![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
DMK ವಿರುದ್ಧ1 ರೂ.ಮಾನನಷ್ಟ ಮೊಕದ್ದಮೆ!: ಅಣ್ಣಾಮಲೈ
ಹೆಲಿಕಾಪ್ಟರ್ನಲ್ಲಿ ಹಣ: ಸೊರಕೆ ಆರೋಪಕ್ಕೆ BJP Leader ತಿರುಗೇಟು
Team Udayavani, Apr 17, 2023, 6:10 PM IST
![1-csasad](https://www.udayavani.com/wp-content/uploads/2023/04/1-csasad-1-620x369.jpg)
ಕಾಪು : ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ ನಡುವಿನ ಮಾನನಷ್ಟ ಮೊಕದ್ದಮೆ ಜಟಾಪಟಿ ತಾರಕಕ್ಕೇರಿದ್ದು, ಈ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕಾಪುನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ನಾವು ಗಂಭೀರವಾಗಿ ರಾಜಕೀಯ ಮಾಡುತ್ತಿದ್ದೇವೆ. ಡಿಎಂಕೆ ಮೇಲೆ ಒಂದು ರೂ., ಮಾನ ನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದರು.
ಡಿಎಂಕೆ ಅವರು ಇಲ್ಲಿಯವರೆಗೆ ನನ್ನ ಮೇಲೆ 1300 ಕೋ. ರೂ. ಮಾನ ನಷ್ಟ ಮೊಕದ್ದಮೆ ಹಾಕಿದ್ದಾರೆ. ಡಿಎಂಕೆ ಅವರು 500, 300 ಕೋ. ರೂ. ಒಂದೊಂದು ಬಾರಿ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಡಿಎಂಕೆ ಬಳಿ ಬಹಳ ಹಣ ಇರುವುದರಿಂದ ಇಷ್ಟು ನೂರಾರು ಕೋ. ರೂ. ನಷ್ಟು ಮಾನ ನಷ್ಟ ಮೊಕದ್ದಮೆ ಹಾಕುತ್ತಿದ್ದಾಾರೆ. ನಮ್ಮ ಡಿಎಂಕೆ ಫೈಲ್ಸ್ ವರದಿಯಲ್ಲಿ 11 ಮಂದಿ ನಾಯಕರು ಒಂದು ಲಕ್ಷ 31 ಸಾವಿರ ಕೋಟಿ ರೂ. ನಷ್ಟು ಪ್ರಾಪರ್ಟಿ ಮಾಡಿದ್ದಾಾರೆ. ಈ ಬಗ್ಗೆೆ ನಾವು ದಾಖಲೆ ಬಿಡುಗಡೆ ಮಾಡಿದ್ದೇವೆ ಇದು ಮೊದಲ ಹಂತದಲ್ಲಿ ನಾವು ಬಿಡುಗಡೆ ಮಾಡಿದ ದಾಖಲೆ. ಒಬ್ಬ ಡಿಎಂಕೆ ನಾಯಕನ ಬಳಿ 50 ಸಾವಿರ ಕೋ. ರೂ. ಇದೆ ಎಂದು ಆರೋಪಿಸಿದರು.
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಮನಸ್ಸಿಗೆ ಸಂಕಟ
ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖರಾಗಿದ್ದವರು. ಪಕ್ಷವನ್ನು ಬೆಳೆಸುವುದರ ಜತೆಗೆ ಸಾಕಷ್ಟು ಅವಕಾಶವನ್ನು ಪಡೆದಿದ್ದರು. ಅವರು ಕಾಂಗ್ರೆಸ್ ಸೇರಿದ್ದು ನೋಡಿ ಮನಸ್ಸಿಗೆ ಸಂಕಟವಾಯಿತು. ಅವರದು ದುಡುಕಿನ ನಿರ್ಧಾರವಗಿದ್ದು, ಶೆಟ್ಟರ್ ಮತ್ತು ಲಕ್ಷಣ ಸವದಿ ಅವರು ವ್ಯಕ್ತಿಗತವಾಗಿ ಪಕ್ಷ ಬಿಟ್ಟಿದ್ದಾರೆ. ಇವರ ಈ ನಿರ್ಧಾರದಿಂದ ಪಕ್ಷದ ಮೇಲೆ ಪರಿಣಾಮ ಆಗಲ್ಲ ನರೇಂದ್ರ ಮೋದಿ ವಿಶ್ವ ನಾಯಕ ಎಂದು ಜಗದೀಶ್ ಶೆಟ್ಟರ್ ಹೇಳಿದ್ದು, ಅದೇ ಬಾಯಿಯಲ್ಲಿ ಯಾವ ರೀತಿ ಸೋನಿಯಾ ಗಾಂಧಿಯನ್ನು ಸಮರ್ಥಿಸುತ್ತಾರೋ ಗೊತ್ತಿಲ್ಲ ಎಂದು ಅಣ್ಣಾಮಲೈ ಹೇಳಿದರು.
ಹೆಲಿಕಾಪ್ಟರ್ನಲ್ಲಿ ಹಣ: ಸೊರಕೆ ಆರೋಪಕ್ಕೆ ಅಣ್ಣಾಮಲೈ ತಿರುಗೇಟು
ಹೆಲಿಕಾಪ್ಟರ್ನಲ್ಲಿ ಹಣ ತೆಗೆದುಕೊಂಡು ಬಂದಿದ್ದಾಾರೆ ಎಂದು ಸೊರಕೆ ನೀಡಿದ ಹೇಳಿಕೆಗೆ ಅಣ್ಣಾಮಲೈ ತಿರುಗೇಟು ನೀಡಿದರು.
ಸೊರಕೆ ಅವರು ಎಲ್ಲರೂ ಅವರ ರೀತಿ ಎಂದುಕೊಂಡಿದ್ದಾಾರೆ. ನಾವು ಪ್ರಾಮಾಣಿಕವಾಗಿ ಇದ್ದೇವೆ. ಅಪಪ್ರಚಾರ ಮಾಡುವ ಕಾಂಗ್ರೆಸ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಪ್ರತಿಸ್ಪರ್ಧಿಗೆ ಹೆದರಿ ಸೊರಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ನಾನು ಹೆಲಿಕಾಪ್ಟರ್ನಲ್ಲಿ ಬಂದಿರೋದು ನಿಜ.
ಉಡುಪಿಯಿಂದ ಬೇರೆಬೇರೆ ಕಡೆಗಳಲ್ಲಿ ಐದು ಕಾರ್ಯಕ್ರಮಗಳು ನಿಗದಿಯಾಗಿದೆ. ಸುಳ್ಯ, ತೀರ್ಥಹಳ್ಳಿ, ಚಿಕ್ಕಮಗಳೂರು ಎಲ್ಲ ಕಡೆಗಳಲ್ಲಿ ಓಡಾಟ ಇದೆ. ಸರಿಯಾದ ಸಮಯಪಾಲನೆ ಮಾಡುವ ಅನಿವಾರ್ಯತೆಯಿಂದ ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಸೊರಕೆ ಅವರು ನನ್ನ ಒಳ್ಳೆ ಮಿತ್ರರು, ಅಸಹಾಯಕತೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.