ಏನೇ ಆದರೂ ನಾವು ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ: DK Shivakumar


Team Udayavani, Apr 12, 2023, 1:18 PM IST

ಏನೇ ಆದರೂ ನಾವು ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ: DK Shivakumar

ಬೆಂಗಳೂರು: ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ. ಬಿಜೆಪಿಯವರು ಚದುರಂಗದ ದಾಳಗಳನ್ನು ಉರುಳಿಸುತ್ತಿದ್ದಾರೆ. ಉರುಳಿಸಲಿ ಬಿಡಿ. ಅವರಿಗೆ ಶುಭವಾಗಲಿ. ರಾಜಕಾರಣದಲ್ಲಿ ಪ್ರತಿಸ್ಪರ್ಧೆ ಇರಬೇಕು. ಇಂತಹ ಹೋರಾಟ ನನಗೆ ಹೊಸತಲ್ಲ. ನಾನು 1985ರಲ್ಲಿ ದೇವೇಗೌಡರ ವಿರುದ್ಧ ಹೋರಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧವೂ ಹೋರಾಡಿದ್ದೆ. ಈಗಲೂ ಹೋರಾಡುತ್ತೇನೆ. ನನ್ನ ಜೀವನ ಹೋರಾಟದಿಂದಲೇ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪದ್ಮನಾಭನಗರದಲ್ಲಿ ಅಶೋಕ್ ವಿರುದ್ಧ ದುರ್ಬಲ ಅಭ್ಯರ್ಥಿ ಕಣಕ್ಕಿಳಿಸಿದ್ದು, ಒಪ್ಪಂದ ಮಾಡಿಕೊಳ್ಳಲಾಗಿದೆಯಾ ಎಂಬ ಪ್ರಶ್ನೆಗೆ, ‘ನಾನು ಯಾರ ಜತೆಗೂ ಒಪ್ಪಂದ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಜೆಡಿಎಸ್ ನಿಂದ ನಾಯ್ಡು ಸಮುದಾಯದವರನ್ನು ಹಾಕಿದ್ದರು. ನಾವು ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಿದ್ದೆವು. ಆದರೆ ನಮ್ಮ ತಂತ್ರ ಫಲ ನೀಡಲಿಲ್ಲ. ನಾಯ್ಡು ಸಮುದಾಯದ ಅಭ್ಯರ್ಥಿ ಎರಡನೇ ಸ್ಥಾನ ಪಡೆದು ನಮ್ಮ ಅಭ್ಯರ್ಥಿ ಮೂರನೇ ಸ್ಥಾನ ಪಡೆದಿದ್ದರು. ಬೆಂಗಳೂರಿನಲ್ಲಿ ಅತಿ ಹೆಚ್ಚು ನಾಯ್ಡು ಸಮುದಾಯದ ಜನರು ಇರುವುದು ಪದ್ಮನಾಭನಗರದಲ್ಲಿ. ಪಕ್ಷದ ಅಭ್ಯರ್ಥಿಯಾಗಿರುವವರು ಪಕ್ಷದ ಪ್ರಮುಖ ಕಾರ್ಯಕರ್ತ. ಯಾರೂ ಇಲ್ಲದ ಸಂದರ್ಭದಲ್ಲೂ ಆತ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಈ ಕ್ಷೇತ್ರದಲ್ಲಿ ಕನಕಪುರದಿಂದ ಬಂದು ನೆಲೆಸಿರುವ ಮತದಾರರೂ ಇದ್ದಾರೆ. ಅಲ್ಪಸಂಖ್ಯಾತರು ಇದ್ದಾರೆ. ಅಶೋಕ್ ವಿರುದ್ಧ ಅನೇಕ ಅಸಮಾಧಾನಗಳಿವೆ. ಹೀಗಾಗಿ ಪದ್ಮನಾಭನಗರದಲ್ಲಿ ಅಶೋಕ್ ಸೋಲನುಭವಿಸಿ, ನಮ್ಮ ಅಭ್ಯರ್ಥಿ ಗೆಲುವು ದಾಖಲಿಸಲಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ: ಎಲ್ಲರೂ ಜೊತೆಗೂಡಿ ಕಾಪು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ : Lalaji R Mendon

ಪದ್ಮನಾಭನಗರದಲ್ಲಿ ಬೇರೆ ಅಭ್ಯರ್ಥಿ ಹಾಕುತ್ತೀರಾ, ಸುರೇಶ್ ಅವರನ್ನು ಕಣಕ್ಕಿಳಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ‘ಸುರೇಶ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಡ ಇದೆ. ಆದರೆ ಪಕ್ಷ ಈಗಾಗಲೇ ರಘುನಾಥ್ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರೇ ಸ್ಪರ್ಧಿಸುತ್ತಾರೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಹಾಕುತ್ತೀರಾ? ವಿನಯ್ ಕುಲಕರ್ಣಿ ಅವರ ಹೆಸರು ಚರ್ಚೆಯಾಗಿದೆಯಲ್ಲ ಎಂಬ ಪ್ರಶ್ನೆಗೆ, ‘ವಿನಯ್ ಕುಲಕರ್ಣಿ ಪ್ರಬಲ ನಾಯಕರು. ಅವರ ಹೆಸರನ್ನು ಧಾರವಾಡ ಕ್ಷೇತ್ರಕ್ಕೆ ಘೋಷಣೆ ಮಾಡಿದ್ದೇವೆ. ಅವರ ಕಾರ್ಯಕರ್ತರ ಜತೆ ಮಾತನಾಡುತ್ತೇವೆ’ ಎಂದು ತಿಳಿಸಿದರು.

ಬಿಜೆಪಿ ಹಾಗೂ ನಿಮ್ಮ ಪಟ್ಟಿ ನೋಡಿದರೆ ಅಲೆ ಯಾರ ಪರವಾಗಿದೆ ಎಂದು ಕೇಳಿದಾಗ, ‘ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ’ ಎಂದು ತಿಳಿಸಿದರು.

ಬಿಜೆಪಿ ಅಸಮಾಧಾನಿತರು ನಿಮ್ಮನ್ನು ಸಂಪರ್ಕಿಸಿದ್ದರಾ ಎಂಬ ಪ್ರಶ್ನೆಗೆ, ‘ನಾನು ಈಗಲೇ ಯಾರ ವಿಚಾರವನ್ನೂ ಮಾತನಾಡುವುದಿಲ್ಲ. ಬಿಜೆಪಿಯಲ್ಲಿ ಸರಣಿ ರಾಜೀನಾಮೆ ನೀಡಲಾಗುತ್ತಿದೆ. ನಾವು ಯಾರ ಸಂಪರ್ಕದಲ್ಲೂ ಇಲ್ಲ. ನಮ್ಮ ಶಾಸಕರು, ಕಾರ್ಯಕರ್ತರ ಜತೆ ಮಾತುಕತೆ ನಡೆಸಿದ್ದೇವೆ ಎಂದರು.

ಟಾಪ್ ನ್ಯೂಸ್

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.