![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 12, 2022, 7:16 AM IST
ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃತೃಪ್ತಿ.
ವೃಷಭ: ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.
ಮಿಥುನ: ಅತಿಯಾದ ಶ್ರಮ, ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯವೈಖರಿಯಿಂದ ಪ್ರಗತಿ.
ಕರ್ಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.
ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು: ಪರಿಶ್ರಮ, ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ, ಮೇಲಧಿಕಾರಿಗಳ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಮಾರ್ಗದರ್ಶನದ ಲಾಭ.
ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ, ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.