ಶಿವರಾಮೇಗೌಡ- ಫೈಟರ್‌ ರವಿ ಟಿಕೆಟ್‌ ಫೈಟ್‌


Team Udayavani, Apr 4, 2023, 6:15 AM IST

ಶಿವರಾಮೇಗೌಡ- ಫೈಟರ್‌ ರವಿ ಟಿಕೆಟ್‌ ಫೈಟ್‌

ಮಂಡ್ಯ: ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಹಾಗೂ ಸಮಾಜ ಸೇವಕ ಫೈಟರ್‌ ರವಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇ ಇರಲಿಲ್ಲ. ಪ್ರತೀ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಡೆಯುತ್ತಿದ್ದ ಮತಗಳು ಮೂರು ಸಾವಿರ ಗಡಿಯೊಳಗೆ ಮಾತ್ರ. ಅಷ್ಟೊಂದು ದುರ್ಬಲವಾಗಿತ್ತು. ಆದರೆ ಈ ಬಾರಿ ತ್ರಿಕೋನ ಸ್ಪರ್ಧೆಗೆ ಕಮಲ ಪಾಳೆಯ ಮುಂದಡಿ ಇಟ್ಟಿದೆ. ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಹಾಗೂ ಫೈಟರ್‌ ರವಿ ಎಂಬ ಇಬ್ಬರ ನಾಯಕರ ಮೂಲಕ ಕಾಂಗ್ರೆಸ್‌-ಜೆಡಿಎಸ್‌ಗೆ ಶಾಕ್‌ ನೀಡಲು ಮುಂದಾಗಿದೆ.

ಆದರೆ ಇದೇ ಈಗ ಕೇಸರಿ ನಾಯಕರಿಗೆ ತಲೆ ನೋವು ತಂದಿದೆ. ಟಿಕೆಟ್‌ ಹಂಚಿಕೆಯಲ್ಲಿ ಗೊಂದಲ ಶುರುವಾಗಿದೆ. ಕಳೆದ ಆರೇಳು ತಿಂಗಳಿನಿಂದ ಕ್ಷೇತ್ರದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಂಚಲನ ಮೂಡಿಸಿರುವ ಫೈಟರ್‌ ರವಿ(ಮಲ್ಲಿಕಾರ್ಜುನ್‌) ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಅನಂತರ ಕೆಲವು ತಿಂಗಳ ಹಿಂದೆ ಬಿಜೆಪಿ ಸೇರ್ಪಡೆಗೊಂಡ ಅವರು, ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿ ದ್ದರು. ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿಯೇ ಗುರುತಿಸಿಕೊಂಡು ಇತ್ತೀಚೆಗೆ ನಡೆದ ಮಹಿಳಾ ಸಮಾವೇಶ, ಸಂಕಲ್ಪ ಯಾತ್ರೆ ಸಹಿತ ಬಿಜೆಪಿಯ ವಿವಿಧ ಸಮಾವೇಶಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿಯ ಮತ ಬ್ಯಾಂಕ್‌ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್‌ನಿಂದ ಉಚ್ಚಾಟನೆ ಗೊಂಡಿದ್ದ ಮಾಜಿ ಸಂಸದ ಎಲ್‌.ಆರ್‌.ಶಿವರಾ ಮೇಗೌಡ ಬಿಜೆಪಿ ಸೇರ್ಪಡೆಯಾಗಿ ಅಭ್ಯರ್ಥಿ ಯಾಗಲು ಸಜ್ಜಾಗಿದ್ದಾರೆ. ಇದರ ಬಗ್ಗೆ ಕಮಲ ನಾಯಕರ ಜತೆ ಮಾತುಕತೆ ನಡೆದಿದ್ದು, ಸದ್ಯದಲ್ಲಿಯೇ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ಬಹುತೇಕ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಇದರಿಂದ ಫೈಟರ್‌ ರವಿಗೆ ಟಿಕೆಟ್‌ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಟಿಕೆಟ್‌ ಸಿಗುವ ಭರವಸೆಯಲ್ಲಿಯೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ ಯಾಗುತ್ತಿದ್ದಾರೆ. ಎರಡು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿ, 6 ತಿಂಗಳು ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಫೈಟರ್‌ ರವಿ ವಿರುದ್ಧ ರೌಡಿಶೀಟರ್‌ ಎಂಬ ಆರೋಪವೂ ಇದೆ. ಒಂದು ವೇಳೆ ಫೈಟರ್‌ ರವಿಗೆ ಟಿಕೆಟ್‌ ನೀಡಿದರೆ ವಿಪಕ್ಷಗಳ ಟೀಕೆಗೆ ಗುರಿಯಾಗಬಹುದು ಎಂಬ ಹಿನ್ನೆಲೆಯಲ್ಲಿ ಎಲ್ಲವನ್ನು ಲೆಕ್ಕ ಹಾಕಿರುವ ಕಮಲ ನಾಯಕರು ಶಿವರಾಮೇಗೌಡ ಪಕ್ಷ ಸೇರ್ಪಡೆಗೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

ಶಿವರಾಮೇಗೌಡ ಬಿಜೆಪಿಗೆ ಬಂದರೆ ಫೈಟರ್‌ ರವಿ ಮುಂದಿನ ಆಯ್ಕೆ ಏನು ಎಂಬುದು ಪ್ರಶ್ನೆ ಯಾಗಿದೆ. ಈಗಾಗಲೇ ಮುಂದಿನ ಚುನಾವಣೆಗೆ ನಿಲ್ಲುವುದು ಖಚಿತ ಎಂದು ಘೋಷಣೆ ಮಾಡಿರುವ ಫೈಟರ್‌ ರವಿ ಒಂದು ವೇಳೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು, ಇಲ್ಲ ಪಕ್ಷದಲ್ಲಿಯೇ ಉಳಿದುಕೊಂಡು ಅಭ್ಯರ್ಥಿಗೆ ಬೆಂಬಲ ನೀಡುವುದು ಅನಿವಾರ್ಯವಾಗಿದೆ.

ಇಬ್ಬರು ನಾಯಕರು ಬಿಜೆಪಿ ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದು ಹೈಕಮಾಂಡ್‌ಗೂ ಗೊಂದಲ ಉಂಟು ಮಾಡಿದೆ. ಇಬ್ಬರಲ್ಲಿ ಬಿಜೆಪಿ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಕೆರಳಿಸಿದೆ.

-ಶಿವರಾಜು ಎಚ್‌.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.