Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Team Udayavani, Sep 25, 2024, 7:27 AM IST
ಮೇಷ: ಈ ದಿನದ ಮಟ್ಟಿಗೆ ಉದ್ಯೋಗ ಸ್ಥಾನದಲ್ಲಿ ಯಾವುದೇ ತಕರಾರು ಇಲ್ಲ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ಯಥಾಪ್ರಕಾರದ ಕಿರಿಕಿರಿಗಳು. ಭವಿಷ್ಯದ ಹೂಡಿಕೆಗಳ ಕುರಿತು ಚಿಂತನೆ.
ವೃಷಭ: ಭವಿಷ್ಯದ ಯೋಜನೆಗಳ ಕುರಿತು ಚಿಂತನೆ.ಅನ್ವೇಷಕರೆದುರು ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಪ್ರಮುಖ ಉದ್ಯೋಗಪತಿಯ ಭೇಟಿ.
ಮಿಥುನ: ಮಿತ್ರನ ಯೋಜನೆ ಅನುಷ್ಠಾನಕ್ಕೆ ಸಹಾಯ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಪ್ರವಾಸದ ಯೋಜನೆ ಮುಂದಕ್ಕೆ.
ಕರ್ಕಾಟಕ: ಉದ್ಯೋಗಸ್ಥರಿಗೆ ಒಂದಿಲ್ಲೊಂದು ಚಿಂತೆ ಕಿರಿಯ ಉದ್ಯಮಿಗಳ ಸ್ನೇಹಕೂಟ ಆಯೋಜನೆ.. ಹಿರಿಯರಿಗೆ ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ. ಮಹಿಳೆಯರ ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ: ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ.ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಶಿಕ್ಷಿತ ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ, ನೆಮ್ಮದಿಯ ಅನುಭವ.
ಕನ್ಯಾ: ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿಗಳು. ಉದ್ಯಮದ ಹೊಸ ವಿಭಾಗದಲ್ಲಿ ಸಮಸ್ಯೆ. ಹಿರಿಯರ ಆಸ್ತಿ ನಿರ್ವಹಣೆಗೆ ಯೋಗ್ಯ ವ್ಯವಸ್ಥೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ
ಉತ್ತಮ ಆರೋಗ್ಯ.
ತುಲಾ: ಉದ್ಯೋಗಸ್ಥರ ಪಾಲಿಗೆ ನಿಲ್ಲದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ.
ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಅನುಷ್ಠಾನ ಆರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.
ಮಕರ: ಉದ್ಯೋಗಸ್ಥರಿಗೆ ಕಾಲಮಿತಿಯ ಸವಾಲು. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.
ಕುಂಭ: ಸರಾಗವಾಗಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು. ಟೈಲರಿಂಗ್,
ವೈಂಡಿಂಗ್ ಬಲ್ಲವರಿಗೆ ಅಧಿಕ ಆದಾಯ.
ಮೀನ: ಮೈಮನಗಳಿಗೆ ಆಲಸ್ಯ. ಹೊಸಬಗೆಯ ಜವಾಬ್ದಾರಿಗಳು. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ.
ಕುಟುಂಬದ ಹಿರಿಯರ ಮನೆಯಲ್ಲಿ ದೇವತಾ ಕಾರ್ಯದಲ್ಲಿ ಭಾಗಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ. ಇಲಾಖೆಗಳಿಂದ ಸಕಾಲಿಕ ಸ್ಪಂದನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.