![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 14, 2021, 8:10 AM IST
14-08-2021
ಮೇಷ: ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫಲತೆ. ಧನಾರ್ಜನೆ ಉತ್ತಮವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು.
ವೃಷಭ: ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಹಣಕಾಸಿನ ವಿಷಯದಲ್ಲಿ ಸರಿಯಾದ ದಾಖಲಾತಿಗೆ ಆದ್ಯತೆ ನೀಡಿ. ಆರೋಗ್ಯದಲ್ಲಿ ಅಭಿವೃದ್ಧಿ.
ಮಿಥುನ: ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ . ಉದ್ಯೋಗ ವ್ಯವಹಾರದಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಗೌರವ ಪುರಸ್ಕಾರದ ಅವಕಾಶ. ಗುರುಹಿರಿಯರ ಆರೋಗ್ಯ ಸುದೃಢ.
ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫಲಿಸೀತು. ಉದ್ಯೋಗ ವ್ಯವಹಾರದಲ್ಲಿ ಹೊಂದಾಣಿಕೆಯ ಅಗತ್ಯ. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.
ಸಿಂಹ: ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ ಸಂಭವ. ಧನಾರ್ಜನೆಗೆ ಸರಿಸಮವಾದ ಖರ್ಚು ಎದುರಾದೀತು ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ.
ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ವಿಚಾರಗಳಲ್ಲಿ ಕಾರ್ಯ ತತ್ಪರತೆ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ.
ತುಲಾ:ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಮನೆಯಲ್ಲಿ ಸಂಭ್ರಮದ ವಾತಾವರಣ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.
ಮಕರ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.