H. D. Revanna ಕುಟುಂಬದವರ ಮನವೊಲಿಕೆ ಮಾಡಿದರಷ್ಟೇ ಸ್ವರೂಪ್‌ ನಡೆ ಸುಲಭ

ದಳಪತಿ ಯಶಸ್ವಿ ಮುಂದಿದೆ ದೊಡ್ಡ ಸವಾಲು

Team Udayavani, Apr 15, 2023, 7:55 AM IST

jds

ಹಾಸನ: ದಳಪತಿ ಎಚ್‌.ಡಿ. ಕುಮಾರಸ್ವಾಮಿ ಅವರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಎಚ್‌.ಪಿ. ಸ್ವರೂಪ್‌ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಿಸುವುದರೊಂದಿಗೆ ಎರಡು ತಿಂಗಳಿನಿಂದ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. “ಸಾಮಾನ್ಯ ಕಾರ್ಯಕರ್ತ’ನಿಗೇ ಟಿಕೆಟ್‌ ನೀಡುವುದಾಗಿ ಹೇಳುತ್ತಲೇ ಬಂದಿದ್ದ ಕುಮಾರಸ್ವಾಮಿ ಅವರು ಸ್ವರೂಪ್‌ಗೆ ಟಿಕೆಟ್‌ ಘೋಷಣೆ ಮಾಡುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡು ಮೊದಲ ಹಂತದಲ್ಲಿ ಯಶಸ್ಸು ಸಾಧಿಸಿದ್ದಾರೆ.

ಆದರೆ ಕುಮಾರಸ್ವಾಮಿ ಅವರಿಗೆ ಮುಂದೆ ದೊಡ್ಡ ಸವಾಲು ಇದೆ. ಎಚ್‌.ಡಿ. ರೇವಣ್ಣ ಹಾಗೂ ಅವರ ಕುಟುಂಬದವರನ್ನು ಎದುರು ಹಾಕಿಕೊಂಡು ಸ್ವರೂಪ್‌ಗೆ ಟಿಕೆಟ್‌ ನೀಡಲಾಗಿದೆ. ಈಗ ಇಡೀ ಕುಟುಂಬವನ್ನು ಸಮಾಧಾನಪಡಿಸಿ, ಮನವೊಲಿಸಿ ಚುನಾವಣೆಯಲ್ಲಿ ಸ್ವರೂಪ್‌ ಪರ ಕೆಲಸ ಮಾಡುವಂತೆ ನೋಡಿಕೊಂಡು, ಗೆಲ್ಲಿಸುವ ಹೊಣೆಯೂ ದಳಪತಿ ಮೇಲಿದೆ.

ರೇವಣ್ಣ ಕುಟುಂಬದ ಯಾರೇ ಸ್ಪರ್ಧೆ ಮಾಡಿದರೂ ಅವರ ವಿರುದ್ಧ 50 ಸಾವಿರ ಮತಗಳ ಅಂತರದಿಂದ ಗೆಲ್ಲುವೆ. ಒಂದು ಮತ ಕಡಿಮೆಯಾದರೂ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸುವೆ ಎಂದು ಹಾಲಿ ಶಾಸಕ ಪ್ರೀತಂ ಗೌಡ ಸವಾಲು ಹಾಕಿದ್ದರು. ಈ ಪಂಥಾಹ್ವಾನ ಸ್ವೀಕರಿಸಿ ರೇವಣ್ಣ ಕುಟುಂಬದವರು ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಆದರೆ ಕುಮಾರಸ್ವಾಮಿ ಅವರು ಪ್ರೀತಂಗೌಡ ಅವರನ್ನು ಸೋಲಿಸಲು ದೇವೇಗೌಡರ ಕುಟುಂಬದವರೇಕೆ ಬೇಕು? ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಎದಿರೇಟು ನೀಡಿದ್ದರು. ಈ ಮೂಲಕ ಭವಾನಿ ಅವರ ಸ್ಪರ್ಧೆಗೆ ಅಡ್ಡಗಾಲು ಹಾಕಿ ಕುಟುಂಬ ರಾಜಕಾರಣದ ಆರೋಪದಿಂದ ಮುಕ್ತರಾಗುವ ಉಪಾಯವನ್ನು ಎಚ್‌.ಡಿ. ಕುಮಾರಸ್ವಾಮಿ ಹೂಡಿದ್ದರು. ಅದರಲ್ಲಿ ಈಗ ಯಶಸ್ವಿಯೂ ಆಗಿದ್ದಾರೆ.

ಶಾಸಕಿಯಾಗಬೇಕೆಂಬುದು ಭವಾನಿ ರೇವಣ್ಣ ಅವರ ಬಹುಕಾಲದ ಬಯಕೆ. ಈ ಬಾರಿ ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸಲೇ ಬೇಕು ಎಂದು ಹಟಕ್ಕೆ ಬಿದ್ದವರಂತೆ ಭವಾನಿ ರೇವಣ್ಣ ಹೋರಾಟ ನಡೆಸಿದರು. ಅವರ ಪತಿ ಮತ್ತು ಪುತ್ರರೂ ಟಿಕೆಟ್‌ ಕೊಡಲೇಬೇಕು ಎಂದು ಪಟ್ಟು ಹಿಡಿದು ಹೋರಾಟ ಮಾಡಿದರೂ ಎಚ್‌.ಡಿ. ಕುಮಾರಸ್ವಾಮಿ ಅವರ ಬಿಗಿಪಟ್ಟು ಬಿಡಿಸಿ ಟಿಕೆಟ್‌ ಕೊಡಿಸಲಾಗಲಿಲ್ಲ.

ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ಸಿಗದ ಕೋಪ, ಸ್ವರೂಪ್‌ ಅವರು ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗಿರಿಸಿಕೊಂಡಿದ್ದ ನೇರ ಸಂಪರ್ಕ, ಕೊನೆಗೂ ಟಿಕೆಟ್‌ ಗಿಟ್ಟಿಸಿಕೊಂಡ ಸ್ವರೂಪ್‌ ಅವರ ಮೇಲೆ ರೇವಣ್ಣ ಮತ್ತು ಅವರ ಕುಟುಂಬಕ್ಕೆ ಸಹಜವಾಗಿ ಸಿಟ್ಟು ಇದ್ದೇ ಇದೆ. ಆದರೆ ತಮ್ಮ ಕುಟುಂಬಕ್ಕೆ ಸವಾಲು ಹಾಕಿ, ಹಗುರವಾಗಿ ಮಾತನಾಡಿದ್ದ ಎದುರಾಳಿಯನ್ನು ಮಣಿಸುವ ಅವಕಾಶವನ್ನು ರೇವಣ್ಣ ಮತ್ತು ಕುಟುಂಬದವರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಹಾಗೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೇವಣ್ಣ ಮತ್ತು ಅವರ ಕುಟುಂಬದವರ ಮನವೊಲಿಸುವ ಸವಾಲು ಸ್ವರೂಪ್‌ ಎದುರಿಗಿದೆ.

ಭವಾನಿ ರೇವಣ್ಣ ಅವರನ್ನು ಹಾಸನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿದ್ದರೆ ಎಚ್‌.ಡಿ.ದೇವೇಗೌಡರ ಕುಟುಂಬ ರಾಜ್ಯದಲ್ಲಿ ಕುಟುಂಬ ರಾಜಕಾರಣದ ಅಪವಾದಕ್ಕೆ ಸಿಲುಕುತ್ತಿತ್ತು. ಜತೆಗೆ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪ್ರಿತಂಗೌಡ ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಎದುರಾಳಿ. ಅವರೆದುರು ಭವಾನಿ ಸೋತಿದ್ದರೆ ಜೆಡಿಎಸ್‌ ಭದ್ರಕೋಟೆಯಲ್ಲಿ ಆ ಸೋಲು ದೇಶವ್ಯಾಪಿ ಚರ್ಚೆಗೆ ಅವಕಾಶವಾಗುತ್ತಿತ್ತು. ಆ ಎರಡು ಅಪವಾದದಿಂದಲೂ ಈಗ ರೇವಣ್ಣ ಕುಟುಂಬ ಪಾರಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.