![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 26, 2023, 10:04 AM IST
ಮೈಸೂರು: ರಾಜ್ಯ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ. ಸುಪ್ರೀಂಕೋರ್ಟ್ಗೆ ಅಫಿಡೆವಿಟ್ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆ ಆಗಿದೆ. ಇದು ಡಬಲ್ ಇಂಜಿನ್ ದೋಖಾ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ ಮಾಡಿದರು.
ಮೈಸೂರಿನಲ್ಲಿ, ಡಿಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ 9 ಪ್ರಶ್ನೆಗಳನ್ನು ಕೇಳಿದರು.
ರಣದೀಪ್ ಸಿಂಗ್ ಸುರ್ಜೇವಾಲಾ 9 ಪ್ರಶ್ನೆಗಳು:
ನಾನು ರಕ್ತದಲ್ಲಿ ಬರೆದುಕೊಡುತ್ತೇನೆ: ಡಿಕೆಶಿ
ಮೈಸೂರು: ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸಪಡಿಸಿದರು.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ ? ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದರು.
ಎಂಎಲ್ಸಿ ದಿನೇಶ್ ಗೂಳಿಗೌಡ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಎಂ.ಲಕ್ಷ್ಮಣ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.