Daily Horoscope: ಹೊಸ ಅವಕಾಶಗಳು ತಾವಾಗಿ ಲಭಿಸುವ ಸಾಧ್ಯತೆ, ಧನವ್ಯಯ
Team Udayavani, Jun 7, 2024, 7:31 AM IST
ಮೇಷ: ಅವಿರತ ಪರಿಶ್ರಮಕ್ಕೆ ಮೇಲಾಧಿಕಾರಿ ಗಳ ಮೆಚ್ಚುಗೆ. ಆವಶ್ಯವುಳ್ಳವರಿಗೆ ಸಹಾಯ ಮಾಡಿ ಕೊಟ್ಟ ತೃಪ್ತಿ. ಮಕ್ಕಳ ವಿವಾಹ ಸಂಬಂಧ ಮಾತುಕತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.ಹೊಸ ವ್ಯವಹಾರ ಆರಂಭಿಸಲು ಚಿಂತನೆ.
ವೃಷಭ: ಎಲ್ಲೆಡೆಯಲ್ಲೂ ನಿಮ್ಮ ಪ್ರಭಾವ ಕಾಣಲಿದೆ. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ. ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ.
ಮಿಥುನ: ಇಚ್ಛಾಶಕ್ತಿ ವೃದ್ಧಿಗೆ ತೀವ್ರ ಸಾಧನೆ. ಹೊಸ ಅವಕಾಶಗಳು ತಾವಾಗಿ ಲಭಿಸುವ ಸಾಧ್ಯತೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ ಹೊಂದುವಿರಿ. ಉದ್ಯೋಗಾನ್ವೇಷಿಗಳಿಗೆ ಅನುಕೂಲ.
ಕರ್ಕಾಟಕ: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ನೊಂದವರಿಗೆ ಸಾಂತ್ವನ ಹೇಳುವ ಅವಕಾಶ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ ಒದಗಲಿದೆ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ.
ಸಿಂಹ: ಉದ್ಯೋಗ, ವ್ಯವಹಾರಗಳಿಗೆ ಎದುರಾಗಿದ್ದ ಅಡಚಣೆ ದೂರ. ಪತಿ – ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ಸಂತಸದ ವಾತಾವರಣ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.
ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಕೊಂಚ ಕಿರಿಕಿರಿ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಿಂದ ಶುಭ ಸಮಾಚಾರದ ನಿರೀಕ್ಷೆ.
ತುಲಾ: ದೈಹಿಕ ಆರೋಗ್ಯ ಸುಧಾರಣೆ. ನೂತನ ವಾಹನ ಖರೀದಿ ಸಾಧ್ಯತೆ. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ. ಗೃಹೋದ್ಯಮಗಳಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ.
ವೃಶ್ಚಿಕ: ಉದ್ಯೋಗ ರಂಗದ ಸಾಧನೆಯಿಂದ ಪಕ್ಕದವರಿಗೆ ಅಸೂಯೆ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.
ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಮಕ್ಕಳ ವ್ಯಾಸಂಗ ದಲ್ಲಿ ಮುನ್ನಡೆ.
ಮಕರ: ಮೃದು ಮಾತಿನಿಂದ ಅನಾಯಾಸ ವಾಗಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫಲ ಪ್ರಾಪ್ತಿ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ.
ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿ ಗಳಿಗೆ ಹಿರಿಯರ ಪ್ರೋರ್ತ್ಸಾಹ ಲಭ್ಯ.
ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ.ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ.. ಉದ್ಯೋಗ ಬದಲಾವಣೆಯ ಸಾಧ್ಯತೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.