ಅತಿಥಿ ಉಪನ್ಯಾಸಕರಿಗೆ ಗೌರವದ ಬದುಕು ಸಿಗಲಿ


Team Udayavani, Mar 21, 2023, 6:15 AM IST

ಅತಿಥಿ ಉಪನ್ಯಾಸಕರಿಗೆ ಗೌರವದ ಬದುಕು ಸಿಗಲಿ

ಡಾ|ವೆಂಕನಗೌಡ ಪಾಟೀಲ, ಅಧ್ಯಕ್ಷರು,
ಸಹಾಯಕ ಉಪನ್ಯಾಸಕರು-ಅತಿಥಿ ಉಪನ್ಯಾಸಕರ ಸಂಘ, ಕವಿವಿ, ಧಾರವಾಡ

ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ 586 ಜನ ಅತಿಥಿ ಉಪನ್ಯಾಸಕರು ಸೇವೆಯಲ್ಲಿದ್ದೇವೆ. ಕಳೆದ 15 ವರ್ಷಗಳಿಂದ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ಕಾಯಂ ನೇಮಕಾತಿ ಆಗಿಲ್ಲ. ಹೀಗಾಗಿ ಪಿಎಚ್‌ಡಿ, ನೆಟ್‌, ಸ್ಲೆಟ್‌ ಪಾಸಾದ ನೂರಾರು ಜನ ಪ್ರತಿಭಾವಂತರು ಕಳೆದ 15 ವರ್ಷಗಳಿಂದ ಅತಿಥಿ ಉಪ ನ್ಯಾಸಕರಾಗಿ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುವಂತಾಗಿದೆ. ಉದ್ಯೋಗ ಭದ್ರತೆ ಇಲ್ಲದೇ ಪರಿತಪಿಸುತ್ತಿರುವ ಸಹಾಯಕ ಉಪನ್ಯಾಸಕರಿಗೆ ಕೇವಲ 28,000 ಮತ್ತು ಅತಿಥಿ ಉಪನ್ಯಾಸಕರಿಗೆ ಕೇವಲ 18,000 ಗೌರವ ಸಂಭಾವನೆ ನೀಡಿ ಶೋಷಣೆ ಮಾಡುತ್ತಿದೆ.

ಇದೇ ಕೆಲಸಕ್ಕೆ ಕಾಯಂ ಉಪನ್ಯಾಸಕರಿಗೆ 1.80 ಲಕ್ಷ, 2.50 ಲಕ್ಷದವರೆಗೆ ವಿಶ್ವವಿದ್ಯಾನಿಲಯ ವೇತನ ನೀಡುತ್ತಿದೆ. ಇದರಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬೆಲೆ ಇಲ್ಲದಂತಾಗಿದೆ. ಇದಲ್ಲದೇ, ಯುಜಿಸಿ ನಿಯಮದ ಪ್ರಕಾರ ಅತಿಥಿ ಉಪನ್ಯಾಸಕರಿಗೆ ಕನಿಷ್ಟ 50,000 ವೇತನ ನೀಡಬೇಕೆಂಬ ನಿಯಮವನ್ನು ವಿಶ್ವವಿದ್ಯಾನಿಲಯ ಗಾಳಿಗೆ ತೂರಿದೆ. ಸಾಲದ್ದಕ್ಕೆ ನಿತ್ಯ ಸೇವೆ ಸಲ್ಲಿಸುವ ನಮ್ಮನ್ನು ಅತಿಥಿ ಎಂಬ ಹೆಸರಿನಿಂದ ಅವಮಾನಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಶೇ.62ರಷ್ಟಿರುವ ಉಪನ್ಯಾಸಕರು ಕಳೆದ ವರ್ಷ ಸತತ ಒಂದು ತಿಂಗಳುಗಳ ಕಾಲ ಅನಿರ್ದಿಷ್ಟ ಹೋರಾಟ ನಡೆಸಿ, 50,000ಕ್ಕೆ ವೇತನ ಹೆಚ್ಚಿಸಬೇಕು. ಮೂರು ವರ್ಷ ಮೆಲ್ಪಟ್ಟು ಸೇವೆ ಸಲ್ಲಿಸಿದ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ಮಹಿಳಾ ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ಅತಿಥಿ ಎಂಬ ಪದನಾಮ ಬದಲಿಸಿ, ತಾತ್ಕಾಲಿಕ ಉಪನ್ಯಾಸಕ ಎಂದು ಬದಲಿಸಬೇಕು. ಮತ್ತೆ ಕಾಯಂ ಸಿಬಂದಿಗೆ ನೀಡುವ ಆರೋಗ್ಯ ಭತ್ಯೆ, ರಜೆ ಸೌಲಭ್ಯ ನೀಡಬೇಕು ಎಂದು ಹೋರಾಟ ನಡೆಸಲಾಯಿತು. ಈ ಬೇಡಿಕೆಗಳಿಗೆ ಪೂರಕವಾಗಿ ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾನಿಲಯಗಳಲ್ಲಿ 50 ಸಾವಿರ ವೇತನ ನೀಡುತ್ತಿರು ವುದನ್ನು ಅತಿಥಿ ಉಪನ್ಯಾಸಕರ ಸಂಘ ದಾಖಲಾತಿಗಳೊಂದಿಗೆ ಮನವರಿಕೆ ಮಾಡಿಕೊಟ್ಟಿದೆ. ಇದುವರೆ ಗೂ ಇದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ.

-ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಸುಪ್ರೀಂ ಕೋರ್ಟ್‌ ಆದೇಶ ಹಾಗೂ ಯುಜಿಸಿ ನಿಯಮದಂತೆ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 50,000 ವೇತನ ನೀಡಬೇಕು.
-ಖಾಲಿ ಇರುವ ಎಲ್ಲ ಬೋಧಕ ಹುದ್ದೆ ಭರ್ತಿ ಮಾಡಬೇಕು. ಇದರಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರನ್ನು ಆ ಹುದ್ದೆಗಳಿಗೆ ಪರಿಗಣಿಸಬೇಕು.
-ಮಹಿಳಾ ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು.
– ಸಿಂಡಿಕೇಟ್‌ ಸಭೆಯಲ್ಲಿ ಅಂಗೀಕರಿಸಿದ ಸಹಾಯಕ ಉಪನ್ಯಾಸಕರಿಗೆ 40,000 ಹಾಗೂ ಅತಿಥಿ ಉಪನ್ಯಾಸಕರಿಗೆ 26,000 ಪ್ರಸಕ್ತ ವರ್ಷದಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಬೇಕು.
– ಹನ್ನೊಂದು ತಿಂಗಳ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು.
– ಅತಿಥಿ ಪದನಾಮಕ್ಕೆ ಬದಲಾಗಿ ತಾತ್ಕಾಲಿಕ ಉಪನ್ಯಾಸಕ ಅಥವಾ ಅಡಹಾಕ್‌ ಪ್ರೊಫೆಸರ್‌ ಎಂಬ ಪದನಾಮ ನೀಡಬೇಕು.
– ಕಾಯಂ ಉಪನ್ಯಾಸಕರಿಗೆ ನೀಡು ವಂತೆ ರಜೆ ಹಾಗೂ ಆರೋಗ್ಯ ಸೌಲಭ್ಯ ನೀಡಬೇಕು.
– ಇನ್ನು ಸರಕಾರ ವಿಶ್ವವಿದ್ಯಾನಿಲಯದ ಬಾಕಿ ಉಳಿಸಿಕೊಂಡಿರುವ ಅನುದಾನ Ê ‌ನ್ನು ತಕ್ಷಣ ಮಂಜೂರು ಮಾಡಬೇಕು. ಭವಿಷ್ಯದಲ್ಲಿ ಹಣಕಾಸಿನ ಕೊರತೆ ಎದುರಾಗದಂತೆ ಅನುದಾನ ಮುಂಚಿತವಾಗಿ ನೀಡಬೇಕು.
– ಉಪನ್ಯಾಸಕರ ನೇಮಕಾತಿ ಅಧಿಕಾರವನ್ನು ಕರ್ನಾಟಕ ನೇಮಕಾತಿ ಪ್ರಾಧಿಕಾರದಿಂದ ವಾಪಸ್‌ ಪಡೆದು ಮೊದಲಿನಂತೆ ವಿಶ್ವವಿದ್ಯಾನಿಲಯವೇ ನೇಮಕ ಮಾಡಿಕೊಳ್ಳಬೇಕು.
– ವಿಶ್ವವಿದ್ಯಾನಿಲಯದಲ್ಲಿ ಸರಕಾರ, ರಾಜಕೀಯ ಪಕ್ಷ ಗಳ ಹಸ್ತಕ್ಷೇಪ ಮಾಡದಂತೆ ನಿಯಮ ರೂಪಿಸಬೇಕು.
– ತಾರತಮ್ಯ ಸರಿದೂಗಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 50,000 ವೇತನ ಮತ್ತು ಕಾಯಂ ಉಪನ್ಯಾಸಕರಿಗೆ ನೀಡುವ ಎಲ್ಲ ಸೌಲಭ್ಯಗಳು ದೊರೆಯುವಂತೆ ಮಾಡಬೇಕು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.