ನೀಟ್‌ ಪರೀಕ್ಷೆ

ವೈದ್ಯಕೀಯ ಕ್ಷೇತ್ರದ ಬಾಗಿಲು

Team Udayavani, May 22, 2019, 6:00 AM IST

z-16

ಶಾಲಾ ಕಾಲೇಜುಗಳ ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದರೂ ಉನ್ನತ ಶಿಕ್ಷಣಕ್ಕಾಗಿ ಹೆಚ್ಚುವರಿ ಪರೀಕ್ಷೆಗಳನ್ನು ಎದುರಿಸಬೇಕಾದದ್ದು ಸದ್ಯದ ಸ್ಥಿತಿ.

ವಿದ್ಯಾರ್ಥಿಗಳ ಜ್ಞಾನ, ಅರ್ಹತೆ ಬೆಳೆ ಸುವ ಸಲುವಾಗಿ ಈ ಹೆಚ್ಚುವರಿ ಪರೀಕ್ಷೆಗಳನ್ನು ಮಾಡಲಾಗುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್‌ ಸೇರ ಬಯಸುವವರ ಮೊದಲ ಹೆಜ್ಞೆಯೇ ಈ ಹೆಚ್ಚುವರಿ ಪರೀಕ್ಷೆಗಳು. ಇಲ್ಲಿ ಉತ್ತಮ ರ್‍ಯಾಂಕ್‌ನಲ್ಲಿ ಉತ್ತೀರ್ಣರಾದರಷ್ಟೇ ಮುಂದಿನ ಬಾಗಿಲು ತೆರೆದುಕೊಳ್ಳುವುದು.

ಪಿಯುಸಿ ಬಳಿಕ ಎಂಜಿನಿಯರಿಂಗ್‌ , ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಸಿಇಟಿ, ನೀಟ್‌ನಂತಹ ಪರೀಕ್ಷೆಗಳನ್ನು ಎದುರಿಸುವ ಅನಿವಾರ್ಯತೆ ವಿದ್ಯಾರ್ಥಿಗಳಿಗೂ ಇದೆ. ಈ ಕ್ಷೇತ್ರಗಳಿಗೆ ಕಾಲಿಡಲು ಈ ಪರೀಕ್ಷೆಗಳು ಮುಖ್ಯವಾದವು. ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಡಲು ನೀಟ್‌ ಪರೀಕ್ಷೆ ಬರೆಯಲೇಬೇಕು. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜ್ಞಾನ, ಅರ್ಹತೆಯನ್ನು ಅಳೆಯಲಾಗುವುದು.

ನೀಟ್‌ ಪರೀಕ್ಷೆಗೆ ಅರ್ಹತೆ
ಸರಕಾರಿ ಅಥವಾ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇನ್ನಿತರ ಯಾವುದೇ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ ಪರೀಕ್ಷೆಯೇ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌). ಎಂಬಿಬಿಎಸ್‌, ಬಿಡಿಎಸ್‌ ಅಥವಾ ಸ್ನಾತಕೋತ್ತರ ಕೋರ್ಸ್‌ ಎಂ.ಡಿ., ಎಂ.ಎಸ್‌. ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಪ್ರವೇಶ ಪರೀಕ್ಷೆ. ನೀಟ್‌ ಪರೀಕ್ಷೆಯನ್ನು ನ್ಯಾಶ‌ನಲ್‌ ಟೆಸ್ಟಿಂಗ್‌ ಏಜೆನ್ಸಿ (ಎನ್‌ಟಿಎ) ನಡೆಸಿಕೊಡುತ್ತದೆ.

ಎನ್‌ಟಿಎಯು ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ವಯಸ್ಸು, ಅರ್ಹತೆ ಎಲ್ಲವನ್ನೂ ನಿರ್ಧರಿಸುತ್ತದೆ. ನೀಟ್‌ ಪರೀಕ್ಷೆ ಜಾರಿಯಾದ ಅನಂತರ ಈ ಹಿಂದೆ ಇದ್ದ ಅಲ್‌ ಇಂಡಿಯಾ ಪ್ರಿ ಮೆಡಿಕಲ್‌ ಟೆಸ್ಟ್‌ ಹಾಗೂ ಹಲವಾರು ರಾಜ್ಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ನಡೆಸುತ್ತಿದ್ದ ಪ್ರವೇಶ ಪರೀಕ್ಷೆಗಳು ರದ್ದುಗೊಂಡಿವೆ.

ನೀಟ್‌ ಪರೀಕ್ಷೆ ಬರೆಯುವವರು ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಫಿಸಿಕ್ಸ್‌, ಕೆಮೆಸ್ಟ್ರಿ ಬಯೋಲಾಜಿ, ಬಯೋ ಟೆಕ್ನಾಲಜಿ, ಇಂಗ್ಲಿಷ್‌ ಪಠ್ಯಗಳನ್ನು ಅಭ್ಯಸಿಸಿರಬೇಕು. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳನ್ನು ಪಡೆದಿರಬೇಕು.

ನೀಟ್‌ ಪರೀಕ್ಷೆಯನ್ನು 17- 25 ವಯ ಸ್ಸಿ ನೊ ಳ ಗಿನವ ರು ಹಲವು ಬಾರಿ ಬರೆಯಬಹುದು. ಆದರೆ ವಯಸ್ಸು ಮೀರಿ ದರೆ ನೀಟ್‌ ಪರೀಕ್ಷೆ ಎದುರಿಸುವಂತಿಲ್ಲ. ಎನ್‌ಟಿಎ ರೂಪಿಸಿದ ನಿಯಮಗಳ ಅನ್ವಯ ದೇಶದ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಆನ್‌ಲೈನ್‌ ಮೂಲಕ ನೀಟ್‌ ಪರೀಕ್ಷೆಗೆ ಅರ್ಜಿಗಳನ್ನು ಸಲ್ಲಿಸಿ ಬಂದ ಮಾಹಿತಿಯಂತೆ ಪರೀಕ್ಷೆ ಎದುರಿಸಬೇಕಾಗುತ್ತದೆ. ದೇಶದ ಯಾವುದೇ ಭಾಗಗಳ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾ ಮಂಡಳಿ ಸೂಚಿಸಿದರೆ ಅಲ್ಲಿ ತೆರಳಿ ಪರೀಕ್ಷೆ ಎದುರಿಸಬೇಕಾಗುತ್ತದೆ.

ಪೂರ್ವಸಿದ್ಧತೆ ಅಗತ್ಯ
ಯಾವುದೇ ಪರೀಕ್ಷೆಯನ್ನು ಎದುರಿಸಲು ಪೂರ್ವ ಸಿದ್ಧತೆ ಅಗತ್ಯವಾಗಿರುತ್ತದೆ. ಇದರಂತೆ ನೀಟ್‌ ಪರೀಕ್ಷೆಗೂ ಪೂರ್ವ ತಯಾರಿ ಬೇಕು. ವೈದ್ಯರಾಗಿ ಸೇವೆ ಮಾಡಬೇಕು ಎಂದು ಬಯಸುವವರು ಖಾಸಗಿ ಕಾಲೇಜುಗಳಿಗೆ ದುಬಾರಿ ಫೀಸ್‌ ನೀಡಿ ಸೇರಿಕೊಳ್ಳುವುದಕ್ಕಿಂತ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆದು ಕಾಲೇಜು ಮೆಟ್ಟಲೇರುವುದು ಉತ್ತಮ ಎಂಬ ಕಾರಣಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ನೀಟ್‌ ಪರೀಕ್ಷೆ ಬರೆಯಲು ಹವಣಿಸುತ್ತಾರೆ.

ಪ್ರಥಮ ಪಿಯುಸಿಯಲ್ಲೇ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರ ವಹಿಸಬೇಕಾಗುತ್ತದೆ. ಕಾಲೇಜು ದಿನಗಳಲ್ಲಿ ವಿಜ್ಞಾನ ವಿಷಯದಲ್ಲಿ ಆಯ್ದ ವಿಭಾಗಗಳನ್ನು ಹೆಚ್ಚು ಅಭ್ಯಸಿಸಬೇಕಾಗುತ್ತದೆ. ಆದಕ್ಕೆ ಪೂರಕವಾದ ಪುಸ್ತಕಗಳನ್ನು ಹೆಚ್ಚು ಓದಬೇಕಾಗುತ್ತದೆ.

ಏಕಾಗ್ರತೆ, ತಾಳ್ಮೆ ಈ ನೀಟ್‌ ಪರೀಕ್ಷೆಗೆ ಅತೀ ಮುಖ್ಯ. ಯಾವುದೇ ಕಾರಣಕ್ಕೂ ಬೇಜವಾಬ್ದಾರಿ ಬೇಡವೇ ಬೇಡ. ಈ ಪರೀಕ್ಷೆಯಲ್ಲೇ ಭವಿಷ್ಯ ನಿರ್ಧಾರವಾಗಲಿರುವುದರಿಂದ ಏಕಾಗ್ರತೆ, ದೃಢ ಮನಸ್ಸು, ತಾಳ್ಮೆಯಿಂದ ಪರೀಕ್ಷೆಗೆ ಸಿದ್ಧತೆ ನಡೆಸುವ ಅಗತ್ಯವಿದೆ. ಓದಿರುವ ವಿಷಯಗಳನ್ನೇ ಓದುತ್ತಿದ್ದೇನೆ ಎಂಬ ಉಡಾಫೆ ಇಟ್ಟುಕೊಳ್ಳದಿರಿ. ಇದು ನಿಮ್ಮ ಭವಿಷ್ಯಕ್ಕೆ ನೀವೇ ಅಂತ್ಯ ಹಾಡಿದಂತಾಗುತ್ತದೆ.
ಸ್ನೇಹಿತರೊಂದಿಗೆ, ಈಗಾಗಲೇ ನೀಟ್‌ ಪರೀಕ್ಷೆ ಬರೆದವರೊಂದಿಗೆ ಕೆಲ ಹೊತ್ತು ಚರ್ಚೆ ಮಾಡಿ. ಇದರಿಂದ ಕೆಲವೊಂದು ಅಗತ್ಯ ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ.

ನೀಟ್‌ ಪರೀಕ್ಷೆ ಬರೆದು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದರೆ ವೈದ್ಯಕೀಯ ಸೀಟುಗಳನ್ನು ಪಡೆದು ಕೊಳ್ಳಬಹುದು. ಇಲ್ಲವಾದಲ್ಲಿ ಮುಂದೆ ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಎದುರಿಸುವಾಗ ನೀಟ್‌ ಪರೀಕ್ಷೆ ಅನುಭವ ಉಪಯೋಗಕ್ಕೆ ಬರುತ್ತದೆ.

-  ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.