Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ
Team Udayavani, Jun 3, 2024, 7:35 AM IST
ಮೇಷ: ಸಪ್ತಾಹಾರಂಭದಲ್ಲಿ ಹೊಸ ಅನುಭವ. ಉದ್ಯೋಗ ಸ್ಥಾನದಲ್ಲಿ ಉತ್ಸಾಹ ವರ್ಧನೆ. ಉದ್ಯಮಗಳ ನಡುವೆ ಉತ್ಪನ್ನಗಳ ಪ್ರಚಾರದಲ್ಲಿ ಮೇಲಾಟ. ಹಿರಿಯರ ಆರೋಗ್ಯದ ಕಡೆಗೆ ಗಮನ ಇರಲಿ. ಸಣ್ಣ ಪ್ರಯಾಣ ಸಂಭವ.
ವೃಷಭ: ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಕೆಲಸದ ಹೊರೆ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.
ಮಿಥುನ: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತಉದ್ಯಮದ ಪ್ರಗತಿ ತೃಪ್ತಿಕರ.ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಶಿಕ್ಷಣದಲ್ಲಿ ಮಕ್ಕಳ ಆಸಕ್ತಿ ವೃದ್ಧಿಗೆ ಶತಪ್ರಯತ್ನ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಹಿರಿತನಕ್ಕೆ ಪ್ರಾಶಸ್ತ್ಯ ಉದ್ಯಮದ ಉತ್ಪಾದನೆಗಳ ಜನಪ್ರಿಯತೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.
ಸಿಂಹ: ಉದ್ಯೋಗಸ್ಥರಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆ ಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ ಸಮಸ್ಯೆ.ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸ್ವಂತ ಉದ್ಯಮದಲ್ಲಿ ಗಮನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋಗಾಸಕ್ತರಿಗೆ ಅಯಾಚಿತ ಅವಕಾಶಗಳು ಲಭ್ಯ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ.
ತುಲಾ: ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗೃಹೋಪಯೋಗಿ. ಇಲೆಕ್ಟ್ರಾನಿಕ್ಸ್ ಸಾಮಗ್ರಿಗಳ ಖರೀದಿ.ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.
ವೃಶ್ಚಿಕ: ಸಕಲ ಬಾಧೆಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ವೃದ್ಧಿ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.
ಧನು: ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಪ್ರಗತಿ.
ಮಕರ: ಉದ್ಯೋಗ ಸ್ಥಾನ ನವೀಕರಣ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯವೃದ್ಧಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವರ್ಧನೆ.
ಕುಂಭ: ಹೊಸ ಆದಾಯ ಮೂಲಗಳ ಉಪಯೋಗ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾ ಕಾರ್ಯಗಳಲ್ಲಿ ಕೈಜೋಡಿಸಲು ಮನೆ ಮಂದಿಯ ಸಹಕಾರ.
ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಸ್ಥಿರಬುದ್ಧಿ. ಉದ್ಯೋಗದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭಿಸಲು ಚಿಂತನೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.