karnataka polls 2023;ಅವಹೇಳನಕ್ಕೂ ಪ್ರಚಾರಕ್ಕೂ ಸಾಮಾಜಿಕ ಜಾಲತಾಣವೇ ಬಳಕೆ

ಫೇಕ್‌ ಅಕೌಂಟ್‌ ಸೃಷ್ಟಿಸಿ ಮಾನಹಾನಿಕರ ಪೋಸ್ಟ್‌

Team Udayavani, Apr 8, 2023, 3:42 PM IST

karnataka polls 2023;ಅವಹೇಳನಕ್ಕೂ ಪ್ರಚಾರಕ್ಕೂ ಸಾಮಾಜಿಕ ಜಾಲತಾಣವೇ ಬಳಕೆ

ಬೆಳ್ತಂಗಡಿ: ರಾಜಕೀಯ ನಾಯಕರ ಪರ ಪಕ್ಷಗಳ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡಿ ಮತಪ್ರಚಾರದಲ್ಲಿ ತೊಡಗಿರುವ ಮಧ್ಯಯೇ ಮತ್ತೊಂದೆಡೆ ಸಾಮಾಜಿಕ ಜಾಲ ತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮೂಲಕ ನಾಯಕರ, ಕಾರ್ಯಕರ್ತರ ತೇಜೋವಧೆಯೂ ನಡೆಯುತ್ತಿದೆ.

ಅಭಿವೃದ್ಧಿ ಪರ ಚಿಂತನೆಗಳೊಂದಿಗೆ ಸಮಾಜಕ್ಕೆ ಋಣಾತ್ಮಕ ಸಂದೇಶ ಸಾರುವುದು ಒಂದೆಡೆಯಾದರೆ, ನಕಲಿ ಖಾತೆಗಳನ್ನು ಹುಟ್ಟುಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ವರ್ಚಸ್ಸು ಕುಂದಿಸಲು ಮಾನಹಾನಿಕರ ಪೋಸ್ಟ್‌ ಹಾಕಿ ಕೀಳುಮಟ್ಟದ ಪ್ರಚಾರದಲ್ಲಿಯೂ ತೊಡಗಿರುವುದು ಕಂಡುಬರುತ್ತಿದೆ. ಹಿಂದೆಲ್ಲ ಆಡಳಿತ ಪಕ್ಷಗಳು ಮನೆ ಮನೆ ಭೇಟಿ, ಸಾಮಾಜಿಕ ಸಭೆಗಳಲ್ಲಿ ತಮ್ಮ ಕಾರ್ಯವೈಖರಿ ಹಾಗೂ ಮುಂದಿನ ಭರವಸೆಗಳನ್ನು ಮುಂದಿಟ್ಟು ಪ್ರಚಾರ ಮಾಡಿದರೆ ವಿಪಕ್ಷಗಳು ಆಡಳಿತ ಪಕ್ಷದ ವೈಫ‌ಲ್ಯವನ್ನು ಮುಂದಿಟ್ಟು ತಮ್ಮ ಭವಿಷ್ಯದ ಭರವಸೆ ಘೋಷಿಸಿ ಪ್ರಚಾರದಲ್ಲಿ ತೊಡಗುತಿದ್ದವು. ಅದೊಂದು ಸಭ್ಯ ರಾಜಕೀಯವೂ ಆಗಿತ್ತು.

ಆದರೆ ಇಂದು ಕಾಲ ಬದಲಾಗಿದೆ. ಸಾಮಾಜಿಕ ಜಾಲ ತಾಣಗಳ ಇತಿಮಿತಿ ಇಲ್ಲದೆ ವಾಕ್‌ ಸ್ವಾತಂತ್ರ್ಯದ ಹೆಸರಲ್ಲಿ ತೇಜೋವಧೆಗೆ ಕಾರಣವಾಗುತ್ತಿದೆ. ಪಕ್ಷದ ಸಿದ್ಧಾಂತ, ರಾಜಕೀಯ ಏಳಿಗೆಗೆ ಕಾರಣವಾದ ತಳಹದಿ ಬಗೆಗಿನ ಜ್ಞಾನವಿಲ್ಲದ ಕೆಲವರು ಪ್ರಚಾರದ ತೆವಲಿನಲ್ಲಿ ಕೀಳು ಮಟ್ಟದ ವ್ಯವಸ್ಥೆಗೆ ಇಳಿಯುತ್ತಿದ್ದಾರೆ. ಈ ಕುರಿತು ತಿಳಿ ಹೇಳಬೇಕಾದ ಹಿರಿಯರು ಮೂಖರಾಗಿದ್ದಾರೆ. ಕಾರಣ ಹಿರಿಯರ ಮಾತು ಕೇಳದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾಂಸಾರಿಕ ವಿಚಾರಗಳು, ವೈಯಕ್ತಿಕ ವಿಚಾರಗಳನ್ನು ಟೀಕೆಯ ಅಸ್ತÅಗಳನ್ನಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹರಿಬಿಡಲಾಗುತ್ತಿದೆ.

ಹೆಚ್ಚಿನ ಕಡೆ ನೂರಾರು ನಕಲಿ ಖಾತೆ ಸೃಷ್ಟಿಸಿ ಪಕ್ಷಗಳ ಮಧ್ಯೆ, ಕಾರ್ಯಕರ್ತರ ಮಧ್ಯೆ ವಾಗ್ವಾದಕ್ಕೆ ಕಾರಣವಾಗುತ್ತಿದೆ. ಇದು ಚುನಾವಣೆ ಮಾತ್ರವಲ್ಲದೆ ಸಮಾಜದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಒಬ್ಬರ ಮೇಲೆ ಒಬ್ಬರು ಆರೋಪಗೈಯುತ್ತಾ ತೀರಾ ವೈಯಕ್ತಿಕ ವಿಚಾರಗಳು ಚರ್ಚೆಯ ವಿಷಯವಾಗುತ್ತಿದೆ.
ತಮ್ಮ ನಾಯಕರ ಅಪಪ್ರಚಾರವನ್ನು ಸಹಿಸದ ಯುವ ಕಾರ್ಯಕರ್ತರ ಮಧ್ಯೆಯೇ ಸೇಡಿನ ರಾಜಕಾರಣವನ್ನು ಹುಟ್ಟು ಹಾಕುವಂತೆ ಮಾಡುತ್ತಿದೆ. ಇದು ಅಭಿವೃದ್ಧಿ ಪರ ರಾಜಕೀಯಕ್ಕೆ ಮಾರಕವಾಗಿದೆ ಎಂಬುದು ಹಿರಿಯ ಕಾರ್ಯಕರ್ತರ ಅಭಿಪ್ರಾಯ. ಇದುವರೆಗೆ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣಾಧಿಕಾರಿಗಳೂ ನಿಗಾ ಇಟ್ಟಂತಿಲ್ಲ. ಯಾವುದೇ ಪ್ರಕರಣ ದಾಖಲಾಗುತ್ತಿಲ್ಲ. ಒಂದೊಮ್ಮೆ ಪ್ರಕರಣ ದಾಖಲಾದರೆ ಇಂತಹ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುವವರಿಗೂ ಪಾಠವಾಗಲಿದೆ. ಸಭ್ಯ ರಾಜಕಾರಣಕ್ಕೆ ವೇದಿಕೆಯಾಗಲಿದೆ.

ಪರಿಶೀಲಿಸಿ ಕ್ರಮ
ಮಾನಹಾನಿಕರ ಪೋಸ್ಟ್‌ ಹಾಕಿರುವ ಕುರಿತಂತೆ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಧಿಕಾರಿಗಳು ಕೂಡ ನಿಗಾ ಇಟ್ಟಿರುತ್ತಾರೆ. ಗಮನಕ್ಕೆ ಬಂದ ಸಂದರ್ಭದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಪ್ರಕರಣ ಕಂಡಲ್ಲಿ ದೂರು ನೀಡಬೇಕು
-ಯೋಗೇಶ್‌ ಎಚ್‌.ಆರ್‌., ಚುನಾವಣಾಧಿಕಾರಿ ಬೆಳ್ತಂಗಡಿ

ಟಾಪ್ ನ್ಯೂಸ್

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.