![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 9, 2024, 7:24 AM IST
ಮೇಷ: ಬುದ್ಧಿಶಕ್ತಿಯ ಪರೀಕ್ಷೆಯಲ್ಲಿ ವಿಜಯ. ಹೊಟೇಲ್ ಉದ್ಯಮಿಗಳು ಕಾನೂನು ಸಮಸ್ಯೆಗಳಿಂದ ಪಾರು. ದೂರ ದೇಶದಲ್ಲಿರುವ ಮಕ್ಕಳಿಗೆ ವಿವಾಹ ನಿಶ್ಚಯ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.
ವೃಷಭ: ನೂತನ ಯೋಜನೆಗಳ ಅನುಷ್ಠಾನ. ಉದ್ಯೋಗಸ್ಥರಿಂದ ಹೊಸ ಅವಕಾಶಗಳ ಸದುಪಯೋಗ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ನರ್ಸಿಂಗ್ ಮತ್ತು ಟೆಕ್ನಿಶಿಯನ್ ಶಿಕ್ಷಣ ಪಡೆದವರಿಗೆ ಉದ್ಯೋಗಾವಕಾಶ.
ಮಿಥುನ: ಯೋಜನೆಗಳ ಕ್ಷಿಪ್ರ ಅನುಷ್ಠಾನ. ತಾತ್ಕಾಲಿಕ ಉದ್ಯೋಗಸ್ಥರ ಅತಂತ್ರ ಸ್ಥಿತಿಗೆ ಪರಿಹಾರ. ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ. ಯುವಜನರಿಗೆ ಧಾರ್ಮಿಕ ಮಾರ್ಗದರ್ಶನ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ಕರ್ಕಾಟಕ: ಸುಲಭವಾಗಿ ಕಾರ್ಯ ಸಾಧಿಸಲು ಮಾರ್ಗ ಅನ್ವೇಷಣೆ. ಉದ್ಯೋಗಸ್ಥರ ಆರ್ಥಿಕ ಸಮಸ್ಯೆಗೆ ತಾತ್ಕಾಲಿಕ ಪರಿಹಾರ. ಸರಕಾರಿ ಸಬ್ಸಿಡಿ ವಿತರಣೆಗೆ ಕೆಂಪು ಪಟ್ಟಿ ಅಡ್ಡಿ. ವ್ಯವಸ್ಥೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ.
ಸಿಂಹ: ಇನ್ನಷ್ಟು ಹೊಸ ಜವಾಬ್ದಾರಿಗಳ ಹೊರೆ. ಹೆಚ್ಚು ವ್ಯವಹಾರಗಳ ಕಡೆಗೆ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಹಿರಿಯ ಪರಿಣತರ ಸಕ್ರಿಯ ಪಾತ್ರ.
ಕನ್ಯಾ: ವೃತ್ತಿ ಪರಿಣತಿ ಸುಧಾರಣೆಯಿಂದ ಸರ್ವವಿಧ ಲಾಭ. ಪ್ರತಿಭೆ ಹಾಗೂ. ಕಾರ್ಯ ನಿಷ್ಠೆಗೆ ವರಿಷ್ಠರಿಂದ ಶ್ಲಾಘನೆ. ಕೃಷಿಗೆ ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನ ಸಫಲ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆ ಸಿಗುವ ಭರವಸೆ.
ತುಲಾ: ಸಾಂದರ್ಭಿಕವಾದ ಎಲ್ಲ ಬಗೆಯ ಪರೀಕ್ಷೆಗಳಲ್ಲೂ ವಿಜಯ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಕಡಿಮೆಯಾದ ಎದುರಾಳಿಗಳ ಪೈಪೋಟಿ. ಲೇವಾದೇವಿ ವ್ಯವಹಾರದಿಂದ ದೂರವಿರಿ.ನ್ಯಾಯಾಲಯ ವ್ಯವಹಾರಗಳಲ್ಲಿ ವಿಜಯ.
ವೃಶ್ಚಿಕ: ಎಲ್ಲ ಬಗೆಯ ಪರಿಸ್ಥಿತಿಗಳಲ್ಲೂ ಅನು ಕೂಲದ ಪರಿಣಾಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿ ಇರದು. ಸರಕಾರಿ ಅಧಿಕಾರಿಗಳಿಗೆ ದೂರ ವಾದ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಬಿಗಿ ಯಾದ ಇಕ್ಕಟ್ಟಿನ ಪರಿಸ್ಥಿತಿ.ಕುಟುಂಬದಲ್ಲಿ ಹರ್ಷ.
ಧನು: ಜನ್ಮಜಾತ ಉದ್ಯಮಶೀಲತೆಗೆ ಸಹಚರರ ಮೆಚ್ಚುಗೆ. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ ನೀಡಿಕೆ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಪಡೆಯಲು ಸಹಾಯ.
ಮಕರ: ಸದ್ಯಕ್ಕೆ ಸಂದಿಗ್ಧ ಪರಿಸ್ಥಿತಿಯಿಂದ ಮುಕ್ತಿ. ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ಉದ್ಯೋಗಸ್ಥರಿಗೆ ವಿಜಯ. ಬಂಧುವರ್ಗದಲ್ಲಿ ಸಾಮರಸ್ಯ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಗೃಹೋಪಯೋಗಿ ಸಾಮಗ್ರಿಗಳ ದುರಸ್ತಿಗೆ ಧನವ್ಯಯ.
ಕುಂಭ: ಬೆನ್ನಟ್ಟಿ ಬರುವ ಹಲವು ಬಗೆಯ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಹೆಚ್ಚುವರಿ ಹೊಣೆಗಾರಿಕೆಗಳು. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ.
ಮೀನ: ಸಪ್ತಾಹದ ಅಂತಿಮ ದಿನ ಹಲವು ಹಿತಾನುಭವಗಳು. ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ಸಹಾಯ. ಸೇವಾ ರೂಪದ ಕಾರ್ಯಗಳು ಸಂಬಂಧಪಟ್ಟವರ ಸಹಕಾರದಿಂದ ಮುನ್ನಡೆ ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪುನರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಚೇತರಿಕೆ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.