![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 1, 2023, 7:16 AM IST
ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃ ತೃಪ್ತಿಗೆ ತೊಂದರೆಯಾಗದು.
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕ ಧನ ಸಂಚಯನ ಬಂಧುಗಳಿಂದ ಕುಟುಂಬ ವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ ವೃದ್ಧಿ.
ಮಿಥುನ: ಚುರುಕುತನ, ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನ ಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರು ಹಿರಿಯರಲ್ಲಿ ಸಮಾದಾನದಿಂದ ವರ್ತಿಸಿ ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.
ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡೀತು. ಹೊಸ ಉದ್ಯೋಗ ವ್ಯವಹಾರಕ್ಕೆ ಉತ್ತಮ ಸಮಯ.
ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಡತೆ ಇತ್ಯಾದಿ ಶುಭ ಫಲ ಪ್ರಾಪ್ತಿ.
ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರು ಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.
ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರು ಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ.
ಧನು: ಗುರು ಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿ ಬಂದೀತು.
ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.
ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್ ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.
ಮೀನ: ಹಠಮಾಡದೆ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.