಸಾಧಿಸುತ್ತಾ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬಿಜೆಪಿಯ ಮಟ್ಟಿಗೆ ಅವರು ಹಿರಿಯ ಮುಖಂಡರೂ ಹೌದು.

ಕಾನ್ಪುರದಲ್ಲಿ ಉದ್ಯೋಗ ನಷ್ಟವಾಗಿದೆ ಎಂದು ಹೇಳಿದವರು ಯಾರು ಎಂದು ಪ್ರತಿಸ್ಪರ್ಧಿಗಳಿಗೆ ಅವರ ತಿರುಗೇಟು. ಕಾನ್ಪುರದಲ್ಲಿ ಕೈಗಾರಿಕೆಗಳೂ ಸ್ಥಾಪನೆಯಾಗುತ್ತಿವೆ ಮತ್ತು ಉದ್ಯೋಗಗಳೂ ಸೃಷ್ಟಿಯಾಗುತ್ತಿವೆ ಎಂದು ಹೇಳುತ್ತಾರೆ ಸತೀಶ್‌ ಮಹಾನಾ. ಸಮಾಜವಾದಿ ಪಕ್ಷದ ಸರಕಾರ ಅಧಿಕಾರದಲ್ಲಿ ಇದ್ದಾಗ ಸುಸೂತ್ರವಾಗಿ ಉದ್ಯಮ, ವ್ಯವಹಾರ ನಡೆಸುವ ಸೂಚ್ಯಂಕ (ಈಸ್‌ ಆಫ್ ಡೂಯಿಂಗ್‌ ಬ್ಯುಸಿನೆಸ್‌ ರ್‍ಯಾಂಕಿಂಗ್‌) ನಲ್ಲಿ ಉತ್ತರ ಪ್ರದೇಶ 16ನೇ ಸ್ಥಾನದಲ್ಲಿತ್ತು. ಈಗ ಅದು ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಯಾರ ಸಾಧನೆ ಅತ್ಯುತ್ತಮ ಎಂದು ಪ್ರಶ್ನಿಸಲು ಮಹಾನಾ ಮರೆಯುವುದಿಲ್ಲ.  ಜನರನ್ನೇ ನೇರವಾಗಿ ಪ್ರಶ್ನಿಸಿದಾಗ ಅವರು ಹೇಳುವುದೇನೆಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಉದ್ಯೋಗ ಸೃಷ್ಟಿಗೆ ಮತ್ತು ಬೆಲೆ ಏರಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿಲ್ಲವೆನ್ನುತ್ತಾರೆ. ಉದ್ಯೋಗ ಕೇಳಿ ಹೋದ ತಮಗೆ ಪೊಲೀಸರಿಂದ ಏಟು ಸಿಕ್ಕಿದೆ ಎಂದೂ ಅವರು ದೂರುತ್ತಾರೆ. ಉದ್ಯೋಗಕ್ಕೆ ನೇಮಕ ಮಾಡಿಕೊಂಡರೂ ಅದಕ್ಕೆ ಸಂಬಂಧಿಸಿದ ಪ್ರಕ್ರಿ ಯೆಗಳೇ ಇನ್ನೂ ಪೂರ್ಣಗೊಂಡಿಲ್ಲ ಎನ್ನುವುದು ಯುವಕರ ದೂರು.

ಬಹಳ ವರ್ಷಗಳ ಹಿಂದೆ ಈ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅತ್ಯಂತ ಪ್ರವರ್ಧಮಾನದಲ್ಲಿ ಇದ್ದ ಜಿಲ್ಲೆ. ಸಮಾಜವಾದಿ ಪಕ್ಷ ರೂಪುಗೊಂಡ ಬಳಿಕ ಅದು ರಾರಾಜಿಸಿತು. ಈಗ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ನೇರ ಸ್ಪರ್ಧೆ ಇದೆ. ನೋಟು ಅಮಾನ್ಯದಿಂದಾಗಿ ಜಿಲ್ಲೆಯಲ್ಲಿನ ನಾಗರಿಕರಿಗೆ ಬಹಳಷ್ಟು ತೊಂದರೆಯಾಗಿತ್ತು. ಆದರೆ ಬಿಜೆಪಿ ನಾಯಕರು ಜನರನ್ನು ಏನೇನೋ ವಾಗ್ಧಾನ ಮಾಡಿ ಮೋಸ ಮಾಡಿದ್ದರು. ಆದರೆ ಪ್ರಸಕ್ತ ಸಾಲಿನಲ್ಲಿ ಸಾಧ್ಯವಿಲ್ಲ ಎನ್ನುತ್ತಾರೆ ಸಮಾಜವಾದಿ ಪಕ್ಷದ ನಾಯಕ ಮತ್ತು ಸಿಶಮೌ ಕ್ಷೇತ್ರದ ಅಭ್ಯರ್ಥಿ ಇರ್ಫಾನ್‌ ಸೋಲಂಕಿ. ಉದ್ಯೋಗ ನಷ್ಟ, ಬೆಲೆ ಏರಿಕೆಯಲ್ಲದೆ 2020ರಲ್ಲಿ ದೇಶಾದ್ಯಂತ ಸುದ್ದಿಯಾಗಿದ್ದ ರೌಡಿ ವಿಕಾಸ್‌ ದುಬೆಯನ್ನು ಎನ್‌ಕೌಂಟರ್‌ ಮೂಲಕ ಸಾಯಿಸಿದ ವಿಚಾರವೂ ಹಲವೆಡೆ ಚರ್ಚೆಗೆ ಬರುತ್ತಿದೆ. ಕಲ್ಯಾಣ್‌ಪುರ ಕ್ಷೇತ್ರದಿಂದ ದುಬೆಯ ಸಂಬಂಧಿಕರೊಬ್ಬರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟದ್ದು ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ

Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ

Jammu Kashmir Result: ಓಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಸಿಎಂ: ಫಾರೂಖ್ ಅಬ್ದುಲ್ಲಾ

Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.