63 ಸಾವಿರ ವೆಚ್ಚ ಮಾಡಿ ಎಲೆಕ್ಷನ್‌ ಗೆದ್ದೆ!


Team Udayavani, Feb 23, 2023, 6:00 AM IST

63 ಸಾವಿರ ವೆಚ್ಚ ಮಾಡಿ ಎಲೆಕ್ಷನ್‌ ಗೆದ್ದೆ!

ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
1978ರಿಂದಲೇ ಸಾರ್ವಜನಿಕ ಜೀವನ ಪ್ರವೇಶ ಆಯಿತಾದರೂ ನಾನು ಮೊದಲ ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದು 1983 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಭಾರತೀಯ ಲೋಕದಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ.

ಸಮಾಜವಾದಿ ನಾಯಕರ ಒತ್ತಾಸೆ ಯಿಂದ ಮೊದಲ ಬಾರಿಗೆ ನಾನು ಚುನಾವಣೆ ಎದುರಿಸಿದ ಅನುಭವ ಅತ್ಯಂತ ವಿಶೇಷವಾದದ್ದು.

ನನ್ನ ಮೊದಲ ಚುನಾವಣೆಯಲ್ಲಿ ಹಣ ಅಥವಾ ಬೇರೆ ಸಂಪನ್ಮೂಲ ಅಷ್ಟು ಪ್ರಮುಖ ಅನಿಸಲಿಲ್ಲ. ಯಾಕೆಂದರೆ ಆಗ ಕಾರ್ಯಕರ್ತರಾಗಲಿ, ಮುಖಂಡರಾಗಲಿ ಏನನ್ನೂ ಬಯಸುತ್ತಿರಲಿಲ್ಲ.

ಪ್ರಚಾರಕ್ಕಾಗಿ ಹೋದರೆ ಜನರು ತುಂಬಾ ಪ್ರೀತಿಯಿಂದ ಕಾಣುತ್ತಿದ್ದರು. ಕೆಲವು ಮುಖಂಡರು ತಾವೇ ಕೈಯಿಂದ ಅಲ್ಪ ಸ್ವಲ್ಪ ಸಹಾಯ ಮಾಡುತ್ತಿದ್ದರು. ನನ್ನ ಮೊದಲ ಚುನಾವಣೆಯ ಒಟ್ಟಾರೆ ಖರ್ಚು 63 ಸಾವಿರ ರೂ. ಚುನಾವಣೆಯ ಖರ್ಚು, ವೆಚ್ಚದ ಬಗ್ಗೆ ಗಂಭೀರವಾಗಿ ಆಲೋಚಿಸುವ ಸನ್ನಿವೇಶವೇ ಅಂದಿನ ದಿನಗಳಲ್ಲಿ ಇರುತ್ತಿರಲಿಲ್ಲ.ನಮಗೆ ಆಗ ಚುನಾವಣೆ ನಡೆಸಲು ಹಣ ಬೇಕು ಎಂಬ ಪರಿಸ್ಥಿತಿ ಇರಲಿಲ್ಲ. ಜನರನ್ನು ತಲುಪುವುದು ಹೇಗೆ ಎಂಬುದೇ ದೊಡ್ಡ ಕೆಲಸ. ಹಳ್ಳಿಗಳಿಗೆ ಹೋದರೆ ತಡರಾತ್ರಿವರೆಗೂ ಜನರು ಕಾಯುತ್ತಾ ಸ್ಪಂದಿಸುತ್ತಿದ್ದರು. ಚುನಾವಣೆ ಎಂದರೆ ಒಂದು ರೀತಿಯಲ್ಲಿ ಗಂಭೀರತೆಯೂ ಇತ್ತು.

ಖರ್ಚು, ವೆಚ್ಚಕ್ಕಿಂತ ಪ್ರಚಾರದ ಕಡೆ ಅದರಲ್ಲಿಯೂ ಮತದಾರರನ್ನು ತಲಪುವ ರೀತಿ ಹೇಗೆ ಎಂಬುದರ ಬಗ್ಗೆಯೇ ಅಭ್ಯರ್ಥಿಗಳು ಆಲೋಚಿಸುತ್ತಿದ್ದ ದಿನಗಳವು. ಚುನಾವಣೆ ವೆಚ್ಚಕ್ಕಾಗಿ ಅಲ್ಪ ಸ್ವಲ್ಪ ಹಣ ಬೇಕಾದರೆ ಅಭಿಮಾನಿಗಳೇ ಚುನಾವಣ ವೆಚÌಕ್ಕೆಂದು ದೇಣಿಗೆ ಕೊಟ್ಟು ಹೋಗುತ್ತಿದ್ದ ಸಂದರ್ಭವನ್ನೂ ನೋಡಿದ್ದೇನೆ.

ಕಾರ್ಯಕರ್ತರು ಹಾಗೂ ಮುಖಂಡರು ಸ್ವಯಂ ಪ್ರೇರಿತರಾಗಿ ಊಟ-ತಿಂಡಿ ವ್ಯವಸ್ಥೆ ಮಾಡುತ್ತಿದ್ದರು. ಸಭೆ, ಸಮಾರಂಭಗಳಿಗೂ ಹೆಚ್ಚಿನ ಖರ್ಚು ಆಗುತ್ತಿರಲಿಲ್ಲ. ಹೀಗಾಗಿಯೇ ಮೊದಲ ಚುನಾವಣೆಯಲ್ಲಿ ನನ್ನ ವೆಚ್ಚ 63 ಸಾವಿರ ರೂಪಾಯಿ ಮಾತ್ರ. ಅನಂತರ 1985 ರಲ್ಲಿ ಎರಡನೇ ಬಾರಿ ಜನತಾಪಕ್ಷದಿಂದ ಸ್ಪರ್ಧೆ ಮಾಡಿದಾಗಲೂ ಹೆಚ್ಚಿನ ಮೊತ್ತ ಖರ್ಚಾಗಲಿಲ್ಲ.

ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇ ಕಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೂ ಅಪಾಯಕಾರಿ. ಎಲ್ಲರೂ ಇದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಾಧನೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಮತದಾರರ ಮುಂದೆ ಹೋಗಬೇಕು. ಮತ ದಾರರು ಇದರ ಮಾನದಂಡದಲ್ಲಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಆಗ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅರ್ಥ ಬರಲು ಸಾಧ್ಯ.

-ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.