ಗಡಿ ಭಾಗದಲ್ಲಿ ಮಹಾ “ಡಬಲ್‌ ಅಟ್ಯಾಕ್‌’

ಉದ್ಧವ ಠಾಕ್ರೆ ನೇತೃತ್ವದ ಶಿವಸೇನೆ ಭಾವನಾತ್ಮಕ ಕಿತಾಪತಿ

Team Udayavani, Mar 18, 2023, 6:00 AM IST

ಗಡಿ ಭಾಗದಲ್ಲಿ ಮಹಾ “ಡಬಲ್‌ ಅಟ್ಯಾಕ್‌’

ಬೆಳಗಾವಿ: ಗಡಿ ಭಾಗ ಬೆಳಗಾವಿಯಲ್ಲಿ ಮತ್ತೊಮ್ಮೆ ಮಹಾರಾಷ್ಟ್ರದ ಭಾವನಾತ್ಮಕ ರಾಜಕಾರಣ ಸದ್ದು ಮಾಡುತ್ತಿದೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಈ ಸದ್ದು ಅಚ್ಚರಿ ಪಡುವಂಥದ್ದೇನಲ್ಲ.

ಕರ್ನಾಟಕದಲ್ಲಿ ಯಾವುದೇ ಸಾರ್ವತ್ರಿಕ ಚುನಾವಣೆ ಬಂದಾಗಲೊಮ್ಮೆ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ನೆರೆಯ ಮಹಾರಾಷ್ಟ್ರದ ಈ ರೀತಿಯ ಕುತಂತ್ರ ರಾಜಕಾರಣ ಇದ್ದೇ ಇರುತ್ತದೆ. ಪ್ರತಿ ಬಾರಿ ಹೊಸ ರೂಪ ಅಥವಾ ಕಾರ್ಯಸೂಚಿಯೊಂದಿಗೆ ಮಹಾರಾಷ್ಟ್ರ ಸರ್ಕಾರ ಅದರಲ್ಲೂ ವಿಶೇಷವಾಗಿ ಶಿವಸೇನೆ ಹಾಗೂ ಅಲ್ಲಿನ ರಾಜಕಾರಣಿಗಳು ಅಖಾಡಕ್ಕೆ ಇಳಿಯುತ್ತಾರೆ.

ಹಾಗೆ ನೋಡಿದರೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿನ ಹೀನಾಯ ಸೋಲು ಎಂಇಎಸ್‌ ಮತ್ತು ಶಿವಸೇನೆಗೆ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಎರಡೂ ಪಕ್ಷಗಳು ಗಾಯಗೊಂಡ ಹುಲಿಯಂತಾಗಿವೆ. ಈ ಸೋಲಿನ ಆಘಾತದಿಂದ ಹೊರಬರಬೇಕು ಎಂಬ ಉದ್ದೇಶದಿಂದ ಈಗ ಶಿವಸೇನೆ ಹೊಸ ಯೋಜನೆಗಳ ಮೂಲಕ ಗಡಿ ಭಾಗದ ಮರಾಠಿ ಭಾಷಿಕರನ್ನು ಓಲೈಸಲು ಮುಂದಾಗಿದೆ.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿಯ ಜನರು ಶಿವಸೇನೆಯ ಎರಡು ಬಣಗಳನ್ನು ಅರಗಿಸಿಕೊಳ್ಳಬೇಕು. ಒಂದು ಕಡೆ ಉದ್ಧವ ಠಾಕ್ರೆ ನೇತೃತ್ವದ ಶಿವಸೇನೆ ಪ್ರಚೋದನಕಾರಿ ಹೇಳಿಕೆ ಮತ್ತು ಭಾವನಾತ್ಮಕ ವಿಷಯಗಳ ಆಧಾರದ ಮೇಲೆ ಚುನಾವಣೆಗೆ ಬರುತ್ತಿದ್ದರೆ, ಇನ್ನೊಂದು ಕಡೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನೆ ಬಣ ಸರ್ಕಾರದ ಕಾರ್ಯಕ್ರಮಗಳ ಮೂಲಕ ಕರ್ನಾಟಕದಲ್ಲಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದೆ.

ಶಿವಸೇನೆಗೆ ಮರಾಠಿ ಆಸ್ಮಿತೆ:
ಶಿವಸೇನೆಗೂ ಮತ್ತು ಬೆಳಗಾವಿ ಗಡಿ ಭಾಗದ ಚುನಾವಣೆಗೂ ಸುಮಾರು ಐದು ದಶಕಗಳ ಇತಿಹಾಸವಿದೆ. 1960ರ ದಶಕದಲ್ಲಿ ಶಿವಸೇನೆ ವರಿಷ್ಠ ಬಾಳಾಸಾಹೇಬ ಠಾಕ್ರೆ ಮರಾಠಿ ಆಸ್ಮಿತೆ ಇಟ್ಟುಕೊಂಡು ರಾಜಕಾರಣ ಆರಂಭಿಸಿದರು. ಮುಂದೆ ಇದೇ ಶಿವಸೇನೆಗೆ ಮುಖ್ಯ ಬಂಡವಾಳವಾಯಿತು. 1966-67ರ ಸಮಯದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಪರಾಕಾಷ್ಠೆ ಹಂತ ತಲುಪಿದಾಗ ಬೆಳಗಾವಿ ಭಾಗಕ್ಕೆ ಬಂದಿದ್ದ ಬಾಳಾಸಾಹೇಬ ಠಾಕ್ರೆ ಶಿವಸೇನೆಯಿಂದ ಚುನಾವಣೆ ಎದುರಿಸಲಿಲ್ಲ. ಬದಲಾಗಿ ಎಂಇಎಸ್‌ಗೆ ಬೆಂಬಲವಾಗಿ ನಿಂತರು. ಅಲ್ಲಿಂದ ಇವತ್ತಿನವರೆಗೆ ಗಡಿ ಭಾಗದ ಬೆಳಗಾವಿಯ ಪ್ರತಿಯೊಂದು ಚುನಾವಣೆಯು ಮಹಾರಾಷ್ಟ್ರ ರಾಜಕೀಯ ನಾಯಕರ ನೇರ ಹಸ್ತಕ್ಷೇಪಕ್ಕೆ ಸಾಕ್ಷಿಯಾಗಿವೆ. ಮರಾಠಿ ಅಸ್ಮಿತೆಯನ್ನೇ ಮುಖ್ಯ ಗುರಿಯನ್ನಾಗಿ ಮಾಡಿಕೊಂಡು ಶಿವಸೇನೆ ಈ ಭಾಗದಲ್ಲಿ ಚುನಾವಣೆ ಮಾಡುತ್ತಾ ಬಂದಿದೆ. ಗಡಿ ಮತ್ತು ಭಾಷೆಯ ಹೆಸರಿನಲ್ಲಿ ಮರಾಠಿ ಭಾಷಿಕ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.

ಮರಾಠಿ ಅಸ್ಮಿತೆಯಿಂದ ಹಿಂದುತ್ವಕ್ಕೆ ಶಿಫ್ಟ್:
1980ರ ದಶಕದಲ್ಲಿ ಶಿವಸೇನೆಯ ಮುಖ್ಯ ಉದ್ದೇಶ ಮರಾಠಿ ಅಸ್ಮಿತೆಯಿಂದ ಹಿಂದುತ್ವ ವಿಷಯಕ್ಕೆ ಬದಲಾಯಿತು. ಆದರೆ ಕರ್ನಾಟಕ ಗಡಿ ಭಾಗದಲ್ಲಿ ತಮ್ಮ ಮೂಲ ಉದ್ದೇಶವನ್ನು ಬದಲಾಯಿಸಿಕೊಳ್ಳಲಿಲ್ಲ. ಮಹಾರಾಷ್ಟ್ರದಲ್ಲಿ ಹಿಂದುತ್ವದ ಆಧಾರದ ಮೇಲೆ ಚುನಾವಣೆ ಮಾಡುವ ಶಿವಸೇನೆ ಕರ್ನಾಟಕದಲ್ಲಿ ಮಾತ್ರ ಮರಾಠಿ ಅಸ್ಮಿತೆ ವಿಷಯದ ಮೇಲೆ ರಾಜಕಾರಣ ಮಾಡುತ್ತಲೇ ಬಂದಿದೆ. ಇದೇ ಕಾರಣದಿಂದ ಆಗಾಗ ಗಡಿ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮವಾಗುತ್ತಲೇ ಬಂದಿದೆ.

ರಾಜಕೀಯ ಗಿಮಿಕ್‌:
ಗಡಿ ಪ್ರದೇಶದಲ್ಲಿನ ಮರಾಠಿ ಭಾಷಿಕ ಮತದಾರರ ಜತೆ ಮರಾಠಿಯೇತರ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಒಂದಲ್ಲಾ ಒಂದು ಹೊಸ ಯೋಜನೆ ಪ್ರಕಟಿಸುತ್ತಲೇ ಬಂದಿದೆ. ಗಡಿ ಭಾಗದ ಹಳ್ಳಿಗಳ ಜನರಿಗೆ ವಿಶೇಷ ಅನುದಾನ, ಯೋಜನೆ ಜಾರಿ ಮಾಡುತ್ತಿದೆ. ಈಗ ಇದಕ್ಕೆ ಮಹಾತ್ಮಾ ಫ‌ುಲೆ ಆರೋಗ್ಯ ವಿಮೆ ಕಾರ್ಡ್‌ ಯೋಜನೆ ಸೇರಿಕೊಂಡಿದೆ. ಇದು ರಾಜಕೀಯ ಗಿಮಿಕ್‌ ಅಲ್ಲದೇ ಮತ್ತೇನೂ ಅಲ್ಲ ಎಂಬುದು ಶಿವಸೇನೆಯನ್ನು ಹತ್ತಿರದಿಂದ ನೋಡಿದವರ ಅಭಿಪ್ರಾಯ. ಇದಕ್ಕೆ ಮುಖ್ಯ ಕಾರಣ ಈಗಾಗಲೇ ಗಡಿ ಪ್ರದೇಶದಲ್ಲಿನ ಶೇ.50ರಷ್ಟು ಮರಾಠಿ ಭಾಷಿಕ ಜನರು ಮುಖ್ಯ ವಾಹಿನಿಗೆ ಬಂದು ಹಿಂದುತ್ವದ ಹೆಸರಿನಲ್ಲಿ ರಾಷ್ಟ್ರೀಯ ಪಕ್ಷಗಳನ್ನು ವಿಶೇಷವಾಗಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ತಮ್ಮನ್ನು ಬಿಟ್ಟು ಬಿಜೆಪಿ ಜತೆ ಹೋಗಿರುವ ಮರಾಠಿ ಭಾಷಿಕರನ್ನು ಮರಳಿ ಕರೆತರುವ ಸವಾಲು ಶಿವಸೇನೆ ಮುಂದಿದೆ. ಹೀಗಾಗಿ ಆರೋಗ್ಯ ವಿಮೆಯಂತಹ ಯೋಜನೆಗಳನ್ನು ಪ್ರಕಟಿಸಿ ಈ ಜನರನ್ನು ಸೆಳೆಯಲು ಪ್ರಯತ್ನ ನಡೆಸಿದೆ.

ಅಭಿವೃದ್ಧಿ ಕಾರ್ಯಗಳ ವಿರುದ್ಧ ಪ್ರತಿಭಟನೆ!
ಮರಾಠಿ ಭಾಷಿಕ ಮತ್ತು ಮರಾಠಿಯೇತರ ಜನರನ್ನು ಸೆಳೆಯುವ ಉದ್ದೇಶದಿಂದ ಶಿವಸೇನೆ ಮತ್ತು ಎಂಇಎಸ್‌ ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಭಿವೃದ್ಧಿ ಕಾರ್ಯಗಳ ವಿರುದ್ಧ ಪ್ರತಿಭಟನೆ ಮಾಡುತ್ತ ಬಂದಿದೆ. ಜನರನ್ನು ಎತ್ತಿ ಕಟ್ಟುತ್ತಿದೆ. ರಿಂಗ್‌ ರೋಡ್‌ ನಿರ್ಮಾಣದ ವಿಷಯದಲ್ಲಿ ರೈತರನ್ನು ಎತ್ತಿ ಕಟ್ಟಿ ಯೋಜನೆಗೆ ಅಡ್ಡಿಯಾಗುತ್ತಿದೆ. ಈಗ ಆರೋಗ್ಯ ವಿಮೆ ಕಾರ್ಡ್‌ ಯೋಜನೆಯಲ್ಲೂ ಶಿವಸೇನೆ ಇದೇ ರಾಜಕಾರಣಕ್ಕೆ ಮುಂದಾಗಿದೆ. ಕರ್ನಾಟಕದ 865 ಹಳ್ಳಿಗಳಲ್ಲಿ ಜಾರಿ ಮಾಡಲು ಉದ್ದೇಶಿಸಿರುವ ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಯೋಜನೆ ಜಾರಿ ಮಾಡಲು ಸಾಧ್ಯವಾಗದೇ ಇದ್ದರೆ ಆಗ ಕರ್ನಾಟಕ ಸರ್ಕಾರ ಮರಾಠಿ ಭಾಷಿಕ ಮತ್ತು ಮರಾಠಿಯೇತರ ಜನರ ವಿರುದ್ಧವಾಗಿದೆ ಎಂದು ಬಿಂಬಿಸುವುದು ಮತ್ತು ಮುಂದೆ ಇದನ್ನೇ ಚುನಾವಣೆ ವಿಷಯವನ್ನಾಗಿ ಮಾಡಿಕೊಳ್ಳುವುದು ಶಿವಸೇನೆಯ ದೂರಾಲೋಚನೆ. ಮರಾಠಿ ಭಾಷಿಕ ಮತ್ತು ಗಡಿ ಪ್ರದೇಶದ ಜನರು ಶಿವಸೇನೆಯ ಈ ರಾಜಕೀಯ ಕುತಂತ್ರಕ್ಕೆ ಯಾವ ರೀತಿ ಮನ್ನಣೆ ಕೊಡುತ್ತಾರೆ ಎಂಬ ಕುತೂಹಲದ ಪ್ರಶ್ನೆ ಈಗ ಎಲ್ಲರಲ್ಲಿದೆ.

-ಕೇಶವ ಆದಿ

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.