Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ
Team Udayavani, Sep 16, 2024, 7:15 AM IST
ಮೇಷ: ಹೊಸ ಸಪ್ತಾಹದಲ್ಲಿ ವಿಶೇಷ ವ್ಯತ್ಯಾಸ ಇಲ್ಲ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯಮದಲ್ಲಿ ಮಾಮೂಲು ಸ್ಥಿತ್ಯಂತರಗಳು. ಆಪ್ತರಿಂದ ಸಕಾಲಿಕ ನೆರವು ಲಭ್ಯ. ಹಿರಿಯರ, ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ.
ವೃಷಭ: ಉದ್ಯೋಗದಲ್ಲಿ ಸ್ಥಿತಿ ಸುಧಾರಣೆ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ಸಣ್ಣದೊಂದು ಪ್ರಯಾಣದ ಸಾಧ್ಯತೆ. ಧಾರ್ಮಿಕ ಸಾಹಿತ್ಯ ಅಧ್ಯಯನ.
ಮಿಥುನ: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಕುಟುಂಬದ ಹಳೆಯ ಹಿತೈಷಿಯ ಭೇಟಿ.
ಕರ್ಕಾಟಕ: ಹೊಸಬರಿಗೆ ಮಾರ್ಗದರ್ಶನ ಮಾಡುವ ಜವಾಬ್ದಾರಿ. ಉದ್ಯಮದ ಉತ್ಪಾದನೆಗಳ ಬೇಡಿಕೆಯಲ್ಲಿ ಹಿನ್ನಡೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ ವ್ಯವಹಾರ ಮಂದಗತಿಯಲ್ಲಿ.
ಸಿಂಹ: ಸೋಲರಿಯದ ಸರದಾರರೆಂದರೆ ನೀವೇ. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿ. ಮನೆಯಲ್ಲಿ ಮಂಗಲ ಕಾರ್ಯದ ಸಿದ್ಧತೆ.
ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ತುಲಾ: ಪರಿಹಾರವಿಲ್ಲದ ಸಮಸ್ಯೆಯಿಲ್ಲ ಎಂಬ ಅರಿವು ಇರಲಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಲಂಕಾರ ಸಾಧನಗಳ ಖರೀದಿ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.
ವೃಶ್ಚಿಕ: ಎಲ್ಲ ರಂಗಗಳಲ್ಲೂ ಸಂಪೂರ್ಣ ಸಹಜ ಸ್ಥಿತಿ. ಉದ್ಯೋಗದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದಲ್ಲಿ ಹೊಸ ವಸ್ತುಗಳ ಉತ್ಪಾದನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.
ಧನು: ವ್ಯವಹಾರ, ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ.ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.
ಮಕರ: ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಯಿಂದ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ.ಭೂಮಿ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ.
ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹಣ ಹೂಡಿಕೆ. ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೂರದಲ್ಲಿರುವ ಬಂಧುಗಳ ಆಗಮನ. ಸೇವಾ ಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ.
ಮೀನ: ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಹತ್ತಿರದ ಹಿರಿಯ ಬಂಧು ಭೇಟಿ. ಅನ್ಯಸಮಾಜದ ವ್ಯಕ್ತಿಗಳಿಂದ ಸಕಾಲಿಕ ಸಹಾಯ. ಹೊಸ ವ್ಯವಹಾರ ಕ್ಷೇತ್ರಕ್ಕೆ ಪ್ರವೇಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ
Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.