Vinay Kulakarniಗೆ ಟಿಕೆಟ್‌ ತಂದ ಸಂಚಲನ


Team Udayavani, Apr 7, 2023, 6:15 AM IST

Vinay Kulakarniಗೆ ಟಿಕೆಟ್‌ ತಂದ ಸಂಚಲನ

ಧಾರವಾಡ: ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿರುವುದು ಭಾರಿ ಸಂಚಲನ ಮೂಡಿಸಿದೆ.

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್‌ ಅವರು ಜಿಲ್ಲೆಯ ಹೊರಗಿದ್ದು ಕೊಂಡಾದರೂ ಧಾರ ವಾಡ ಗ್ರಾಮೀಣ ಕ್ಷೇತ್ರ ದಿಂದಲೇ ಕಣಕ್ಕೆ ಇಳಿಯುತ್ತೇನೆ ಎನ್ನುವ ಹಠದೊಂದಿಗೆ ಮತ್ತೆ ಟಿಕೆಟ್‌ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಲ್ಲಿ ಕಣಕ್ಕಿಳಿಯುತ್ತಾರೆ ಎಂಬೆಲ್ಲ ಮಾತುಗಳಿಗೂ ವಿರಾಮ ಬಿದ್ದಿದೆ. ಕೊನೆಗೂ ಕರ್ಮಭೂಮಿ ಧಾರವಾಡಕ್ಕೆ ಮರಳಿ ರಾಜಕೀಯ ಅಖಾಡಕ್ಕೆ ಇಳಿದಿರುವ ಅವರು ಎದುರಾಳಿಗಳ ವಿರುದ್ಧ ತೊಡೆ ತಟ್ಟಿದ್ದಾರೆ.
ಸಿಬಿಐ ಕುಣಿಕೆಯಲ್ಲಿ ಸಿಲುಕಿ ನರಳಿದ್ದ ವಿನಯ್‌ ರಾಜಕೀಯ ಭವಿಷ್ಯವೇ ಮುಗಿದು ಹೋಯಿತು. ಕಾಂಗ್ರೆಸ್‌ ಕೂಡ ಅವರ ಕೈ ಬಿಡಬಹುದು ಎಂಬೆಲ್ಲ ಮಾತುಗಳು ಕ್ಷೇತ್ರದಲ್ಲಿ ಈವರೆಗೂ ಹರಿದಾಡುತ್ತಿದ್ದವು. ಆದರೆ ಮತ್ತೆ ವಿನಯ್‌ ಕಾಂಗ್ರೆಸ್‌ ಟಿಕೆಟ್‌ ಪಡೆದುಕೊಂಡು ತಮ್ಮ ಶಕ್ತಿ ತೋರ್ಪಡಿಸಿದ್ದಾರೆ. ಇದರಿಂದಾಗಿ ಇದೀಗ ಗ್ರಾಮೀಣ ಕ್ಷೇತ್ರದ ರಾಜಕೀಯ ತೀವ್ರ ರಂಗೇರಿದಂತಾಗಿದೆ.

“ಶಿವಲೀಲಾ’ ರಣಜಾಲ: ಈ ಕ್ಷೇತ್ರದಲ್ಲಿ ವಿನಯ್‌ ಅನುಪಸ್ಥಿತಿಯಲ್ಲಿ ಅತ್ಯಂತ ಅಚ್ಚು ಕಟ್ಟಾಗಿ ಕಾಂಗ್ರೆಸ್‌ ಪಡೆಯನ್ನು ಮುನ್ನಡೆಸಿ ಕೊಂಡು ಬಂದ ವಿನಯ್‌ ಪತ್ನಿ ಶಿವಲೀಲಾ ಕುಲಕರ್ಣಿ ಇದೀಗ ಬಿಜೆಪಿಗೆ ಠಕ್ಕರ್‌ ಕೊಡುವ ಮಟ್ಟಕ್ಕೆ ಅದನ್ನು ಸಜ್ಜುಗೊಳಿಸಿದ್ದಾರೆ. ಕಳೆದ 4 ವರ್ಷಗಳಿಂದ ಸತತ ಸಂಪರ್ಕ ಸಭೆ ಮತ್ತು ಸಂಘಟನಾತ್ಮಕ ಕೆಲಸಗಳೊಂದಿಗೆ ವಿನಯ್‌ ಬೆಂಬಲಿಗರನ್ನು ಸಂಘಟಿಸಿ ಚುನಾವಣೆ ಅಖಾಡದಲ್ಲಿ ರಣಕಹಳೆ ಮೊಳಗಿಸಲು ಸಿದ್ದಗೊಂಡಿದ್ದಾರೆ. ವಿನಯ್‌ ಬದಲು ಅವರ ಪತ್ನಿ ಶಿವಲೀಲಾ ಕುಲಕರ್ಣಿಗೆ ಟಿಕೆಟ್‌ ನೀಡುತ್ತಾರೆ ಅಥವಾ ವಿನಯ್‌ ಶಿಗ್ಗಾವಿಗೆ ಹೋಗುತ್ತಾರೆ ಎಂಬೆಲ್ಲ ವದಂತಿಗಳನ್ನು ಮೌನವಾಗಿಯೇ ಎದುರಿಸಿ, ಪಕ್ಷ ಸಂಘಟಿಸಿದ ಶಿವಲೀಲಾ ಆಡಳಿತಾರೂಢ ಬಿಜೆಪಿ ಪಕ್ಷ ಎದುರಿಸಲು ಅಗತ್ಯ ರಣತಂತ್ರ ಹೆಣೆದಿದ್ದು ಸತ್ಯ. ವಿನಯ್‌ಗೆ ಕಾನೂನು ಸಂಕಷ್ಟಗಳು ಎದುರಾದರೆ ಮುಂದೇನು? ಎನ್ನುವ ಯೋಚನೆಯೂ ಕೈ ಪಡೆಯನ್ನು ಬಾಧಿಸಿತ್ತು. ಇದೀಗ ಟಿಕೆಟ್‌ ವಿನಯ್‌ಗೆ ನೀಡಿದ್ದರಿಂದ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ. ಒಂದು ವೇಳೆ ವಿನಯ್‌ ಕುಲಕರ್ಣಿ ಅವರಿಗೆ ನ್ಯಾಯಾಲಯ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನಿರಾಕರಿಸಿದರೂ ಸಾಮಾಜಿಕ ಜಾಲ ತಾಣ ಮತ್ತು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಾದರೂ ಮತ ಕೇಳಿ ಅಖಾಡಕ್ಕೆ ಧುಮುಕುವ ತಯಾರಿ ಮಾಡಿಕೊಂಡಿ ದ್ದಾರೆ ವಿನಯ್‌ ಅಭಿಮಾನಿಗಳು ಮತ್ತು ಅವರ ಪತ್ನಿ ಶಿವಲೀಲಾ.

ಬಿಜೆಪಿ ಹೊಸಮುಖ: ಇಡೀ ಧಾರವಾಡ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹಿತ ಎಲ್ಲ ಬಿಜೆಪಿ ಮುಖಂಡರನ್ನು ರಾಜಕೀಯವಾಗಿ ಧೈರ್ಯದಿಂದ ಎದುರಿಸಿದ್ದ ವಿನಯ್‌ ವಿರುದ್ಧ ಶಾಸಕ ಅಮೃತ ದೇಸಾಯಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿದ್ದ ಬಿಜೆಪಿಗೆ ಈ ಬಾರಿ ವಿನಯ್‌ ವಿರುದ್ಧ ಗೆಲುವು ಅಷ್ಟು ಸಲೀಸಾಗಿಲ್ಲ. ಕಳೆದ ಬಾರಿ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಹೆಸರು ಥಳಕು ಹಾಕಿದ್ದನ್ನೇ ಬಂಡವಾಳ ಮಾಡಿಕೊಂಡ ಬಿಜೆಪಿ ವಿನಯ್‌ ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಬಾರಿ ಅಮೃತ ದೇಸಾಯಿ ಕ್ಷೇತ್ರದಲ್ಲಿ ತಮ್ಮತನ ಉಳಿಸಿಕೊಂಡಿಲ್ಲ. ಅವರಿಗೆ ಟಿಕೆಟ್‌ ನೀಡಿದರೂ ಗೆಲುವು ಅಸಾಧ್ಯ ಎನ್ನುವ ಮಾತು ಬಿಜೆಪಿ ವಲಯದ ಲ್ಲಿಯೇ ಕೇಳಿ ಬರುತ್ತಿದೆ. ಹೀಗಾಗಿ ಬಿಜೆಪಿ ಹೊಸಮುಖವೊಂದನ್ನು ವಿನಯ್‌ ವಿರುದ್ಧ ಕಣಕ್ಕಿಳಿಸಲು ಚಿಂತಿಸುತ್ತಿದೆ.

ಆನ್‌ಲೈನ್‌ ನಾಮಪತ್ರ ವರ
ವಿನಯ್‌ಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದ್ದರೂ ಕಾನೂನು ತೊಡಕುಗಳು ಮಾತ್ರ ಸಾಕಷ್ಟಿವೆ. ಒಂದು ವೇಳೆ ಜಿಲ್ಲಾ ಪ್ರವೇಶಕ್ಕೆ ಕೋರ್ಟ್‌ ಅನುಮತಿ ನೀಡದೇ ಹೋದರೆ, ಆನ್‌ಲೈನ್‌ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅವರೇ ತಮ್ಮ ನಾಮಪತ್ರವನ್ನು ಸಲ್ಲಿಸಬಹುದಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅಭ್ಯರ್ಥಿ ಸೂಚಿತ ವ್ಯಕ್ತಿಯೊಬ್ಬ ಅಭ್ಯರ್ಥಿಯ ಚುನಾವಣ ಚಟುವಟಿಕೆಗಳನ್ನು ಮಾಡಲು ಅವಕಾಶವಿದೆ. ಮೊಟ್ಟ ಮೊದಲ ಬಾರಿಗೆ ಆನ್‌ಲೈನ್‌ ಮೂಲಕ ನಾಮಪತ್ರ ಸಲ್ಲಿಕೆಗೆ ಚುನಾವಣ ಆಯೋಗ ಅವಕಾಶ ನೀಡಿದ್ದು ಸದ್ಯಕ್ಕೆ ವಿನಯ್‌ಗೆ ವರದಾನವಾದರೂ, ಇತರ ಚುನಾವಣೆ ಕಾರ್ಯಗಳೆಲ್ಲವನ್ನು ಅವರ ಪತ್ನಿ ಶಿವಲೀಲಾ ಕುಲಕರ್ಣಿ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.