![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 27, 2023, 7:14 PM IST
ಗದಗ: ಮೋದಿ ಅಂದ್ರೆ ವಿಷಯದ ಹಾವಿದ್ದಂಗೆ. ಅದು ವಿಷ ಹೌದೋ ಅಲ್ಲವೋ ಅಂತಾ ನೆಕ್ಕಿ ನೋಡಿದ್ರೆ ಸತ್ತಂತೆ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ಸಿನ ಬಹಿರಂಗ ಸಭೆಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರ ವಿಚಾರಧಾರೆಗಳು ಬಹಳ ಕೆಟ್ಟದಾಗಿರುವುದರಿಂದ ಇಡೀ ದೇಶ ಹಾಳಾಗುತ್ತಿದೆ. ಒಂದು ಲೀಟರ್ ಹಾಲಲ್ಲಿ ಗೊಬ್ಬರ ಹಾಕಿದರೆ ಸಾಕು ಅದು ಕೆಟ್ಟು ಹೋಗುತ್ತದೆ. ಅದಕ್ಕೆ ದೊಡ್ಡ ಪದಾರ್ಥ ಬೇಕಿಲ್ಲ. ಹಾಗೇಯೆ ನಿನೋಬ್ಬನೇ ಸಾಕು ದೇಶ ಹಾಳು ಮಾಡೋಕೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಒಂದು ಕಡೆ 56 ಇಂಚಿನ ಛಾತಿಯಿದೆ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದೆಡೆ ಮೋದಿ ಒಂದು ಕಡೆ, ವಿರೋಧ ಪಕ್ಷದವರು ಒಂದು ಕಡೆ. ಮೋದಿನೇ ಸಾಕು ಎಲ್ಲರಿಗೆ ಎಂದು ಹೇಳುತ್ತಾನೆ. ಹೌದು ದೇಶವನ್ನು ಮುಗಿಸೋಕೆ ಮೋದಿ ಒಬ್ಬರೆ ಸಾಕು ಎಂದರು.
ಉಲ್ಟಾ ಹೊಡೆದ ಖರ್ಗೆ
ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯ ನಂತರ ರೋಣ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಯನ್ನೇ ಉಲ್ಟಾ ಹೊಡೆದರು. ಮೋದಿ ವಿಷದ ಹಾವು ಇದ್ದಂತೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಹಾಗೆ ಹೇಳಿಲ್ಲ, ಬಿಜೆಪಿ ಒಂದು ಹಾವು ಇದ್ದಂಗೆ, ಸ್ವಲ್ಪ ನೆಕ್ಕಿ ನೋಡ್ತೀವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೆನೆ. ಮೋದಿ ಅವರಿಗೆ ಹೇಳಿಲ್ಲ. ವೈಯಕ್ತಿಕವಾಗಿ ನಾನು ಯಾರಿಗೂ ಹೇಳುವುದಿಲ್ಲ. ಯಾರ ಬಗ್ಗೆಯೂ ಬಗ್ಗೆಯೂ ನನಗೆ ಅಸೂಯೆ ಇಲ್ಲ. ಬಿಜೆಪಿ ಐಡಿಯಾಲಾಜಿ ಒಂದು ವಿಷದಂತಿದೆ. ಆ ಐಡಿಯಾಲಾಜಿ ನೀವು ಸಪೋರ್ಟ್ ಮಾಡಿದ್ರೆ, ನೀವು ನೆಕ್ಕಿ ನೋಡ್ತೀವಿ ಅಂದ್ರೆ ಸಾವು ಖಚಿತ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದು ಸಭೆಯಲ್ಲಿ ಮಾತನಾಡಿದ ಮಾತುಗಳನ್ನು ಬದಲಿಸಿದರು.
… अपितु जिस विचारधारा का वो प्रतिनिधित्व करते हैं, उसके लिए था।
प्रधानमंत्री मोदी जी के साथ हमारी लड़ाई निजी लड़ाई नहीं है। वैचारिक लड़ाई है।
मेरा इरादा किसी की भावना आहत करने का नहीं था और अगर ज़ाने अनजाने में किसी की भावना आहत हुई तो ये मेरी मंशा कदापि नहीं थी…
— Mallikarjun Kharge (@kharge) April 27, 2023
”ಪ್ರಧಾನಿ ಮೋದಿ ಅವರೊಂದಿಗಿನ ನಮ್ಮ ಹೋರಾಟ ವೈಯಕ್ತಿಕ ಹೋರಾಟವಲ್ಲ. ಅದೊಂದು ಸೈದ್ಧಾಂತಿಕ ಹೋರಾಟ. ನನ್ನ ಉದ್ದೇಶ ಯಾರ ಮನಸ್ಸಿಗೂ ನೋವಾಗಿರಲಿಲ್ಲ ಮತ್ತು ತಿಳಿದೋ ತಿಳಿಯದೆಯೋ ಯಾರದೋ ಭಾವನೆಗೆ ಧಕ್ಕೆಯಾದರೆ ಅದು ನನ್ನ ಉದ್ದೇಶವಾಗಿರಲಿಲ್ಲ.” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
You seem to have an Ad Blocker on.
To continue reading, please turn it off or whitelist Udayavani.