Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Team Udayavani, Sep 30, 2024, 7:52 AM IST
ಮೇಷ: ಕುಗ್ಗದ ಉತ್ಸಾಹದಲ್ಲಿ ಹೊಸ ಸಪ್ತಾಹ ಆರಂಭ. ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಉದ್ಯಮಗಳ ನಡುವೆ ಪ್ರಚಾರ ಸಮರ. ಹಿರಿಯರ ಆರೋಗ್ಯದ ಕಡೆಗೆ ಗಮನ ಇರಲಿ. ವ್ಯವಹಾರದ ನಿಮಿತ್ತ ಅನಿವಾರ್ಯವಾದ ಪ್ರಯಾಣ.
ವೃಷಭ: ಹಿರಿಯ ಸರಕಾರಿ ಅಧಿಕಾರಿಗಳಿಗೆ ನಿರುತ್ಸಾಹ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಲೇವಾದೇವಿ ವ್ಯವಹಾರಕ್ಕೆ ವಿರಾಮ.
ಮಿಥುನ: ವ್ಯವಹಾರದಲ್ಲಿ ಅಪಾರ ಜಾಗರೂಕತೆ ಇರಲಿ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ನಿಲ್ಲದ ಪ್ರಯತ್ನ.
ಕರ್ಕಾಟಕ: ಪ್ರತಿಭೆ, ಹಿರಿತನ ಉಳ್ಳವರಿಂದ ಹುದ್ದೆಗೆ ಶೋಭೆ. ಉದ್ಯಮದ ಉತ್ಪಾದನೆಗಳ ಆಕರ್ಷಣೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ಹಳೆಯ ಸಾಲ ವಸೂಲಿಯಾಗಿ ನೆಮ್ಮದಿ.
ಸಿಂಹ: ಕ್ರಿಯಾಶೀಲ ವ್ಯಕ್ತಿಗಳಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆ ಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ ಸಮಸ್ಯೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ಬಂಧುಗಳ ಕುಟುಂಬದಲ್ಲಿ ಪಿತೃಕಾರ್ಯ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಆಹ್ಲಾದದ ವಾತಾವರಣ. ಸ್ವಂತ ಉದ್ಯಮದಲ್ಲಿ ಗಣನಾರ್ಹ ಪ್ರಗತಿ. ಉದ್ಯೋಗಾಸಕ್ತರಿಗೆ ಅಯಾಚಿತ ಅವಕಾಶಗಳು ಲಭ್ಯ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಪತ್ನಿಯ ಕಡೆಯ ಬಂಧುಗಳ ಆಗಮನ..
ತುಲಾ: ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.
ವೃಶ್ಚಿಕ: ಎಲ್ಲ ವಿಧದ ಬಾಧೆಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ವರಿಷ್ಠರಿಗೆ ಹರ್ಷ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಗೃಹೋದ್ಯಮ ಉತ್ಪನ್ನಗಳಿಗೆ ಅಧಿಕ ಬೇಡಿಕೆ.
ಧನು: ದಾಯಾದಿ ಕಲಹ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಪ್ರಗತಿ.ದಂಪತಿಗಳ ನಡುವೆ ಅನುರಾಗ ವೃದ್ಧಿ.
ಮಕರ: ಪ್ರಮುಖರ ಹೆಸರು ಕೆಡಿಸುವ ಹುನ್ನಾರ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯಲಾಭ.ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಆದಾಯ ವೃದ್ಧಿ.
ಕುಂಭ: ಹೊಸ ಆದಾಯ ಮೂಲಗಳ ಅನ್ವೇಷಣೆ.ಅಧಿಕಾರಿಗಳಿಗೆ ಅಪವಾದದ ಭೀತಿ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.
ಮೀನ: ಧರ್ಮ ಮಾರ್ಗದಲ್ಲಿ ಸಾಗಿ ಕಾರ್ಯಜಯ. ಉದ್ಯೋಗ ಸ್ಥಾನದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭ. ಬಂಧುಗಳಿಗೆ ಆಪತ್ಕಾಲದಲ್ಲಿ ಸಹಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.