karnataka polls 2023; ನಾಯಕರ ಮತಬೇಟೆ ಆಡಬಲ್ಲರೇ ಸುದೀಪ್‌?


Team Udayavani, Apr 10, 2023, 6:10 AM IST

karnataka polls 2023; ನಾಯಕರ ಮತಬೇಟೆ ಆಡಬಲ್ಲರೇ ಸುದೀಪ್‌?

ರಾಯಚೂರು: ಚುನಾವಣೆಯಲ್ಲಿ ಜಾತಿಗಳ ಪ್ರಾಬಲ್ಯ ಅಲ್ಲಗಳೆಯುವಂತಿಲ್ಲ. ಈ ಬಾರಿ ಬಿಜೆಪಿ ನಾಯಕ ಸಮುದಾಯದ ಮತಗಳ ಮೇಲೆ ತುಸು ಹೆಚ್ಚೇ ನಿಗಾ ವಹಿಸಿದ್ದು, ಈಚೆಗೆ ನಟ ಸುದೀಪ್‌ ಕೂಡ ಸಿಎಂ ಪರ ಬ್ಯಾಟಿಂಗ್‌ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯ ಸಾಕಷ್ಟು ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿದ್ದರೆ, 12 ಕ್ಷೇತ್ರ ಗಳು ಎಸ್‌ಟಿಗೆ ಮೀಸಲಾಗಿವೆ. ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ಸುದೀರ್ಘ‌ ಹೋರಾಟ ನಡೆಸಲಾಗಿತ್ತು. ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಬಿಜೆಪಿ ಸರ್ಕಾರ ಶೇ.7ರಷ್ಟು ಮೀಸಲಾತಿ ಹೆಚ್ಚಿಸುವ ಮೂಲಕ ಆ ಸಮುದಾಯದ ವಿಶ್ವಾಸ ಪಡೆಯಲೆತ್ನಿಸಿತು.

ಈಗ ನಟ ಕಿಚ್ಚ ಸುದೀಪ್‌ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲಿನ ಪ್ರೀತಿಗಾಗಿ ಪ್ರಚಾರ ಮಾಡುವುದಾಗಿ ಹೇಳಿರುವುದು ಕೂಡ ನಾಯಕ ಸಮುದಾಯದ ಮತ ಬೇಟೆಗಾಗಿಯೇ ಎನ್ನಲಾಗುತ್ತಿದೆ. ಆದರೆ, ಈ ಸಮುದಾಯ ಕೇವಲ ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಲ್ಲಿಯೂ ಪ್ರಭಾವಿ ಕಾರ್ಯಕರ್ತರು, ಮುಖಂಡರಿದ್ದಾರೆ.

ರಾಜ್ಯದಲ್ಲಿ ನಾಯಕ ಸಮುದಾಯದ ಜನಸಂಖ್ಯೆ 60 ಲಕ್ಷಕ್ಕೂ ಅಧಿ ಕ ಎಂದು ಅಂದಾಜಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲೇ ಏಳರಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳು ಎಸ್‌ಟಿ ಮೀಸಲಾಗಿದ್ದು, ಜಿಲ್ಲೆಯಲ್ಲಿಯೂ 1.5 ಲಕ್ಷ ಜನಸಂಖ್ಯೆಯಿದೆ. ಸಿನಿಮಾ ನಟರನ್ನು ಆರಾ ಧಿಸುವ ಜನ ಈ ಭಾಗದಲ್ಲಿದ್ದಾರೆ. ಸಿರವಾರ ಸಮೀಪದ ಕುರಕುಂದ ಗ್ರಾಮದಲ್ಲಿ ಕಳೆದ ವರ್ಷ ನಟ ಸುದೀಪ್‌ ಪ್ರತಿಮೆ ನಿರ್ಮಿಸಿ ದೇವಸ್ಥಾನವನ್ನೇ ಕಟ್ಟಲು ಅಭಿಮಾನಿಗಳು ಮುಂದಾಗಿದ್ದರು. ಕೊನೆಗೆ ಸುದೀಪ್‌ ಅವರೇ ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಇಂಥ ಅಭಿಮಾನ ಮತವಾಗಿ ಮಾರ್ಪಡಲಿದೆಯೇ ಎಂಬ ಲೆಕ್ಕಾಚಾರ ಶುರುವಾಗಿದೆ.

ವಾಸ್ತವ ಚಿತ್ರಣವೇ ಬೇರೆ
ನೆಚ್ಚಿನ ನಾಯಕ ಎಂಬ ವಿಷಯ ಬಂದಾಗ ಇರುವ ಅಭಿಮಾನ ರಾಜಕೀಯ ವಿಚಾರಕ್ಕೆ ಬಂದಾಗ ಗೌಣವಾಗುತ್ತದೆ. ಹಿಂದೆ ತೆಲುಗಿನ ಖ್ಯಾತ ನಟ ಪವನ್‌ ಕಲ್ಯಾಣ ಕೂಡ ರಾಯಚೂರು ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಆದರೆ, ಆಗ ಬಿಜೆಪಿಗೆ ಸೋಲಾಗಿತ್ತು. ಅಷ್ಟೇ ಯಾಕೆ ಮಳೆ ಹುಡುಗಿ ಪೂಜಾ ಗಾಂಧಿ  ಬಿಎಸ್ಸಾರ್‌ ಪಕ್ಷದಿಂದ ರಾಯಚೂರು ನಗರ ಕ್ಷೇತ್ರದಿಂದ ಸ್ಪಧಿ ìಸಿ ಠೇವಣಿ ಕಳೆದುಕೊಂಡಿದ್ದರು. ಈಚೆಗೆ ನಡೆದ ಮಸ್ಕಿ ಉಪಚುನಾವಣೆಯಲ್ಲಿ ಲಂಬಾಣಿ ಸಮಾಜದ ಗಾಯಕಿ ಮಂಗ್ಲಿ ಬಂದು ಪ್ರಚಾರ ಮಾಡಿದ್ದರೂ ಬಿಜೆಪಿಗೆ ಸೋಲಾಗಿತ್ತು. ಚುನಾವಣೆಗಳು ಸ್ಥಳೀಯ ವಿಷಯ, ವ್ಯಕ್ತಿಯಾಧಾರಿತವಾಗಿಯೇ ಇರುವುದರಿಂದ ಸುಲಭಕ್ಕೆ ಮತದಾರ ಬದಲಾಗುವುದು ಕಷ್ಟದ ವಿಚಾರ. ಹಾಗಂತ ನೆಚ್ಚಿನ ನಾಯಕರು ಬಂದು ಪ್ರಚಾರ ಮಾಡಿದಾಗ ಅಲ್ಪಸ್ವಲ್ಪವಾದರೂ ಬದಲಾವಣೆ ಆದರೂ ಆಗಬಹುದು. ಈಗ ಸುದೀಪ್‌ ಕೂಡ ಪ್ರಚಾರಕ್ಕೆ ಬರುವ ಮಾತನ್ನಾಡಿದ್ದಾರೆ. ಅವರು ಯಾವ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ; ಫಲಿತಾಂಶ ಏನಾಗಲಿದೆ ಕಾದು ನೋಡಬೇಕಿದೆ.

ನಾಯಕ ಸಮುದಾಯದ ಮತದಾರರು ಬಹಳ ಪ್ರಜ್ಞಾವಂತರಿದ್ದಾರೆ. ಕಿಚ್ಚ ಸುದೀಪ್‌ರನ್ನು ಒಬ್ಬ ನಟನಾಗಿ ಎಲ್ಲರೂ ಪ್ರೀತಿಸಿ ಗೌರವಿಸುವಂತೆ ನಾಯಕ ಸಮಾಜವು ಗೌರವಿಸುತ್ತದೆ. ಹಾಗಂತ ಚುನಾವಣೆಯಲ್ಲಿ ಇಡೀ ಸಮುದಾಯ ಅವರ ಕರೆಗೆ ಓಗೊಡಲಿದೆ ಎಂಬುದೆಲ್ಲ ಅಸಂಭವ. ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿ, ಪಕ್ಷಗಳ ಕೊಡುಗೆ, ಅಭಿವೃದ್ಧಿಗಳೇ ಮುಖ್ಯವಾಗುತ್ತದೆ.
-ರಘುವೀರ ನಾಯಕ, ವಾಲ್ಮೀಕಿ ಸಮಾಜದ ಮುಖಂಡ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.