![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 16, 2022, 7:21 AM IST
ಮೇಷ: ಮಾತೃ ಸಮಾನದವರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ದಾಂಪತ್ಯ ತೃಪ್ತಿಕರ. ಜಲೋತ್ಪನ್ನ ವಸ್ತುಗಳಿಂದ ಲಾಭ. ಗೃಹದಲ್ಲಿ ಸಂತಸ.
ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿದಾಯಕ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸಹಾಯಕರು ಸಹೋದ್ಯೋಗಿಗಳು ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಮಧ್ಯಮ.
ಕರ್ಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಸಹಕಾರ ಲಭಿಸೀತು.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ ಗೃಹ, ವಾಹನ ಸಂಬಂಧ ಖರ್ಚು ಸಂಭವ. ಅನ್ಯರ ಮೇಲೆ ಅವಲಂಬಿತರಿಗೆ ಕಾರ್ಯ ನಿರ್ವಹಿಸಿ.
ಕನ್ಯಾ: ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬದಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾದಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.
ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾದಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಪ್ರವಾಸ.
ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಪರಸ್ಪರ ಸುಖ ವೃದ್ಧಿ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.