ಬಂಟ್ವಾಳ: ಇವಿಎಂ ಯಂತ್ರ ನಿಭಾವಣೆ ಮಾಹಿತಿ, ತರಬೇತಿ


Team Udayavani, Apr 1, 2019, 3:02 PM IST

01-April-12

ಇವಿಎಂ ಯಂತ್ರ ಸಹಿತ ವಿವಿಧ ಮಾಹಿತಿ ತರಬೇತಿ ಕಾರ್ಯಕ್ರಮ ನಡೆಯಿತು.

ಬಂಟ್ವಾಳ : ಲೋಕಸಭೆ ಚುನಾವಣೆ ಸಹಜ ಮತದಾನ ಪ್ರಕ್ರಿಯೆ ನಡೆಯುವಂತೆ ಮಾ. 31ರಂದು ಮೊಡಂಕಾಪು ಇನ್ಫೆಂಟ್‌ ಜೀಸಸ್‌ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಇವಿಎಂ ಯಂತ್ರ ಸಹಿತ ವಿವಿಧ ಮಾಹಿತಿ ತರಬೇತಿ ಸಹಾಯಕ ಚುನಾವಣಾಧಿಕಾರಿ ಮಹೇಶ್‌ ನೇತೃತ್ವದಲ್ಲಿ ನಡೆಯಿತು.

576 ಮಂದಿ ಅಧಿಕಾರಿಗಳು
ಒಟ್ಟು 576 ಮಂದಿ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದು ಇಬ್ಬರು ಗೈರಾಗಿದ್ದರು. ತರಬೇತಿ ಕೇಂದ್ರದ ಬಳಿ ಆ್ಯಂಬುಲೆನ್ಸ್‌ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಪವರ್‌ ಪಾಯಿಂಟ್‌ ಆಡಿಯೋ ಮತ್ತು ವೀಡಿಯೋ ಮೂಲಕ ಪ್ರಾತ್ಯಕ್ಷಿಕೆಯಲ್ಲಿ ಚುನಾವಣೆ ಹೇಗೆ ನಡೆಯುತ್ತದೆ. ಅಲ್ಲಿ ಬರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಮಧ್ಯಾಹ್ನ ಅನಂತರ ಇವಿಎಂ ಬಳಸುವುದು ಹೇಗೆ, ಅಂಧ ಮತದಾರರು ಬಂದರೆ ಅವರು ಹೇಗೆ ಮತದಾನ ಮಾಡುವುದು, ಇವಿಎಂ ದೋಷದ ಸಮಸ್ಯೆ ಬಂದರೆ ಅದನ್ನು ನಿಭಾಯಿಸುವ ಕ್ರಮ, ವಿವಿ ಪ್ಯಾಟ್‌ ಮತ್ತು ಮತದಾನ ಪ್ರಕ್ರಿಯೆಗಳಲ್ಲಿ ಆಧುನಿಕ ತಂತ್ರಜ್ಞಾನ ಕುರಿತು ತಿಳಿಸಲಾಯಿತು. ಇಬ್ಬರು ಇಡಿಸಿ ಅಧಿಕಾರಿಗಳು ಚುನಾವಣೆಯಂದು ಅರ್ಜಿ ನಮೂನೆ 12, 12ಎ ನೀಡುವ ಮತ್ತು ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಬಳಿ ವಿಶೇಷವಾಗಿ ಸ್ವಾಗತ ಕೊಠಡಿ ಇದ್ದು, ತರಬೇತಿ ಪಡೆಯಲು ಬಂದವರಿಗೆ ಸಹಕಾರಿಯಾಗಲು ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಲಾಗಿತ್ತು.

ಮುಂದಿನ ಎ. 9 ರಂದು ಎರಡನೇ ಹಂತದ ತರಬೇತಿ ನಡೆಯಲಿದ್ದು ಅಂದು ಬೇರೆಬೇರೆ ತಾಲೂಕಿನ ಅಧಿಕಾರಿಗಳಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಸಣ್ಣರಂಗಯ್ಯ ತಿಳಿಸಿದರು.

ತಾ.ಪಂ. ಕಾ.ನಿ. ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌, ಚುನಾವಣಾ ಉಪ ತಹಶೀಲ್ದಾರ್‌ ದಾದಾ ಫೈರೋಜ್‌, ಪ್ರಥಮ ದರ್ಜೆ ಸಹಾಯಕ ರಾಜ್‌ ಕುಮಾರ್‌, ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

21 ತರಬೇತಿ ಕೊಠಡಿ
ತರಬೇತಿಗೆ ಒಟ್ಟು 21 ತರಬೇತಿ ಕೊಠಡಿಗಳಿದ್ದು ಪ್ರತೀ ಕೊಠಡಿಯಲ್ಲಿ ಓರ್ವ ಸೆಕ್ಟರ್‌ ಆಫೀಸರ್‌, ಒಬ್ಬರು ಗ್ರಾಮಕರಣಿಕರು, ಓರ್ವ ಡಾಟಾ ಎಂಟ್ರಿ ಆರೇಟರ್‌ ಇದ್ದು ಮತಗಟ್ಟೆ ಅಧಿಕಾರಿಗಳಾದ ಪಿಆರ್‌ಒ ಮತ್ತು ಎಪಿಆರ್‌ಒಗಳು ವಿವಿಧ ಮಾಹಿತಿ ಪಡೆದರು.

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.