ಉಡುಪಿ ಜಿಲ್ಲೆ: 10 ಕಡೆ “ನೆಟ್ವರ್ಕ್‌ ಶ್ಯಾಡೋ ಬೂತ್‌’


Team Udayavani, Apr 9, 2023, 5:35 AM IST

ಉಡುಪಿ ಜಿಲ್ಲೆ: 10 ಕಡೆ “ನೆಟ್ವರ್ಕ್‌ ಶ್ಯಾಡೋ ಬೂತ್‌’

ಕುಂದಾಪುರ: ಉಡುಪಿ ಜಿಲ್ಲೆಯು ಮತ್ತೂಂದು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಎಲ್ಲ ಮತಗಟ್ಟೆಗಳಿಗೂ ನೆಟ್ವರ್ಕ್‌ ಸಂಪರ್ಕ ವ್ಯವಸ್ಥೆಯಿದೆ. ಆದರೆ 2 ಕ್ಷೇತ್ರಗಳ 10 ಮತಗಟ್ಟೆಗಳನ್ನು “ನೆಟ್ವರ್ಕ್‌ ಶ್ಯಾಡೋ ಬೂತ್‌’ (ಯಾವುದೇ ನೆಟ್ವರ್ಕ್‌ ಸೌಲಭ್ಯವಿಲ್ಲದ ಮತಗಟ್ಟೆ) ಎಂದು ಗುರುತಿಸಲಾಗಿದೆ. ಇಲ್ಲಿ ಮತದಾನದ ದಿನ ಸಂವಹನಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಕಾರ್ಯ ನಿರತವಾಗಿದೆ.

ಬೈಂದೂರಲ್ಲಿ 246, ಕುಂದಾಪುರದಲ್ಲಿ 222, ಉಡುಪಿಯಲ್ಲಿ 226, ಕಾಪುವಿನಲ್ಲಿ 208 ಹಾಗೂ ಕಾರ್ಕಳದಲ್ಲಿ 209 ಸೇರಿ ಒಟ್ಟು ಉಡುಪಿ ಜಿಲ್ಲೆಯಲ್ಲಿ 1,111 ಮತಗಟ್ಟೆಗಳಿವೆ. ಇದರಲ್ಲಿ ಉಡುಪಿ, ಕಾಪು, ಕಾರ್ಕಳದಲ್ಲಿರುವ ಎಲ್ಲ ಮತಗಟ್ಟೆಗಳಿಗೆ ಕನಿಷ್ಠ ಒಂದಾದರೂ ನೆಟ್ವರ್ಕ್‌ ಸಂಪರ್ಕ ವ್ಯವಸ್ಥೆಯಿದೆ. ಆದರೆ ಬೈಂದೂರಿನಲ್ಲಿ 8 ಹಾಗೂ ಕುಂದಾಪುರದ 2 ಮತಗಟ್ಟೆಗಳಲ್ಲಿ ಯಾವುದೇ ನೆಟ್ವರ್ಕ್‌ ವ್ಯವಸ್ಥೆ ಇಲ್ಲ.

ಯಾವೆಲ್ಲ ಮತಗಟ್ಟೆ?
ಬೈಂದೂರಿನ ಗಂಗನಾಡು ಶಾಲೆ, ಕಾಲ್ತೊಡು ಬ್ಯಾಟಿಯಾನಿ ಶಾಲೆ, ಬ್ಯಾಟಿಯಾನಿ ಶಾಲೆ ಪೂರ್ವ ಭಾಗ, ಹೊಸೂರು ಶಾಲೆ, ಹೊಸೂರು ಕದಳಿ ಶಾಲೆ, ಹಳ್ಳಿಹೊಳೆಯ ಇರಿಗೆ ಶಾಲೆ, ಕಮಲಶಿಲೆಯ ಯಳಬೇರು ಶಾಲೆ, ಬೆಳ್ಳಾಲದ ನಂದ್ರೋಳಿ ಶಾಲೆ, ಕುಂದಾಪುರ ಕ್ಷೇತ್ರದ ಹಾಲಾಡಿಯ ಕಾಸಾಡಿ ಶಾಲೆ, ಅಮಾಸೆಬೈಲಿನ ನಡಂಬೂರು ಶಾಲೆಯಲ್ಲಿರುವ ಮತಗಟ್ಟೆಗಳಲ್ಲಿ ನೆಟ್ವರ್ಕ್‌ ಸೌಲಭ್ಯವಿಲ್ಲ. ಕಾರ್ಕಳದಲ್ಲೂ ನಾಡ್ಪಾಲು ನೆಲ್ಲಿಕಟ್ಟು ಶಾಲೆ, ಕಾಸನಮಕ್ಕಿ ಶಾಲೆಯ ಮತಗಟ್ಟೆಗಳಲ್ಲಿ ನೆಟ್ವರ್ಕ್‌ ಶ್ಯಾಡೋ ಪ್ರದೇಶವೆಂದು ಗುರುತಿಸಲಾಗಿದ್ದು, ಬಳಿಕ ಇಲ್ಲಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಒಂದು ಕಂಪೆನಿಯ ನೆಟ್ವರ್ಕ್‌ ಮಾತ್ರ ವಿರುವ 15-16 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿಯೂ ತುರ್ತು ಅನಿವಾರ್ಯ ಎದುರಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ನೆಟ್ವರ್ಕ್‌ ಇಲ್ಲದ ಮತ ಗಟ್ಟೆಗಳನ್ನು ಪರಿಶೀಲಿಸಿದ್ದು, ಇನ್ನೂ ಅವುಗಳನ್ನು ಸಂಪೂರ್ಣ ನೆಟ್ವರ್ಕ್‌ ರಹಿತ ಪ್ರದೇಶವೆಂದು ತೀರ್ಮಾನಿಸಿಲ್ಲ. ಅಲ್ಲಿಗೆ ಯಾವುದಾದರೂ ನೆಟ್ವರ್ಕ್‌ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಕೊನೆಗೂ ಆಗದಿದ್ದರೆ ಮತದಾನದ ದಿನ ಸಂವಹನ ನಡೆಸಲು ಬಿಸ್ಸೆನ್ನೆಲ್‌ ಎಫ್‌ಟಿಟಿಎಚ್‌ ಸಂಪರ್ಕ, ಪೊಲೀಸ್‌ ವಯರ್‌ಲೆಸ್‌ ಫೋನ್‌ ವ್ಯವಸ್ಥೆಯನ್ನು ಬಳಸಿ ಯಾವುದೇ ತೊಂದರೆ ಯಾಗದಂತೆ ನಿರ್ವಹಿಸ ಲಾಗುವುದು.
– ಕೂರ್ಮಾರಾವ್‌, ಜಿಲ್ಲಾ ಚುನಾವಣಾಧಿಕಾರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.