ದಾವಣಗೆರೆಯಲ್ಲಿ ಬಿಜೆಪಿಗೆ ನೆಲೆ ಕಲ್ಪಿಸಿದ್ದ “ಉತ್ತರಾಧಿಪತಿ’


Team Udayavani, Apr 5, 2023, 6:15 AM IST

ದಾವಣಗೆರೆಯಲ್ಲಿ ಬಿಜೆಪಿಗೆ ನೆಲೆ ಕಲ್ಪಿಸಿದ್ದ “ಉತ್ತರಾಧಿಪತಿ’

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿರುವುದು ದಾವಣಗೆರೆ ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳನ್ನು ಗೆದ್ದು ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತುಪಡಿಸುವ ಉತ್ಸಾಹದಲ್ಲಿರುವ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿರುದ್ಧ ಕಣಕ್ಕಿಳಿದಿದ್ದ ರವೀಂದ್ರನಾಥ್‌ ಗೆಲ್ಲುತ್ತಾರೆ ಎಂಬ ಆಸೆ ಸ್ವತಃ ಕಮಲ ಪಾಳಯಕ್ಕೂ ಇರಲಿಲ್ಲ. ಅದನ್ನೇ ಸವಾಲಾಗಿ ಸ್ವೀಕರಿಸಿದ್ದ ರವೀಂದ್ರನಾಥ್‌ ಮನೆ ಮನೆಗೆ ತೆರಳಿ ನಡೆಸಿದ ಅತ್ಯಂತ ವ್ಯವಸ್ಥಿತ ಪ್ರಚಾರ ಅವರನ್ನು ಗೆಲುವಿನ ದಡ ಸೇರಿಸಿತ್ತು. ಕಳೆದ ಚುನಾವಣೆಯಲ್ಲಿ ಊಹೆಗೂ ನಿಲುಕದ ರೀತಿಯಲ್ಲಿ ಕಾಂಗ್ರೆಸ್‌ಗೆ ಸೋಲುಣಿಸಿದ್ದಲ್ಲದೆ ಉತ್ತರ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತಂದು ಕೊಟ್ಟಿದ್ದರು. ಆದರೆ ಈಗ 2023ರ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಅನಾರೋಗ್ಯದ ಕಾರಣದಿಂದ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.

70ರ ದಶಕದಲ್ಲಿ ಸ್ವಗ್ರಾಮ ಶಿರಮಗೊಂಡನಹಳ್ಳಿಯ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅರ್ಧ ಕೆಜಿ ಸಕ್ಕರೆ ಕೊಡಲು ನಿರಾಕರಿಸಿದ್ದನ್ನು ಪ್ರಶ್ನಿಸಲು ಹೋಗಿದ್ದ ರವೀಂದ್ರನಾಥ್‌ ಅವರಿಗೆ ಕೆಲವರು ಆಡಿದ್ದ ಮಾತನ್ನೇ ಸವಾಲಾಗಿ ಸ್ವೀಕರಿಸಿ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ಅನಂತರ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಕ್ಕರೆ ಖಾತೆಯನ್ನೇ ನಿರ್ವಹಿಸುವಷ್ಟರ ಮಟ್ಟಿಗೆ ಬೆಳೆದರು ಎಂಬುದೇ ರೋಚಕ.

ಮೂಲತಃ ರೈತಾಪಿ ಕುಟುಂಬದ ಅವರು, ದಾವಣಗೆರೆ ಭಾಗದ ಜೀವನಾಡಿ ಭದ್ರಾ ಅಚ್ಚುಕಟ್ಟು ಕೊನೆಯ ಭಾಗದಲ್ಲಿ ನೀರಿಗಾಗಿ ಸಾಕಷ್ಟು ಹೋರಾಟ ನಡೆಸಿ ಶಿಕ್ಷೆಗೂ ಒಳಗಾದವರು. ಕೃಷಿಯನ್ನೇ ಅವಲಂಬಿಸಿದ್ದ ಅವರು ಕೃಷಿ ಇಲಾಖೆ ಸಚಿವರಾಗಿದ್ದರು. ಜತೆಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯನ್ನೂ ನಿರ್ವಹಣೆ ಮಾಡಿದ್ದರು.

ಬಿಜೆಪಿಗೆ ನೆಲೆ ಒದಗಿಸಿದ ನಾಯಕ:
ದಾವಣಗೆರೆ ಎಪಿಎಂಸಿಯಲ್ಲಿ ದಲ್ಲಾಳಿ ಅಂಗಡಿ ಇಟ್ಟುಕೊಂಡಿದ್ದ ರವೀಂದ್ರನಾಥ್‌, ವಿದ್ಯಾರ್ಥಿ ದೆಸೆಯಿಂದಲೇ ಜನಸಂಘದತ್ತ ಒಲವು ಹೊಂದಿದ್ದರು. ಜನಸಂಘದ ಬೆರಳೆಣಿಕೆಯಷ್ಟು ಕಾರ್ಯಕರ್ತರಲ್ಲಿ ಮುಂಚೂಣಿಯಲ್ಲಿದ್ದ ಅವರು 1983ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡರು.

ಬಿಜೆಪಿಯಲ್ಲೇ ಇದ್ದರೆ ಯಾವುದೇ ಕಾರಣಕ್ಕೂ ಉದ್ಧಾರ ಆಗೋಲ್ಲ, ಬರೀ ಬಾವುಟ ಹಿಡಿಯೋಕೆ, ಧ್ವಜ ಕಟ್ಟೋಕೆ ಮಾತ್ರ ಇರಿ¤àಯಾ, ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಿಕೋ’ ಎಂಬ ಮಾತುಗಳನ್ನು ರವೀಂದ್ರನಾಥ್‌ ಅನೇಕ ಬಾರಿ ಕೇಳಿದ್ದರು. ತಮ್ಮ ನಾಯಕ ಯಡಿಯೂರಪ್ಪ ಅವರೇ ಪಕ್ಷ ತೊರೆದು ಕೆಜೆಪಿ ಕಟ್ಟಿದರೂ ಬಿಜೆಪಿಯಲ್ಲೇ ಮುಂದುವರೆದಿದ್ದು ಅವರ ಪಕ್ಷ ನಿಷ್ಠೆಗೆ ಸಾಕ್ಷಿ.

ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಭೇದ್ಯ ಕೋಟೆಯನ್ನೇ ಹೊಂದಿತ್ತು.ಅಂತಹ ಸಂದರ್ಭದಲ್ಲೂ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಯಾಗಿ ಬೇರೂರಲು ರವೀಂದ್ರನಾಥ್‌ ಪ್ರಮುಖರು ಎಂದರೆ ಅತಿಶಯೋಕ್ತಿ ಎನಿಸದು. 1992ರ ಲೋಕಸಭಾ ಚುನಾವಣೆಯಲ್ಲಿ ಚನ್ನಯ್ಯ ಒಡೆಯರ್‌ ವಿರುದ್ಧ ಸ್ಪ ರ್ಧಿಸಿದ್ದ ರವೀಂದ್ರನಾಥ್‌, ಕೆಲವೇ ಮತಗಳ ಅಂತರದಲ್ಲಿ ಸೋತರೂ ದಾವಣಗೆರೆಯಲ್ಲಿ ಬಿಜೆಪಿಗೆ ಭದ್ರ ನೆಲೆ ಒದಗಿಸಿಕೊಟ್ಟಿದ್ದರು. 1994ರ ಮಾಯಕೊಂಡ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅವರನ್ನು ಸೋಲಿಸಿದ ರವೀಂದ್ರನಾಥ್‌, ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಮೊಟ್ಟ ಮೊದಲ ಬಿಜೆಪಿ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ನಂತರದ ಎರಡೂ ಚುನಾವಣೆಯಲ್ಲಿ ಸತತ ಗೆಲುವು ಸಾಧಿ ಸುವ ಮೂಲಕ ಹ್ಯಾಟ್ರಿಕ್‌ ಸಾಧನೆ ಮಾಡಿದರು. 2008ರಲ್ಲಿ ಅಸ್ತಿತ್ವಕ್ಕೆ ಬಂದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ನಡೆದಿರುವ ಮೂರು ಚುನಾವಣೆಗಳಲ್ಲಿ ರವೀಂದ್ರನಾಥ್‌ ಎರಡು ಬಾರಿ ಗೆಲುವು ಸಾಧಿಸಿದ್ದಾರೆ.

ಪರ್ಯಾಯ ಅಭ್ಯರ್ಥಿ ಯಾರು?
ದಾವಣಗೆರೆ ಉತ್ತರಾ ಧಿಪತಿ ಸ್ಥಾನಕ್ಕೆ ಸಮರ್ಥ ಪರ್ಯಾಯ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಮುಂದಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮೇಯರ್‌ ಎಸ್‌.ಟಿ. ವೀರೇಶ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಜಗದೀಶ್‌, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್‌, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಣಬೇರು ಜೀವನಮೂರ್ತಿ ಜೊತೆಗೆ ಅಚ್ಚರಿ ಎನ್ನುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪುತ್ರ ಜಿ.ಎಸ್‌.ಅನಿತ್‌ಕುಮಾರ್‌ ಹೆಸರು ಸಹ ಕೇಳಿ ಬರುತ್ತಿದೆ. ಯಾರಿಗೆ ಟಿಕೆಟ್‌ ದೊರೆಯಬಹುದು ಎಂಬುದೇ ಕುತೂಹಲ ಮೂಡಿಸಿದೆ. ಇನ್ನು ಎರಡು ದಿನಗಳಲ್ಲಿ ವಿಶೇಷ-ಅಚ್ಚರಿಯ ಬೆಳವಣಿಗೆಯನ್ನು ಕಾಣಬಹುದು ಎಂದು ಸ್ವತಃ ರವೀಂದ್ರನಾಥ್‌ ಹೇಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

-ರಾ. ರವಿಬಾಬು

ಟಾಪ್ ನ್ಯೂಸ್

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.