Coastal Karnataka Election 2023; ಕರಾವಳಿಯಲ್ಲೂ ಬಂಡಾಯ ಪಕ್ಷೇತರರದ್ದೇ ಆತಂಕ!

ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷೇತರರಾಗಿ ನಿಲ್ಲುವ ಸಾಧ್ಯತೆ ಹೆಚ್ಚಿದೆ.

Team Udayavani, Apr 14, 2023, 10:51 AM IST

Coastal Karnataka Election 2023; ಕರಾವಳಿಯಲ್ಲೂ ಬಂಡಾಯ ಪಕ್ಷೇತರರದ್ದೇ ಆತಂಕ!

ಮಂಗಳೂರು: ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಘೋಷಣೆ ಮಾಡಿರುವ ಅಭ್ಯರ್ಥಿಗಳ ಬಗೆಗಿನ ಅಪಸ್ವರವೂ ಕರಾವಳಿಯಲ್ಲೂ ಕೇಳಿಬರುತ್ತಿದೆ.

ಈ ಬಾರಿ ಬಿಜೆಪಿಯಲ್ಲೂ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಪಕ್ಷದೊಳಗೆ ಅಸಮಾಧಾನ ಕಂಡು ಬರುತ್ತಿದೆ. ಕೆಲವೆಡೆ ಬಂಡಾಯದ ಸೂಚನೆಗಳೂ ಇವೆ. ಕಾಂಗ್ರೆಸ್‌ನಲ್ಲಿ ಈಗಾಗಲೇ ಘೋಷಣೆಯಾಗಿರುವ ಕೆಲವು ಕ್ಷೇತ್ರಗಳಲ್ಲಿ
ಅಪಸ್ವರ, ವಿರೋಧದ ಅಲೆ ದಟ್ಟವಾಗಿದೆ. ಉಡುಪಿ ಕ್ಷೇತ್ರದಲ್ಲಿ ಈಗಾಗಲೇ ಘೋಷಿತ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಎದುರು ಕೃಷ್ಣಮೂರ್ತಿ ಆಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ. ಸುಳ್ಯದಲ್ಲೂ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಎದುರು ನಂದಕುಮಾರ್‌ ಬಂಡಾಯ ಏಳುವ ಲಕ್ಷಣ ತೋರಿದ್ದಾರೆ.

ಕರಾವಳಿಯ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ವರಿಷ್ಠರು ಸಾಕಷ್ಟು ಬಾರಿ ಚರ್ಚೆ, ವಿಮರ್ಶೆ, ಪರಾಮರ್ಶೆ ನಡೆಸಿ ಟಿಕೆಟ್‌ ಅಂತಿಮಗೊಳಿಸಿದ್ದರೂ ಬಂಡಾಯದ ಭೀತಿ ದೂರವಾಗಿಲ್ಲ. ಬಿಜೆಪಿಯಲ್ಲಿ ಈಗಾಗಲೇ ಎಲ್ಲ ಕ್ಷೇತ್ರಗಳ ಟಿಕೆಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಬೈಂದೂರಿನಲ್ಲಿ ಬಂಡಾಯವೋ ಅಧಿಕೃತ ಅಭ್ಯರ್ಥಿಗೆ ಬೆಂಬಲವೋ ಎಂಬುದು ಒಂದೆರಡು ದಿನಗಳಲ್ಲಿ ಗೊತ್ತಾಗಲಿದೆ.

ಉಡುಪಿ ಮತ್ತು ಕಾಪುವಿನಲ್ಲೂ ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಆದರೆ ಕಾಪುವಿನಲ್ಲಿ ಲಾಲಾಜಿ ಆರ್‌ ಮೆಂಡನ್‌ ಘೋಷಿತ ಪಕ್ಷದ ಅಭ್ಯರ್ಥಿ ಸುರೇಶ್‌ ಶೆಟ್ಟಿ ಗುರ್ಮೆ ಅವರೊಂದಿಗೆ ಬುಧವಾರವೇ ಜಂಟಿ ಪತ್ರಿಕಾಗೋಷ್ಟಿ ನಡೆಸಿ ಬೆಂಬಲ ಸೂಚಿಸಿದರು. ಉಡುಪಿಯಲ್ಲಿ ಕೆ. ರಘುಪತಿ ಭಟ್‌ ಪಕ್ಷದ ನಾಯಕರ ನಡೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರೂ ಗುರುವಾರ ಪಕ್ಷದ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬೆಂಬಲ ನೀಡಿದ್ದಾರೆ. ಈ ಮೂಲಕ ಸಂಭವನೀಯ ಬಂಡಾಯ ತಣ್ಣಗಾಗಿದೆ.

ಹಾಗೆಯೇ ದಕ್ಷಿಣ ಕನ್ನಡದಲ್ಲಿ ಪುತ್ತೂರಿನಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಅವರ ಬಂಡಾಯ ಸಾಧ್ಯತೆ ಕಡಿಮೆ. ಆದರೆ ಮತ್ತೊಬ್ಬ ಟಿಕೆಟ್‌ ಆಕಾಂಕ್ಷಿ ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷೇತರರಾಗಿ ನಿಲ್ಲುವ ಸಾಧ್ಯತೆ ಹೆಚ್ಚಿದೆ.

ಕರಾವಳಿಯ ಚುನಾವಣ ಇತಿಹಾಸವನ್ನು ಗಮನಿಸಿದರೆ, ಇಲ್ಲಿ ಬಂಡಾಯ ಅಥವಾ ಪಕ್ಷೇತರರಾಗಿ ಗೆದ್ದವರು ಅಪರೂಪವಾದರೂ ಈ ವಿರೋಧದ ಅಲೆ, ಬಂಡಾಯದ ಬಿಸಿ ಮಾತ್ರ ಪಕ್ಷಗಳನ್ನು ಹುಬ್ಬೇರಿಸುವಂತೆ ಮಾಡಿರುವ ಉದಾಹರಣೆಗಳಿವೆ. ಬ್ರಹ್ಮಾವರ ಕ್ಷೇತ್ರದಲ್ಲಿ ಜಯಪ್ರಕಾಶ್‌ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರೆ, ಕೆ. ಜಯಪ್ರಕಾಶ್‌ ಹೆಗ್ಡೆ ಪಕ್ಷೇತರರಾಗಿ ಸತತ 2 ಬಾರಿ ವಿಜಯದ ಮಾಲೆ ಧರಿಸಿರುವುದು ಇತಿಹಾಸ.

ಇದಲ್ಲದೆ ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರರಾಗಿ ಗೆದ್ದಿದ್ದರು. ಪುತ್ತೂರಿನಲ್ಲಿ 2004ರಲ್ಲಿ ಬಿಜೆಪಿಯಿಂದ ಗೆದ್ದಿದ್ದ ಶಕುಂತಳಾ ಶೆಟ್ಟಿ 2008ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದರು. ಆದರೆ ಈ ಚುನಾವಣೆಯಲ್ಲಿ 25,171 ಮತಗಳನ್ನು ಪಡೆಯುವ ಮೂಲಕ ಅವರು ತೃತೀಯ ಸ್ಥಾನದಲ್ಲಿದ್ದು, ಗೆದ್ದ ಅಭ್ಯರ್ಥಿಯ ಮತಗಳ ಅಂತರವನ್ನು ಕಡಿಮೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಅಂಥದ್ದೇ ಪರಿಸ್ಥಿತಿ ಈ ಬಾರಿ ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಕಂಡುಬರಲಿದೆಯೇ ಎಂಬ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.