ರಾಜಾಜಿನಗರದಲ್ಲಿ ಕಾಂಗ್ರೆಸ್‌ ರಾಜ ಯಾರು?


Team Udayavani, Mar 21, 2023, 6:30 AM IST

ರಾಜಾಜಿನಗರದಲ್ಲಿ ಕಾಂಗ್ರೆಸ್‌ ರಾಜ ಯಾರು?

ಬೆಂಗಳೂರು: ಭಾರತೀಯರು ಅಭಿಮಾನದಿಂದ “ರಾಜಾಜಿ’ ಎಂದು ಕರೆಯುತ್ತಿದ್ದ ದೇಶದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸ್ವತಂತ್ರ ಭಾರತದ ಮೊದಲ ಅಟಾರ್ನಿ ಜನರಲ್‌ ಮತ್ತು ಕೊನೆಯ ಗರ್ವನರ್‌ ಜನಲರ್‌ ಆಗಿದ್ದ ಸಿ. ರಾಜಗೋಪಾಲಚಾರಿ ಅವರ ನಾಮಧೇಯ ಹೊಂದಿರುವ ರಾಜಾಜಿನಗರ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು. ಜನವಸತಿ ಮತ್ತು ಕೈಗಾರಿಕ ಪ್ರದೇಶಗಳ ಸಂಗಮವಾಗಿರುವ ರಾಜಾಜಿನಗರ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಈವರೆಗೆ 10 ಚುನಾವಣೆಗಳನ್ನು ಕಂಡಿರುವ ರಾಜಾಜಿನಗರ ಕ್ಷೇತ್ರ ಇದೀಗ 11ನೇ ಚುನಾವಣೆಗೆ ಸಿದ್ದವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗಳು ಗರಿಗೆದರಿದ್ದು, ಟಿಕೆಟ್‌ ಸೆಣಸಾಟ ಜೋರಾಗಿದೆ. ಈವ ರೆಗಿನ 10 ಚುನಾವಣೆಗಳಲ್ಲಿ ಐದು ಬಾರಿ ಬಿಜೆಪಿ ಗೆದ್ದಿರುವುದ ರಿಂದ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದೆ. ಆ ಪ್ರಕಾರ ಈ ಬಾರಿಯೂ ಹಾಲಿ ಶಾಸಕ ಎಸ್‌. ಸುರೇಶ್‌ ಕುಮಾರ್‌ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಆದರೆ ಕಾಂಗ್ರೆಸ್‌ ಟಿಕೆಟ್‌ ವಿಚಾರ ಗೊಂದಲದ ಗೂಡಾಗಿದೆ. ಮಾಜಿ ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಅವರ “ರಂಗಪ್ರವೇಶದಿಂದ’ ಕೈ ಪಾಳೆಯದಲ್ಲಿನ ಲೆಕ್ಕಾಚಾರಗಳು ಅಂಕ ತಪ್ಪಿವೆ. ಈ ಮಧ್ಯೆ ರಾಜಾಜಿನಗರದಿಂದ ವೀರಶೈವ ಲಿಂಗಾಯತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕು ಎಂಬ ಬೇಡಿಕೆ ಕಾಂಗ್ರೆಸ್‌ ಅನ್ನು ಅಡಕತ್ತರಿಗೆ ಸಿಲುಕಿಸಿದೆ. ಹೀಗಾಗಿ ರಾಜಾಜಿ ನಗರಕ್ಕೆ ಕಾಂಗ್ರೆಸ್‌ ರಾಜಾ ಯಾರು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಜೆಡಿಎಸ್‌ ಗಂಗಾಧರ ಮೂರ್ತಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದರೂ, ಇದು ಜೆಡಿಎಸ್‌ನ “ಅಂತಿಮ ಬದಲಾವಣೆ ನಿಯಮ’ಕ್ಕೆ ಇದು ಒಳಪಡಲಿದೆ ಎನ್ನಲಾಗಿದೆ.

ಬಿಜೆಪಿಯಲ್ಲೂ ಆಕಾಂಕ್ಷಿ ಗಳ ಸಂಖ್ಯೆ ಹೆಚ್ಚು: ಈ ಕ್ಷೇತ್ರವನ್ನು ಐದು ಬಾರಿ ಗೆದ್ದಿರುವ ಬಿಜೆಪಿಯ ಎಸ್‌. ಸುರೇಶ್‌ ಕುಮಾರ್‌ ಮತ್ತೂಮ್ಮೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಆದರೆ ಬಿಜೆಪಿಯಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಸಚಿವ ಸ್ಥಾನದಿಂದ ನಿರ್ಗಮಿಸಿದ ಬಳಿಕ ರಾಜಕೀಯವಾಗಿ ಅಷ್ಟೊಂದು ಕಾಣಿಸಿಕೊಂಡಿರಲಿಲ್ಲ. ಆದರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು ಎಂದು ಹೇಳಲಾಗುತ್ತಿದೆ. ಸುರೇಶ್‌ ಕುಮಾರ್‌ ಸತತ ಐದು ಬಾರಿ ಗೆದ್ದಿದ್ದಾರೆ. ಈ ಬಾರಿ ಅವರ ಬದಲಿಗೆ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಅದರಂತೆ ಬಿಜೆಪಿಯ ಮಾಜಿ ನಗರ ಸಂಘಟನಾ ಕಾರ್ಯದರ್ಶಿ ಎಸ್‌. ರಘುನಾಥ್‌, ಮಾಜಿ ಕಾರ್ಪೊರೇಟರ್‌ಗಳಾದ ಮಂಜುನಾಥ್‌, ರಂಗಣ್ಣ ಬಿಜೆಪಿಯ ಟಿಕೆಟ್‌ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ.

ರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಪ್ರಬಲ ಅಭ್ಯರ್ಥಿಗಳು ಇಲ್ಲ ಎಂಬ ವಿಚಾರ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಚುನಾವಣ ಸಮಿತಿ ಸಭೆಯಲ್ಲಿ ಪ್ರಸಾವವಾಗಿದೆ. ಅಂತಹ ಕ್ಷೇತ್ರಗಳಲ್ಲಿ ರಾಜಾಜಿನಗರವೂ ಒಂದು ಎಂದು ಹೇಳಲಾಗುತ್ತಿದೆ. ಪ್ರತೀ ಚುನಾವಣೆಯಲ್ಲೂ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಬದಲಾಗಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ಇಲ್ಲಿ ಕಾಂಗ್ರೆಸ್‌ನಿಂದ ಮಹಿಳೆಯರೇ ಸ್ಪರ್ಧಿಸಿದ್ದಾರೆ. ಈ ಬಾರಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿಯಿಂದ ಕರೆತಂದು ಕಣಕ್ಕಿಳಿಸುವ ಇರಾದೆ ಕಾಂಗ್ರೆಸ್‌ ಮಾಡಿತ್ತು. ಆದರೆ ಸೋಮಣ್ಣ ಈ ಕ್ಷೇತ್ರಕ್ಕೆ ಮನಸ್ಸು ಮಾಡಿಲ್ಲ ಎನ್ನಲಾಗಿದೆ. ಅದಕ್ಕಾಗಿ ಬಿಜೆಪಿ ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಅವರನ್ನು ಕಣ್ಣಕ್ಕಿಳಿಸಲು ಕಾಂಗ್ರೆಸ್‌ ಮುಂದಾಗಿದೆ.

ಕೈ ಸ್ಥಳೀಯರ ವಿರೋಧ
ಪುಟ್ಟಣ್ಣ ಅವರಿಗೆ ಟಿಕೆಟ್‌ ನೀಡುವ ವಿಚಾರದ ಬಗ್ಗೆ ಸ್ಥಳೀಯ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿ “ಮೂಲ-ವಲಸಿಗ’ ವಿಚಾರ ಮುನ್ನೆಲೆಗೆ ಬಂದಿದ್ದು. ಕಾಂಗ್ರೆಸ್‌ನಿಂದ ಟಿಕೆಟ್‌ ಆಕಾಂಕ್ಷಿಗಳಾಗಿರುವ ಭವ್ಯ ನರಸಿಂಹಮೂರ್ತಿ, ಮನೋಹರ್‌, ರಘುವೀರ್‌ ಗೌಡ, ಪುಟ್ಟರಾಜ್‌ ನಮ್ಮಲ್ಲಿ ಯಾರಿಗಾದರೂ ಕೊಡಿ ಹೊರಗಿನವರಿಗೆ ಮಣೆ ಹಾಕಬೇಡಿ ಎಂದು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮುಂದೆಯೂ ಅಹವಾಲು ಇಟ್ಟಿದ್ದಾರೆ. ಈ ವಿವಾದ ಹೇಗೆ ಬಗೆಹರಿಯಲಿದೆ ಎಂದು ಕಾದು ನೋಡಬೇಕಿದೆ. ಜೆಡಿಎಸ್‌ ಕಳೆದ ವರ್ಷ ಡಿಸೆಂಬರ್‌ನಲ್ಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿತ್ತು. ಅದರಂತೆ ರಾಜಾಜಿನಗರಕ್ಕೆ ಪಕ್ಷದ ವಕ್ತಾರ ಎಲ್‌. ಗಂಗಾಧರಮೂರ್ತಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಅವರು ಕ್ಷೇತ್ರದಲ್ಲಿ ಚುನಾವಣ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಆಮ್‌ ಆದ್ಮಿ ಪಕ್ಷ ಬಿ.ಟಿ. ನಾಗಣ್ಣ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.