ತಂದೆ-ಮಗ, ಪತಿ-ಪತ್ನಿ ಸಚಿವರಾಗಿದ್ದರು


Team Udayavani, Mar 4, 2023, 5:30 AM IST

ತಂದೆ-ಮಗ, ಪತಿ-ಪತ್ನಿ ಸಚಿವರಾಗಿದ್ದರು

ವಿಜಯಪುರ: ಜಿಲ್ಲೆಯಲ್ಲಿ ರಾಜಕೀಯ ಪ್ರಭಾವಿ ಹಾಗೂ ಪ್ರತಿಷ್ಠೆ ಹೊಂದಿರುವ ಕೆಲವು ಕ್ಷೇತ್ರಗಳಲ್ಲಿ ಕುಟುಂಬ ರಾಜಕೀಯ ಹಾಗೂ ಅಧಿಕಾರದ ಭಾಗ್ಯ ಲಭಿಸುತ್ತಲೇ ಬಂದಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರ ಈ ಹಿಂದೆ ತಿಕೋಟಾ ಕ್ಷೇತ್ರವಾಗಿತ್ತು. ಈ ಕ್ಷೇತ್ರದಿಂದ ಎಂ.ಬಿ.ಪಾಟೀಲ ಅವರ ತಂದೆ ಬಿ.ಎಂ.ಪಾಟೀಲ 1962, 1983, 1985, 1989ರಲ್ಲಿ ಗೆದ್ದಿದ್ದರೂ ಅವರಿಗೆ ಸಚಿವರಾಗುವ ಭಾಗ್ಯ ಲಭಿಸಿರಲಿಲ್ಲ.

ಆದರೆ 1967ರಲ್ಲಿ ವೀರೇಂದ್ರ ಪಾಟೀಲ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿ ದ್ದಾಗ ವಿಜಯಪುರ ನಗರ ಕ್ಷೇತ್ರದಿಂದ ಗೆದ್ದಿದ್ದ ಬಿ.ಎಂ.ಪಾಟೀಲ ಆರೋಗ್ಯ ಸಚಿವರಾ ಗಿದ್ದರು. ಅದಾದ ಬಳಿಕ ಬಿ.ಎಂ.ಪಾಟೀಲ ಅಕಾಲಿಕ ನಿಧನದಿಂದ ಅನಿರೀಕ್ಷಿತವಾಗಿ ರಾಜಕೀಯ ಪ್ರವೇಶಿಸಿದ ಪುತ್ರ ಎಂ.ಬಿ.ಪಾಟೀಲ ಬಬಲೇಶ್ವರ ಕ್ಷೇತ್ರದಿಂದ 2008ರಲ್ಲಿ ವಿಧಾನಸಭೆ ಪ್ರವೇಶಿಸಿದರು. 2008 ಹಾಗೂ 2013ರಲ್ಲಿ ಸತತವಾಗಿ ಗೆದ್ದಿದ್ದ ಅವರು ಸಿದ್ದರಾಮಯ್ಯ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದರು.

ಇದಾದ ಬಳಿಕ 2018ರಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಪತನದ ಬಳಿಕ ಎಂ.ಬಿ.ಪಾಟೀಲ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ರಾಜ್ಯ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಇದರೊಂದಿಗೆ ವಿಜಯಪುರ ನಗರ ಕ್ಷೇತ್ರವನ್ನು ಪ್ರತಿನಿಧಿ ಸಿದ್ದ ಬಿ.ಎಂ.ಪಾಟೀಲ ಹಾಗೂ ಅವರ ಮಗ ಬಬಲೇಶ್ವರ ಕ್ಷೇತ್ರವನ್ನು ಪ್ರತಿನಿಧಿ ಸುತ್ತಿರುವ ಎಂ.ಬಿ.ಪಾಟೀಲ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯಲ್ಲಿ ತಂದೆ-ಮಗ ಇಬ್ಬರೂ ಸಚಿವರಾದ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಜಿ.ಎಸ್‌.ದೇಶಮುಖ ಜೆಡಿಎಸ್‌ನಿಂದ ಮುದ್ದೇಬಿಹಾಳ ಕ್ಷೇತ್ರದಲ್ಲಿ 1978, 1983 ಹಾಗೂ 1985ರಲ್ಲಿ ಸತತ ಮೂರು ಬಾರಿ ಗೆಲುವು ಸಾಧಿ ಸಿದ್ದರು. ರಾಮಕೃಷ್ಣ ಹೆಗಡೆ ಸರಕಾರದಲ್ಲಿ ಸಚಿವರಾಗಿದ್ದರು.

ಜಿ.ಎಸ್‌.ದೇಶಮುಖ ನಿಧನದ ಬಳಿಕ ರಾಜಕೀಯ ಪ್ರವೇಶಿಸಿದ ಅವರ ಪತ್ನಿ ವಿಮಲಾಬಾಯಿ ದೇಶಮುಖ 1994ರಲ್ಲಿ ಶಾಕರಾಗಿ ಆಯ್ಕೆಯಾಗಿ, ಜನತಾದಳ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಪತಿ-ಪತ್ನಿ ಇಬ್ಬರೂ ಸಚಿವರಾಗಿದ್ದ ಹಿರಿಮೆ ದೇಶಮುಖ ದಂಪತಿ ಮೂಲಕ ದಾಖಲಾಗಿದೆ.

 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.