Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Team Udayavani, Sep 26, 2024, 7:33 AM IST
ಮೇಷ: ಗುರುಸ್ಮರಣೆಯಿಂದ ಸಂತೋಷದ ಅನುಭವ. ಸಮಗ್ರ ಸುಧಾರಣೆಯ ಬಗ್ಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಹಿರಿಯ ನಾಗರಿಕರಿಗೆ ನೆಮ್ಮದಿ. ವ್ಯವಹಾರ ಸಂಬಂಧ ತಿರುಗಾಟ. ಗೃಹಿಣಿಯರಿಗೆ ಉಲ್ಲಾಸ.
ವೃಷಭ: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ಎಂಜಿನಿಯರ್, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ.
ಮಿಥುನ: ಸ್ವತಂತ್ರ ವ್ಯವಹಾರದ ಯೋಚನೆ ಬಿಟ್ಟು ಬಿಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.
ಕರ್ಕಾಟಕ: ಮಿಶ್ರಫಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ.ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿ ಗಳ ಖರೀದಿ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ.
ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ನೀಡಿದ್ದ ಸಾಲ ಅನಿರೀಕ್ಷಿತವಾಗಿ ಕೈಗೆ ಬಂದ ಆನಂದ. ಅಧಿಕಾರಿಗಳ ಸಕಾಲಿಕ ಸ್ಪಂದನ, ಕಾರ್ಯಗಳು ಶೀಘ್ರ. ಮುಕ್ತಾಯ. ವ್ಯವಹಾ ರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.
ಕನ್ಯಾ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.
ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಸಂತೃಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.
ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ಗೃಹಾಲಂಕಾರದಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ. ಗೃಹಿಣಿಯರಿಗೆ ಹರ್ಷ.
ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾಚಾರ ನಿರೀಕ್ಷೆ. ಉಳಿತಾಯ ಯೋಜನೆ ಗಳ ಏಜೆಂಟರಿಗೆ ಆದಾಯ ವೃದ್ಧಿ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳು ಕ್ಷಿಪ್ರಗತಿಯಲ್ಲಿ ಮುನ್ನಡೆ.
ಮಕರ: ಆದಾಯ ವೃದ್ಧಿಯ ಪ್ರಯತ್ನಕ್ಕೆ ಫಲ. ಉದ್ಯೋಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ, ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.ಪೂರ್ವದಿಕ್ಕಿಗೆ ಪ್ರಯಾಣದ ಸಾಧ್ಯತೆ.
ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯಕ್ಕೆ ಹೋಗದೆ ವಿವಾದ ತೀರ್ಮಾನ.
ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಪರಿಣತರೊಬ್ಬರ ಹಠಾತ್ ಭೇಟಿಯಿಂದ ಲಾಭ.ಹಿರಿಯ ಬಂಧುಗಳಿಗೆ ನೆರವಾಗುವ ಸಂದರ್ಭ. ಎಲ್ಲರಿಗೂ ಉತ್ತಮ ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.