Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ
Team Udayavani, May 28, 2024, 7:33 AM IST
ಮೇಷ: ವ್ಯವಹಾರ ಕುದುರಿಸಲು ಅವಸರ ಬೇಡ. ಅವಶ್ಯವುಳ್ಳವರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ಮಕ್ಕಳ ವಿವಾಹ ಸಂಬಂಧ ಮಾತುಕತೆ. ಹಿರಿಯರಿಗೆ,ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ. ಎಲ್ಲರಿಗೂ ಶುಭ ಫಲ.
ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ. ಅಧ್ಯಾಪಕ ವೃತ್ತಿಯವರಿಗೆ ಅಧಿಕ ಶ್ರಮ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ. ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ.
ಮಿಥುನ: ಮನೋಬಲಕ್ಕೆ ಸರಿಯಾಗಿ ಪರಿಸರದಿಂದ ಅನುಕೂಲ. ಉದ್ಯೋಗದಲ್ಲಿ ಹೊಸ ಅವಕಾಶಗಳು ತಾವಾಗಿ ಲಭಿಸುವ ಸಾಧ್ಯತೆ. ಮಕ್ಕಳಿಗೆ ಸಂಭ್ರಮ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ.
ಕರ್ಕಾಟಕ: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ. ಸಾಲ ಕೊಟ್ಟಿದ್ದ ಹಣ ಕೈ ಸೇರಿ ನೆಮ್ಮದಿ. ನೊಂದವರಿಗೆ ಸಾಂತ್ವನ ಹೇಳುವ ಅವಕಾಶ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ ಒದಗಲಿದೆ.
ಸಿಂಹ: ದ್ರೋಹ ಬಗೆದವರ ಬಗ್ಗೆ ಅನುಕಂಪ ಇರಲಿ. ಉದ್ಯೋಗ, ವ್ಯವಹಾರಗಳಲ್ಲಿ ತಾತ್ಕಾಲಿಕ ಅಡಚಣೆ ಸಂಭವ. ಪತಿ- ಪತ್ನಿಯರಿಂದ ಪರಸ್ಪರ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ಸಂತಸದ ವಾತಾವರಣ.
ಕನ್ಯಾ: ವೃತ್ತಿಪರ ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪ್ರೋತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಪೂರ್ವದಿಕ್ಕಿನಿಂದ ಶುಭ ಸಮಾಚಾರದ ನಿರೀಕ್ಷೆ.
ತುಲಾ: ವೃತ್ತಿರಂಗದಲ್ಲಿ ಅಸೂಯೆಯಿಂದ ಕಿರಿಕಿರಿ. ಹಿರಿಯ ಬಂಧುವಿನ ಆಗಮನ. ಯಂತ್ರೋಪಕರಣ ಖರೀದಿ. ಗೃಹೋದ್ಯಮಗಳಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ.
ವೃಶ್ಚಿಕ: ಬಂಧುಜನರ ಅನಿರೀಕ್ಷಿತ ಭೇಟಿ ಯಿಂದ ಹರ್ಷ. ಉದ್ಯೋಗ ರಂಗದ ಸಾಧನೆ ಯಿಂದ ಪಕ್ಕದವರಿಗೆ ಅಸೂಯೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ.
ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ.
ಮಕರ: ಮೃದು ಮಾತಿನಿಂದ ಅನಾ ಯಾಸವಾಗಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾ ಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫಲ ಪ್ರಾಪ್ತಿ. ಮನೆಯ ಸದಸ್ಯರ ನಡುವೆ ಸೌಹಾರ್ದದ ಸಂಬಂಧ.
ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋ ಪಯೋಗಿ ಯೋಜನೆಗಳಿಗೆ ನೆರವು.ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳು ಗಳಿಗೆ ಹುಮ್ಮಸ್ಸಿನ ವಾತಾವರಣ. ಹತ್ತಿರದ ಊರಿಗೆ ವ್ಯವಹಾರಾರ್ಥ ಭೇಟಿ.
ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ. ಉದ್ಯೋಗ ಬದಲಾವಣೆಯ ಸಾಧ್ಯತೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.