ಅಣ್ಣ-ತಮ್ಮ; ಮಾವ-ಅಳಿಯ..!: Election ಅಖಾಡಕ್ಕೆ ರೆಡಿ

ರಾಜ್ಯದ ಗಮನ ಸೆಳೆದ ಕ್ಷೇತ್ರ... ಮತದಾರನೇ ಸೋಲ್ತಾನೇನೋ ಎಂಬ ಮಾತು...

Team Udayavani, Apr 14, 2023, 6:01 PM IST

1-sadssad

ಬಾಗಲಕೋಟೆ : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಸವನಾಡು ಬಾಗಲಕೋಟೆ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯಲಿದೆ. ಚುನಾವಣೆಯಲ್ಲಿ ಅಣ್ಣನಿಗೆ ತಮ್ಮ ಬಂಡಾಯವೆದ್ದರೆ, ಮಾವನಿಗೆ ಅಳಿಯ ತೊಡೆ ತಟ್ಟಲು ಸಜ್ಜಾಗಿದ್ದಾರೆ.

ಹೌದು, ಚುನಾವಣೆ ಅಂದಾಕ್ಷಣ, ದಾಯಾದಿಗಳು ಸಹೋದರರು, ಸಹೋದರರು ದಾಯಾದಿಗಳಾಗುವುದು ಸಹಜ. ತಂದೆ-ಮಗ, ಅಣ್ಣ-ತಮ್ಮ ಪರಸ್ಪರ ವಿರುದ್ಧವಾಗಿ ಚುನಾವಣೆಗೆ ಸ್ಪರ್ಧಿಸುವುದು ವಿರಳ. ಆದರೆ, ಬಾಗಲಕೋಟೆಯಲ್ಲಿ ಅಣ್ಣ-ತಮ್ಮ ಹಾಗೂ ಮಾವ-ಅಳಿಯ ಸ್ಪರ್ಧೆಗೆ ಸಜ್ಜಾಗಿದ್ದಾರೆ.

ಒಂದೇ ಕ್ಷೇತ್ರದಲ್ಲಿ ಈ ವಿಶೇಷ
ಸಹೋದರರು ಬೇರೆ ಬೇರೆ ಕ್ಷೇತ್ರದಲ್ಲಿ, ಬೇರೆ ಬೇರೆ ಪಕ್ಷದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ. ಕೆಲವೆಡೆ ಪರಸ್ಪರ ವಿರುದ್ಧವಾಗಿಯೂ ಸ್ಪರ್ಧಿಸಿದ ಉದಾಹರಣೆಗಳಿವೆ. ಆದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಈ ಬಾರಿ, ಅಣ್ಣನ ವಿರುದ್ಧ ತಮ್ಮ ಸ್ಪರ್ಧೆ ಮಾಡಿದರೆ, ಮಾವನ ವಿರುದ್ಧ ಅಳಿಯ ಸ್ಪರ್ಧೆ ಮಾಡುತ್ತಿದ್ದಾರೆ.

ಅಣ್ಣ-ತಮ್ಮ ಸ್ಪರ್ಧೆ
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ|ವೀರಣ್ಣ ಚರಂತಿಮಠ ಅವರ ವಿರುದ್ಧ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ, ಚುನಾವಣೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಎ.17ರಂದು ನಾಮಪತ್ರ ಸಲ್ಲಿಸುವುದಾಗಿಯೂ ಹೇಳಿದ್ದಾರೆ. ಚರಂತಿಮಠ ಕುಟುಂಬದ ವೀರಣ್ಣ ಚರಂತಿಮಠ ಹಿರಿಯರಾಗಿದ್ದು, ಒಟ್ಟು ಮೂವರು ಸಹೋದರರು, ಇಬ್ಬರು ಸಹೋದರಿಯರಿದ್ದಾರೆ. ಕೊನೆಯ ಸಹೋದರ ಮಲ್ಲಿಕಾರ್ಜುನ ಚರಂತಿಮಠ, ಖಾಸಾ ಅಣ್ಣನ ವಿರುದ್ಧ ಬಹಿರಂಗ ಸಮರಕ್ಕೆ ನಿಂತಿದ್ದಾರೆ. ಇದೇ ಮಲ್ಲಿಕಾರ್ಜುನ ಚರಂತಿಮಠರು, ಹಿಂದೆ ನಾಲ್ಕೈದು ಚುನಾವಣೆಯಲ್ಲಿ ಅಣ್ಣನ ಗೆಲುವಿಗಾಗಿ ಹಳ್ಳಿ ಹಳ್ಳಿಗೆ ತಿರುಗಾಡಿ ಪ್ರಚಾರ ಮಾಡಿದವರು. ನಮ್ಮಣ್ಣ ಬಿಜೆಪಿ ಪಕ್ಷವನ್ನು, ಬಾಗಲಕೋಟೆಯ ಪ್ರತಿಷ್ಠಿತ ಬಿವಿವಿ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗಾಗಿ ದುಡಿದ ಕಾರ್ಯಕರ್ತರನ್ನು ಕಾಲಕಸ ಮಾಡಿದ್ದಾರೆ ಎಂಬುದು ತಮ್ಮನ ಆರೋಪ.

ಇನ್ನು ಕೌಟುಂಬಿಕ ವಿಷಯದ ಭಿನ್ನಮತ, ರಾಜಕೀಯಕ್ಕೆ ತರುವುದು ಸರಿಯಲ್ಲ ಎಂಬುದು ಅಣ್ಣನ ಬೆಂಬಲಿಗರ ಅನಿಸಿಕೆ. ಒಟ್ಟಾರೆ, ಬಾಗಲಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ, ಹಾಲಿ ಶಾಸಹಕರ ಸಹೋದರನೇ ಸ್ಪರ್ಧೆಗಿಳಿದಿದ್ದಾರೆ. ಸಹೋದರರ ಸವಾಲ್, ಬಾಗಲಕೋಟೆಯ ಜನರಿಗೆ ಕುತೂಹಲ ಕೆರಳಿಸುತ್ತಲೇ ಇದೆ.

ಮಾವನ ವಿರುದ್ಧ ಅಳಿಯ
ಕಾಂಗ್ರೆಸ್‌ನಲ್ಲೂ ಮಾವ-ಅಳಿಯ ಪರಸ್ಪರ ಎದುರಾಳಿಗಳಾಗಿ ರಾಜಕೀಯ ಅಖಾಡಕ್ಕಿಳಿಲು ಸಜ್ಜಾಗಿದ್ದಾರೆ. ಕಾಂಗ್ರೆಸ್‌ನಿಂದ ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್.ವೈ. ಮೇಟಿಗೆ ಟಿಕೆಟ್ ನೀಡಿದ್ದು, ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದ, ಸಂಬಂಧದಲ್ಲಿ ಮೇಟಿ ಅವರ ಅಳಿಯ ಡಾ|ದೇವರಾಜ ಪಾಟೀಲ, ಜೆಡಿಎಸ್ ಸೇರ್ಪಡೆಗೊಂಡಿದ್ದು, ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಕಳೆದ 2008ರಿಂದ ಪಕ್ಷಕ್ಕಾಗಿ, ಮೇಟಿ ಅವರಿಗಾಗಿ ದುಡಿದ್ದು, ಎರಡು ಬಾರಿ ಟಿಕೆಟ್ ಕೊಟ್ಟು ಕಸಿದುಕೊಂಡಿದ್ದಾರೆ. ನಾನು ರಾಜಕೀಯ ಗುರುಗಳು ಎಂದು ಭಾವಿಸಿದವರೇ ನನಗೆ ಅನ್ಯಾಯ ಮಾಡಿದ್ದಾರೆ. ಸ್ವಾಭಿಮಾನಿ ಕಾರ್ಯಕರ್ತರೊಂದಿಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಮೇಟಿ ಅವರ ಅಳಿಯ ಡಾ|ಪಾಟೀಲ ಹೇಳಿಕೊಂಡಿದ್ದಾರೆ.

ಒಟ್ಟಾರೆ, ಈ ಬಾರಿ 224 ಕ್ಷೇತ್ರಗಳಲ್ಲಿ ಬಾಗಲಕೋಟೆ ಕ್ಷೇತ್ರದ ಚುನಾವಣೆ ಮಾತ್ರ ರಂಗೇರಲಿದೆ. ಒಂದೆಡೆ ಸಹೋದರರ ಸವಾಲ್ ನಡೆದರೆ, ಇನ್ನೊಂದೆಡೆ ಮಾವ-ಅಳಿಯ ರಾಜಕೀಯ ಕುಸ್ತಿ ನಡೆಯಲಿದೆ. ನಾಲ್ವರೂ, ಈ ಬಾರಿ ನಾನೇ ಗೆಲ್ಲೋದು ಎನ್ನುತ್ತಿದ್ದಾರೆ. ಮೇ 10ರ ಬಳಿಕ ಮತದಾರನೇ ಸೋಲ್ತಾನೇನೋ ಎಂಬ ಮಾತು ಪ್ರಜ್ಞಾವಂತರಿಂದ ಕೇಳಿ ಬರುತ್ತಿದೆ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.