ಏಕಾಗ್ರತೆ ಬದುಕಿನ ಗುರಿ ಸಾಧನೆಗೆ ದಾರಿ


Team Udayavani, Oct 24, 2018, 1:25 PM IST

24-october-11.gif

ನಾವು ಮಾಡುವ ಯಾವುದೇ ಕೆಲಸದಲ್ಲಿ ಏಕಾಗ್ರತೆಯೊಂದಿದ್ದರೆ ಸುಲಭವಾಗಿ ಗುರಿಸಾಧನೆ ಮಾಡಬಹುದು ಎಂಬುದು ಸಾಧಕರ ಅನುಭವದ ಮಾತು. ಏಕಾಗ್ರತೆಯನ್ನು ಕೊಡಿಸುವುದು ಬೇರೆಯವರಿಂದ ಸಾಧ್ಯವಿಲ್ಲ. ನಾವೇ ನಮ್ಮೊಳಗೆ ಅದನ್ನು ಹುಡಕಬೇಕು. ಅದಕ್ಕಾಗಿ ಮನಸ್ಸನ್ನು ಸ್ಥಿರವಾಗಿಟ್ಟುಕೊಳ್ಳಬೇಕು. ಈ ಕುರಿತು ಮಾನಸಿಕವಾಗಿ ಮಾತ್ರವಲ್ಲ ದೈಹಿಕ ಸಿದ್ಧತೆಯನ್ನೂ ಮಾಡಿಕೊಳ್ಳಬೇಕು.

ಮನಸ್ಸು ಚಂಚಲವಾಗಿದ್ದರೆ ಓದು, ಬರವಣಿಗೆ ಮಾತ್ರವಲ್ಲ, ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಅರಿವು ಎಲ್ಲರಿಗೂ ಇದ್ದೇ ಇರುತ್ತದೆ. ಯಾವುದೇ ಒಂದು ಕಾರ್ಯದಲ್ಲಿ ಮನಸ್ಸನ್ನು ಏಕಾಗ್ರತೆಯಿಂದ ಇಟ್ಟುಕೊಳ್ಳುವುದು ಕಷ್ಟ. ಆದರೆ ಅಸಾಧ್ಯವಾದುದು ಎನಲ್ಲ,

ಪುಸ್ತಕ ಓದಲು ಕುಳಿತರೆ ಏಕಾಗ್ರತೆಯಿಂದ ಒಂದು ಗಂಟೆ ಓದಲು ಸಾಧ್ಯವಾಗುವುದಿಲ್ಲ ಎನ್ನುವುದು ಹೆಚ್ಚಿನ ವಿದ್ಯಾರ್ಥಿಗಳ ಅಳಲಾದರೆ, ಮಕ್ಕಳಂತೂ ಎಷ್ಟೇ ಓದಿದರೂ ಉತ್ತಮ ಅಂಕಗಳಿಸುತ್ತಿಲ್ಲ ಎನ್ನುವುದು ಹೆತ್ತವರ ದೂರು. ಆದರೆ ಇದಕ್ಕೆಲ್ಲ ಮೂಲ ಕಾರಣ ಏಕಾಗ್ರತೆಯ ಸಮಸ್ಯೆಯಾದರೂ ಇದನ್ನು ಕಂಡುಕೊಳ್ಳುವಲ್ಲಿ ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ಹೆತ್ತವರೂ ಎಡವುತ್ತಾರೆ.

ಹೊಸತನಕ್ಕೆ ಮಾರು ಹೋಗುತ್ತಿರುವ ಇಂದಿನ ಯುವಜನತೆ ಸಮಾಜದ ಇತರ ಸಂಗತಿಗಳ ನಡುವೆ ಒಂದೇ ವಿಚಾರದಲ್ಲಿ ಏಕಾಗ್ರತೆ ಕಂಡುಕೊಳ್ಳಲು ಸಾಧ್ಯ ವಾಗುತ್ತಿಲ್ಲ. ಹೀಗಾಗಿ ಅವರ ಬದುಕಿನ ಗುರಿಯೂ ಅಸ್ಪಷ್ಟವಾಗಿರುತ್ತದೆ. ಜತೆಗೆ ಅವರು ಯಾವ ದಾರಿಯಲ್ಲಿ ಸಾಗಬೇಕು ಎಂಬುದು ತಿಳಿಯದೆ ಗೊಂದಲಕ್ಕೊಳಗಾಗಿ ಬದುಕಿನಲ್ಲಿ ವೈಫ‌ಲ್ಯವನ್ನು ಅನುಭವಿಸುತ್ತಾರೆ.

ಬದುಕಿನ ಗುರಿ ಸಾಧನೆಗೆ ಮುಖ್ಯ
ಏಕ ಅಂದರೆ ‘ಒಂದು’ ಅಗ್ರ ಅಂದರೆ ;ತುದಿ’. ಏಕಾಗ್ರತೆ ಅಂದರೆ, ಒಂದೇ ಕಡೆಗೆ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದಾಗಿದೆ. ನಮ್ಮ ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಈ ಗುರಿ ಮುಟ್ಟಲು ಏಕಾಗ್ರತೆ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇದರ ಕೊರತೆ ಇಂದಿನ ಸಮಾಜದಲ್ಲಿ ಕಾಣುತ್ತಿದೆ. ಮನಸ್ಸು ಹತೋಟಿಯಲ್ಲಿಡುವ ಕಾರ್ಯಕ್ಕೆ ಮುಂದಾದರೆ ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಹೆತ್ತವರಿಗೆ ಮಕ್ಕಳು ಪರೀಕ್ಷೆಯಲ್ಲಿ ಮೊದಲ ಸ್ಥಾನಗಳಿಸಬೇಕು ಎಂಬ ಆಸೆ ಇರುತ್ತದೆ. ಇದೇ ಕಾರಣಕ್ಕೆ ಅವರ ಮೇಲೆ ನಿರಂತರವಾಗಿ ಒತ್ತಡವನ್ನು ಹೇರುತ್ತಲೇ ಇರುತ್ತಾರೆ. ಹೆತ್ತವರ ಒತ್ತಡಕ್ಕೆ ಮಣಿದು ವಿದ್ಯಾರ್ಥಿಗಳು ಒಲ್ಲದ ಮನಸ್ಸಿನಿಂದ ದಿನದಲ್ಲಿ 7- 8 ಗಂಟೆ ಓದುತ್ತಲೇ ಇರುತ್ತಾರೆ. ಒತ್ತಡದ ಕೆಲಸಗಳಲ್ಲಿ ಎಂದಿಗೂ ಏಕಾಗ್ರತೆ ಕಾಣಲು ಸಾಧ್ಯವಾಗುವುದಿಲ್ಲ. ಹೀಗಾಗಿ ವೈಫ‌ಲ್ಯವಂತೂ ಕಟ್ಟಿಟ್ಟ ಬುತ್ತಿ. ಪಾಠದ ಜತೆಗೆ ಆಟವೂ ಬೇಕು ಆಗ ಮಾತ್ರ ಮನಸ್ಸು ಹತೋಟಿಯಲ್ಲಿಡಲು ಸಾಧ್ಯವಾದೀತು.

ಧ್ಯಾನದಿಂದ ಏಕಾಗ್ರತೆ
ಏಕಾಗ್ರತೆ ಗಳಿಸಿಕೊಳ್ಳಲು ಪ್ರಮುಖ ಮಾರ್ಗವೆಂದರೆ ಅದು ಧ್ಯಾನ. ಇಂದು ಯಾವುದೇ ಯೋಗ ಪ್ರಾರಂಭಕ್ಕೂ ಮುನ್ನ ಕೆಲವು ನಿಮಿಷ ಧ್ಯಾನಸ್ಥರಾಗಿರಲು ಸಲಹೆ ನೀಡುತ್ತಾರೆ. ಇದರ ಮುಖ್ಯ ಉದ್ದೇಶವೇ ಏಕಾಗ್ರತೆಯನ್ನು ಕಂಡುಕೊಳ್ಳುವುದಾಗಿದೆ. ಹೆತ್ತವರು ತಮ್ಮ ಮಕ್ಕಳನ್ನು ಧ್ಯಾನಕ್ಕೆ ಒತ್ತಾಯಿಸಿದರೆ ಏಕಾಗ್ರತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಕೆಲವೊಂದು ಬಾರಿ ನಾವು ಕೆಲಸ ಮಾಡುವಂತಹ ಪರಿಸರ ಕೂಡ ಏಕಾಗ್ರತೆ ಕಳೆದುಕೊಳ್ಳಲು ಕಾರಣವಾಗುತ್ತದೆ. ಕೆಲಸ ಮಾಡುವಂತಹ ಸಂಸ್ಥೆಗಳಲ್ಲಿ ಆರೋಗ್ಯಕರ ವಾತಾವರಣವಿಲ್ಲದಿದ್ದರೆ ಏಕಾಗ್ರತೆ ಕುಗ್ಗುತ್ತದೆ.

ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡಗಳು ಹೆಚ್ಚಾಗಿರುತ್ತದೆ. ಅನೇಕ ಬಾರಿ ನಮ್ಮ ಮನಸ್ಸೇ ನಮ್ಮ ಮಾತು ಕೇಳುವುದಿಲ್ಲ. ಇದಕ್ಕೆ ಕಾರಣ ಏಕಾಗ್ರತೆಯ ಕೊರತೆ. ಯಾವುದೇ ಒಂದು ಕೆಲಸವನ್ನು ಆರಿಸಿಕೊಂಡರೆ ಆ ಕೆಲಸ ಮುಗಿಯುವವರೆಗೆ ಬೇರೆ ಕೆಲಸದಲ್ಲಿ ತೊಡಗ ಬಾರದು. ಈ ಸಮಯದಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಬೇರೆ ಆಲೋಚನೆಗಳನ್ನು ಮನಸ್ಸಿನೊಳಗೆ ಬರಲು ಬಿಡಬಾರದು. ಇಂದು ತಂತ್ರಜ್ಞಾನ ಕ್ಷೇತ್ರ ಮುಂದುವರಿದಿದ್ದು, ವಾಟ್ಸಪ್‌, ಫೇಸ್‌ಬುಕ್‌, ಟ್ವಿಟರ್‌ ಸಹಿತ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗುತ್ತಿದೆ. ನಮ್ಮಲ್ಲಿ ಏಕಾಗ್ರತೆ ಕಡಿಮೆಯಾಗಲು ಇದು ಕೂಡ ಕಾರಣ.

ಹೆಚ್ಚಿನವರು ಯಾವುದಾದರೊಂದು ಕೆಲಸವನ್ನು ಕೈಗೊಂಡರೆ ಅದನ್ನು ಪೂರ್ಣಗೊಳಿಸುವ ಮೊದಲು ಮತ್ತೊಂದು ಕೆಲಸಕ್ಕೆ ಅಣಿಯಾಗುತ್ತಾರೆ. ಇದು ಏಕಾಗ್ರತೆ ಕಳೆದುಕೊಂಡಿದ್ದೇವೆ ಎನ್ನುವುದರ ಸೂಚಕವಾಗಿದೆ. ವಿಳಂಬ ಪ್ರವೃತ್ತಿಯನ್ನು ಅನುಸರಿಸದೆ ಸಮಯಕ್ಕೆ ಸರಿಯಾಗಿ ಯೋಚಿಸಿದ ಕೆಲಸವನ್ನು ಮಾಡುತ್ತೇನೆ ಎಂಬ ನಿರ್ಧಾರವನ್ನು ಕೈಗೊಂಡರೆ ಏಕಾಗ್ರತೆ ಬೆಳೆಸಿಕೊಳ್ಳಲು ಸಾಧ್ಯವಿದೆ. ಯಾವುದೇ ಕೆಲಸದಲ್ಲಿ ಮಾನಸಿಕ ಶ್ರಮ ಮಾತ್ರ ಇದ್ದರೆ ಸಾಲದು, ದೈಹಿಕವಾಗಿ ಒಂದಷ್ಟು ವ್ಯಾಯಾಮಗಳನ್ನು ಮಾಡಿಕೊಂಡರೆ ಏಕಾಗ್ರತೆ ಬೆಳೆಸಿಕೊಳ್ಳಲು ಸಾಧ್ಯವಿದೆ. 

ಏಕಾಗ್ರತೆ ಬೆಳೆಸಿಕೊಳ್ಳಿ
ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಲು ಯೋಗದಿಂದ ಸಾಧ್ಯ. ಇದರಿಂದಾಗಿ ಮನಸ್ಸಿನ ಒತ್ತಡ ನಿವಾರಣೆಯಾಗಿ ಏಕಾಗ್ರತೆಯನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ಮಾನಸಿಕ ಸ್ಥಿರತೆಯನ್ನು ಸಾಧಿಸಬಹುದು. 

ಕೆಲಸಗಳಿಗೆ ಸಮಯ ಮಿತಿ ನಿಗದಿಯಾಗಲಿ
ಹೆಚ್ಚಿನ ಮಂದಿಗೆ ತಾವು ಮಾಡುವ ಕೆಲಸಗಳಲ್ಲಿ ಏಕಾಗ್ರತೆ ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಸಮಯವನ್ನು ಸರಿಯಾಗಿ ಪಾಲನೆ ಮಾಡದಿರುವುದು ಆಗಿರಬಹುದು. ಹೀಗಾಗಿ ಯಾವುದೇ ಕೆಲಸಗಳನ್ನು ಪ್ರಾರಂಭಿಸುವ ಮುಂಚೆಯೇ ಗಡುವು  ನಿರ್ಧರಿಸಿದರೆ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ. 

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.