ಕೊರಟಗೆರೆ: ಪರಮೇಶ್ವರ್ ಸೋಲಿಸಲು ಭಾವನಾತ್ಮಕ ಚಾಟಿ ಬೀಸಿದ ಹೆಚ್‌ಡಿಡಿ


Team Udayavani, Apr 24, 2023, 7:54 PM IST

1-wrewq

ಕೊರಟಗೆರೆ: ಲೋಕಸಭಾ ಚುನಾವಣೆಗೆ ನಾನು ನಿಲುವುದಿಲ್ಲ ಎಂದು ಹೇಳಿದೆ. ಆದರೇ ಕಾಂಗ್ರೆಸ್ ಪಕ್ಷದವರು ನನಗೇ ತುಮಕೂರಿಗೆ ಕರೆತಂದು ಸೋಲಿಸಿ ಅವಮಾನ ಮಾಡಿದರು.ಸೋಲಿಸಿ ಅವಮಾನ ಮಾಡಿದ ನೋವು ಇನ್ನೂ ಕಾಡುತ್ತಿದೆ. ನಮ್ಮೇಲ್ಲರ ಆತ್ಮೀಯ ಸುಧಾಕರ ಲಾಲ್ ಗೆಲ್ಲಿಸಿ ನನ್ನ ಕಣ್ಣೀರು ಒರೆಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಜೆಡಿಎಸ್ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಾನು 1994 ರಲ್ಲಿ ಸಿಎಂ ಆಗಿದ್ದಾಗ 11 ಕ್ಷೇತ್ರದಲ್ಲಿ 9 ಕ್ಷೇತ್ರ ಗೆಲ್ಲಿಸಿದ ತುಮಕೂರು ಜಿಲ್ಲೆಯ ಪುಣ್ಯಾತ್ಮರು ನೀವು. ಕಾಂಗ್ರೆಸ್ ನಾಯಕರು ನನಗೇ ಅವಮಾನ ಮಾಡಿದ ನೋವು ಇನ್ನೂ ನನ್ನನ್ನು ಕಾಡುತ್ತಿದೆ. ಸುಧಾಕರಲಾಲ್ ಬಡ ಕುಟಂಬದ ಒಬ್ಬ ಸಾಮಾನ್ಯ ಜೆಡಿಎಸ್ ಕಾರ್ಯಕರ್ತ.
25 ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಬಡ ಜನರ ಸೇವೆ ಮಾಡುತ್ತಿದ್ದಾನೆ. ನೀವು ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿದ್ದಿರಾ 2023 ಕ್ಕೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿ. ಕುಮಾರಸ್ವಾಮಿ ಸರಕಾರ ಸುಧಾಕರಲಾಲ್‌ಗೆ ವಿಶೇಷ ಸ್ಥಾನಮಾನ ನೀಡುತ್ತಾರೆ ಎಂದು ಭರವಸೆ ನೀಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಜೆಡಿಎಸ್ ಮುಸ್ಲಿಂ ಸಮಾಜಕ್ಕೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಯಾವುದೇ ಪಕ್ಷ ರಾಜ್ಯಾಧ್ಯಕ್ಷನ ಪಟ್ಟ ನೀಡಿಲ್ಲ ಆದರೇ ಜೆಡಿಎಸ್ ನನಗೇ ನೀಡಿದೆ. ಮುಸ್ಲಿಂ ಸಮಾಜ ಜೆಡಿಎಸ್ ಪಕ್ಷದ ಪರವಾಗಿ ಇರಬೇಕಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಗೆ ರೈತರ ಚಿಂತೆ ಆದರೇ ಪರಮೇಶ್ವರ್‌ಗೆ ಜೀರೋ ಟ್ರಾಫಿಕ್ ಚಿಂತೆ. ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಪರಮೇಶ್ವರ ಮಾತನಾಡಿದ್ರಾ ನೀವೇ ಹೇಳಿ. ಚುನಾವಣೆ ಭಾಷಣ ಮತ್ತು ೧ಸಾವಿರ ಹಣಕ್ಕೆ ನಾವು ಯಾಮಾರಬಾರದು ಎಂದು ಮನವಿ ಮಾಡಿದರು.

ತುಮಕೂರು ನಗರಕ್ಕೆ ಕಾಂಗ್ರೆಸ್ ಪಕ್ಷದಿಂದ ವೀಕ್ ಅಭ್ಯರ್ಥಿ ಹಾಕಿ ಬಿಜೆಪಿ ಜೊತೆ ಟೈಅಪ್ ಮಾಡಿಕೊಂಡರು. ಕೊರಟಗೆರೆ ಕ್ಷೇತ್ರಕ್ಕೆ ಜೀರೋ ಟ್ರಾಫಿಕ್ ಬೇಕಾ ಅಥವಾ ನಿಮ್ಮ ಮನೆ ಮಗ ಸುಧಾಕರಲಾಲ್ ಬೇಕಾ ಯೋಚಿಸಿ ಮತನೀಡಿ. ಮುಸ್ಲಿಂ ಸಮಾಜಕ್ಕೆ ಶೇ.4 ರಷ್ಟು ಮೀಸಲಾತಿ ಮತ್ತು ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದವರು ದೇವೇಗೌಡರು ಎಂದರು.

ಪಿ.ಆರ್.ಸುಧಾಕರಲಾಲ್ ಮಾತನಾಡಿ, 25 ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆ ಮಾಡಿದ್ದೇನೆ. ನೀರಾವರಿ, ಸಾಗುವಳಿ ಚೀಟಿ ಮತ್ತು ಗಂಗಾ ಕಲ್ಯಾಣಕ್ಕೆ ಆದ್ಯತೆ ಹಾಗೂ 35 ಸಾವಿರಕ್ಕೂ ಅಧಿಕ ಜನರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಿದ್ದೇನೆ. ಇನ್ನೂ 15 ದಿನ ನನ್ನ ಜೊತೆ ಇರಿ ಮುಂದಿನ 5 ವರ್ಷ ನಿಮ್ಮ ಮನೆ ಮಗನಂತೆ ಕೆಲಸ ಮಾಡ್ತೀನಿ. ನನ್ನ ಹತ್ತಿರ ಹಣ ಬಲವಿಲ್ಲ ಆದರೇ ಜನ ಬಲ ಇದೆ. ಜೆಡಿಎಸ್ ಕಾರ್ಯಕರ್ತರೇ ನನ್ನ ಗೆಲುವಿನ ಶಕ್ತಿ ಆಗುತ್ತಾರೆ ಎಂದರು.

ಜೆಡಿಎಸ್ ಹಿಂದುಳಿದ ವರ್ಗಗಳ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ನಿಮ್ಮ ಮನೆ ಬಾಗಿಲಿಗೆ ಮತ ಯಾಚನೆಗೆ ಬರುವ ಜನಸೇವಕ ಮತ್ತೆ ನಿಮ್ಮ ಬಳಿಯ ಇರ್ತಾರೇ. ಚುನಾವಣೆ ವೇಳೆಯಲ್ಲೇ ಕೊರಟಗೆರೆ-ತುಮಕೂರು ನಗರಕ್ಕೆ ಮುಖಂಡರನ್ನು ಕರೆಸಿಕೊಂಡು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕ ಮುಂದೆ ನಿಮ್ಮ ಕೈಗೇ ಸಿಗ್ತಾರೇ. ೨೦೨೩ಕ್ಕೆ ಅಭಿವೃದ್ದಿಯ ಚಿಂತನೆಯುಳ್ಳ ಜನನಾಯಕ ಸುಧಾಕರಲಾಲ್ ಗೆಲುವು ಖಚಿತ ಎಂದು ತಿಳಿಸಿದರು.

ಸಮಾವೇಶದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಷನ್‌ಬೇಗ್, ಎಸ್‌ಸಿ ಘಟಕದ ಕಾರ್ಯಾಧ್ಯಕ್ಷ ಶ್ರೀರಾಮ್, ಜಿಲ್ಲಾಧ್ಯಕ್ಷ ಅಂಜಿನಪ್ಪ, ಮಹಿಳಾಧ್ಯಕ್ಷೆ ಕುಸುಮಾ, ಹಿರಿಯ ಮುಖಂಡ ಅಂದಾನಪ್ಪ, ಕೊರಟಗೆರೆ ಕಾರ್ಯಾಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್,ಉಪಾಧ್ಯಕ್ಷ ಮಂಜುನಾಥ, ಮುಖಂಡರಾದ ಸಿದ್ದಮಲ್ಲಪ್ಪ, ಪ್ರಕಾಶ್, ಫಾರುಕ್, ಲಕ್ಷ್ಮೀನರಸಪ್ಪ, ವೆಂಕಟೇಶ್, ರಮೇಶ್, ಲಕ್ಷ್ಮೀಕಾಂತ, ಸಂತೋಷಗೌಡ, ಕಿಶೋರ್, ನಯಾಜ್, ರವಿಕುಮಾರ್, ಮರುಡಪ್ಪ, ರೇಣುಕಾ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.