Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
Team Udayavani, Sep 18, 2024, 7:25 AM IST
ಮೇಷ: ಉದ್ಯಮ ಸ್ಥಾನದಲ್ಲಿ ವ್ಯವಸ್ಥೆ ಪರಿಷ್ಕರಣೆ. ಉದ್ಯೋಗ ಸ್ಥಾನದಲ್ಲಿ ಉತ್ಸಾಹದ ಅನುಭವ. ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ವ್ಯವಹಾರ ಸಂಬಂಧ ತಿರುಗಾಟ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.
ವೃಷಭ: ಉದ್ಯೋಗ ಅರಸುತ್ತಿರುವವರಿಗೆ ಶುಭವಾರ್ತೆ. ಹಿರಿಯರ ಆರೋಗ್ಯ ಕ್ಷಿಪ್ರ ಸುಧಾರಣೆ. ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರ ಕ್ಷೇತ್ರ ವಿಸ್ತರಣೆ . ಗೃಹಿಣಿಯರ ಉದ್ಯಮಗಳ ಆದಾಯ ವೃದ್ಧಿ. ವ್ಯಾಪಾರಿಗಳಿಗೆ ಅಧಿಕ ಲಾಭ.
ಮಿಥುನ: ವಧೂವರಾನ್ವೇಷಿಗಳಿಗೆ ಶುಭ ಸೂಚನೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ಕುಟುಂಬಸಹಿತ ತೀರ್ಥಯಾತ್ರೆಯ ಯೋಚನೆ.
ಕರ್ಕಾಟಕ: ಕುಟುಂಬದ ಹಿರಿಯ ವ್ಯಕ್ತಿಯ ಆಗಮನ. ಶಿಕ್ಷಿತರ ನಿರುದ್ಯೋಗ ಸಮಸ್ಯೆ ನಿವಾರಣೆ . ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗ, ಉದ್ಯಮ ಕ್ಷೇತ್ರಗಳಲ್ಲಿ ಅನುಕೂಲ ವಾತಾವರಣ. ಕೃಷಿಭೂಮಿ ಖರೀದಿಗೆ ಮಾತುಕತೆ.
ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ಶೇರು ವ್ಯವಹಾರದಲ್ಲಿ ಉತ್ತಮ ಲಾಭ. ಇಲಾಖೆಗಳ ಸಕಾಲಿಕ ಸ್ಪಂದನದಿಂದ ಕಾರ್ಯಗಳು ಶೀಘ್ರ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.
ಕನ್ಯಾ: ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಲೇಖನ ವ್ಯವಸಾಯ, ಸ್ವಾಧ್ಯಾಯದಲ್ಲಿ ಹೆಚ್ಚು ಆಸಕ್ತಿ.
ತುಲಾ: ಉದ್ಯೋಗ ಅರಸುವವರಿಗೆ ಮಾರ್ಗದರ್ಶನ. ವಸ್ತ್ರ, ಆಭರಣ ವ್ಯಾಪಾರಿ ಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ದಿನ.ಇಷ್ಟದೇವರ ಆಲಯಕ್ಕೆ ಭೇಟಿ. ವ್ಯವಹಾರ ಸಂಬಂಧ ಉತ್ತರಕ್ಕೆ ಸಣ್ಣ ಪ್ರಯಾಣ.
ವೃಶ್ಚಿಕ: ವಸ್ತ್ರ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಹರ್ಷ. ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿಗೆ ಅನುಕೂಲ.
ಧನು: ಹಿರಿಯ ಅಧಿಕಾರಿಗಳಿಗೆ ತೊಂದರೆ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಯಿಂದ ಲಾಭ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ.
ಮಕರ: ಕಾರ್ಯರಂಗದಲ್ಲಿ ಗೌರವಾದರ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.
ಕುಂಭ: ಕಾರ್ಯನಿರ್ವಹಣೆಗೆ ವರಿಷ್ಠರ ಮೆಚ್ಚುಗೆ. ಸಮಾಜ ಸೇವೆಯಿಂದ ಜನಪ್ರಿಯತೆ ವೃದ್ಧಿ. ಮುದ್ರಣ ಸಾಮಗ್ರಿ,
ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ವಾಸದ ಕಟ್ಟಡ ನವೀಕರಣ ಆರಂಭ .ವ್ಯವಹಾರ ಸಂಬಂಧ ಉತ್ತರಕ್ಕೆ
ಪ್ರಯಾಣ.
ಮೀನ: ಸೇವಾಕಾರ್ಯಗಳಲ್ಲಿ ಪಾಲುಗೊಳ್ಳಲು ಆಹ್ವಾನ. ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ದ್ರವ ವ್ಯಾಪಾರಿಗಳಿಗೆ ಶುಭಕಾಲ. ಗುರು, ಹಿರಿಯರ ದರ್ಶನದಿಂದ ಶುಭ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.