ಆಟಿಡೊಂಜಿ ದಿನ ಶೂಟಿಂಗ್‌ ಮತ್ತೆ ಶುರು!


Team Udayavani, May 16, 2019, 6:02 AM IST

Atidonji-Dina-tulu-Film

ತುಳು ಸಿನೆಮಾ “ಆಟಿಡೊಂಜಿ ದಿನ’ ಶೂಟಿಂಗ್‌ ಕಾಣುವ ಹಂತದಲ್ಲಿಯೇ ಕೋಸ್ಟಲ್‌ವುಡ್‌ನ‌ ಭರವಸೆಯ ನಿರ್ದೇಶಕ ಆರ್‌. ಹಾರೀಸ್‌ ಕೊಣಾಜೆಕಲ್‌ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಸಿನೆಮಾ ಪೂರ್ಣ ಶೂಟಿಂಗ್‌ ಕಾಣಲು ಸಾಧ್ಯವಾಗಿರಲಿಲ್ಲ. ಆದರೆ, ಶೇ. 80ರಷ್ಟು ಪೂರ್ಣವಾದ ಸಿನೆಮಾವನ್ನು ಅಲ್ಲಿಗೆ ಬಿಡಲು ಒಪ್ಪದ ಕಲಾವಿದರು ಬಾಕಿ ಉಳಿದ ಶೂಟಿಂಗ್‌ ಮಾಡಲು ನಿರ್ಧರಿಸಿದ್ದು, ಮೇ 10ರಿಂದ ಶೂಟಿಂಗ್‌ ಶುರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನೆಮಾದ ಮುಖ್ಯ ನಟ ಪೃಥ್ವಿ ಅಂಬರ್‌ ಈ ಹಿಂದೆ “ಕುಡ್ಲ ಟಾಕೀಸ್‌’ ಜತೆಗೆ ಮಾತನಾಡಿ, “ತುಳು ಚಿತ್ರದ ಸಮರ್ಥ ನಿರ್ದೇಶಕನಾಗಬೇಕು ಎಂಬುದು ಹಾರೀಸ್‌ ಅವರಿಗಿದ್ದ ಬಹುದೊಡ್ಡ ಕನಸು.

ಈ ನಿಟ್ಟಿನಲ್ಲಿ ಕೈಯಲ್ಲಿ ಕಥೆ ಹಿಡಿದುಕೊಂಡು ಮೂರು ವರ್ಷದಿಂದ ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದರು. ಈ ಎಳೆ ವಯಸ್ಸಿಗೆ ಚಿತ್ರ ನಿರ್ದೇಶನ ಬೇಡ ಎಂದೂ ಕೆಲವರು ಹೇಳಿದ್ದೂ ಇದೆ. ಆದರೆ, ಹಠಕ್ಕೆ ಬಿದ್ದು ನಿರ್ಮಾಪಕರನ್ನು ಹುಡುಕಿ, “ಆಟಿಡೊಂಜಿ ದಿನ’ ಎಂಬ ತುಳು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದರು.

ಶೇ. 80ರಷ್ಟು ಚಿತ್ರೀಕರಣ ಮುಗಿಸಿ, ಇನ್ನೇನು ಕನಸು ಈಡೇರಿತು ಎನ್ನುವಷ್ಟರಲ್ಲಿ ವಿಧಿಯಾಟಕ್ಕೆ ಬಲಿಯಾದರು ಎನ್ನುವುದನ್ನು ನಂಬುವುದಕ್ಕೆ ಕಷ್ಟವಾಗುತ್ತಿದೆ. ಆತನ ಕನಸನ್ನು ಪೂರ್ಣಮಾಡುವುದು ಈಗ ನಮ್ಮ ಮುಂದಿರುವ ಜವಾಬ್ದಾರಿ. ಹೀಗಾಗಿ ಶೇ.20ರಷ್ಟು ಬಾಕಿ ಇರುವ ಸಿನೆಮಾದ ಶೂಟಿಂಗ್‌ ಮತ್ತೆ ಮುಂದುವರಿಯಲಿದೆ ಎಂದಿದ್ದರು.

ಸದ್ಯದ ಮಾಹಿತಿ ಪ್ರಕಾರ, 2 ಹಾಡಿನ ಹಾಗೂ 3 ಫೈಟ್‌ ದೃಶ್ಯಗಳ ಚಿತ್ರೀಕರಣ ನಡೆಯಬೇಕಿದೆ. ಜತೆಗೆ 2- 3 ಕಥೆಯ ದೃಶ್ಯಗಳ ಶೂಟಿಂಗ್‌ ನಡೆಯಲು ಬಾಕಿಯಿದೆ. ಅಂದಹಾಗೆ, ಸಿನೆಮಾದಲ್ಲಿ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಪೃಥ್ವಿ ಅಂಬರ್‌, ನಿರೀûಾ ಶೆಟ್ಟಿ, ದೀಪಕ್‌ ರೈ, ಸೂರಜ್‌ ಸಾಲ್ಯಾನ್‌, ಶ್ರದ್ಧಾ ಸಾಲ್ಯಾನ್‌, ಪೃಥ್ವಿರಾಜ್‌ ಮೂಡುಬಿದಿರೆ ಇದ್ದಾರೆ. ಆಕಾಶ್‌ ಹಾಸನ ಕಾರ್ಯಕಾರಿ ನಿರ್ಮಾಪಕ ಹಾಗೂ ಸಹನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.