ಕರುನಾಡಿನಲ್ಲಿ ಕರಾವಳಿಯ “ಮಾಲ್ಗುಡಿ ಡೇಸ್‌’!


Team Udayavani, Jan 23, 2020, 4:48 AM IST

led-12

ಕೋಸ್ಟಲ್‌ವುಡ್‌ನ‌ಲ್ಲಿ “ಅಪ್ಪೆ ಟೀಚರ್‌’ ಸಿನೆಮಾ ಮಾಡಿದ ಸಾಧನೆ ಉಲ್ಲೇಖ ನೀಯ. ತುಳು ಸಿನೆಮಾ ರಂಗದಲ್ಲಿ ಈ ಸಿನೆಮಾ ಹೊಸ ಮನ್ವಂತರವನ್ನೇ ಸೃಷ್ಟಿಸಿತ್ತು. ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್‌ ಹಾಗೂ ಪ್ರೊಡಕ್ಷನ್‌ ಅರ್ಪಿಸಿದ ಕೆ. ರತ್ನಾಕರ್‌ ಕಾಮತ್‌ ನಿರ್ಮಾಣ ಹಾಗೂ ಕಿಶೋರ್‌ ಮೂಡುಬಿದಿರೆ ಕಥೆ-ಚಿತ್ರಕಥೆ, ನಿರ್ದೇಶನದ ಸಿನೆಮಾವಿದು.

ಈ ಸಿನೆಮಾದ ಬಳಿಕ ಇದೀಗ ಇದೇ ತಂಡ ಕರುನಾಡಿನಲ್ಲಿ “ಮಾಲ್ಗುಡಿ ಡೇಸ್‌’ ಮೂಲಕ ತೆರೆಯ ಮುಂದೆ ಬರಲು ಸಿದ್ಧತೆ ನಡೆಸಿದೆ. ಫೆ. 7ರಂದು ಸಿನೆಮಾ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ವಿಶೇಷವೆಂದರೆ, ಅಪ್ಪೆ ಟೀಚರ್‌ ನಿರ್ದೇಶಕ ಕಿಶೋರ್‌ ಮೂಡುಬಿದಿರೆ ನಿರ್ದೇಶನದ ಮಾಲ್ಗುಡಿ ಡೇಸ್‌ ಸಿನೆಮಾದಲ್ಲಿ ದೇವದಾಸ್‌ ಕಾಪಿಕಾಡ್‌ ಪುತ್ರ ಅರ್ಜುನ್‌ ಕಾಪಿಕಾಡ್‌ ಕೂಡ ಮುಖ್ಯ ಪಾತ್ರದಲ್ಲಿದ್ದಾರೆ. ಕೋಸ್ಟಲ್‌ವುಡ್‌ನ‌ಲ್ಲಿ ಹಲವು ಸಿನೆಮಾಗಳ ಮೂಲಕ ಮನೆಮಾತಾದ ಎವರ್‌ಗ್ರೀನ್‌ ಹೀರೋ ಅರ್ಜುನ್‌ ಈ ಸಿನೆಮಾದಲ್ಲಿ ಕಥೆಯ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಕೋಸ್ಟಲ್‌ವುಡ್‌ನ‌ ನಂಟು ಈ ಸಿನೆಮಾದ ಜತೆಗೆ ಬೆಸೆದುಕೊಂಡಿದೆ.

ಕಳೆದ ವರ್ಷ ಫೆ. 24ಕ್ಕೆ “ಮಾಲ್ಗುಡಿ ಡೇಸ್‌’ ಸಿನೆಮಾದ ಮುಹೂರ್ತ ನಡೆದಿತ್ತು. ಆ. 3ರ ವರೆಗೆ 3 ಹಂತದಲ್ಲಿ ಚಿತ್ರೀಕರಿಸಿ ಎಡಿಟಿಂಗ್‌ ಡಬ್ಬಿಂಗ್‌ ಮುಗಿದಿತ್ತು. ವಿಜಯ ರಾಘವೇಂದ್ರ ವಿಶೇಷ ಪಾತ್ರದ ಮೊದಲ ಪೋಸ್ಟರ್‌ ಈಗಾಗಲೇ ಸಾಕಷ್ಟು ಸುದ್ದಿ ಮಾಡುತ್ತಿದೆ. ವಿಜಯ ರಾಘವೇಂದ್ರರ ವೃತ್ತಿ ಜೀವನದಲ್ಲಿ ಇದೊಂದು ವಿಶೇಷ ಸಿನೆಮಾ. ಏಕೆಂದರೆ ಇಲ್ಲಿ ಅವರು ಹಿಂದೆಂದೂ ನಿರ್ವಹಿಸದ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಲ್ಲದೆ ಕಳೆದ ಒಂದು ವರ್ಷಗಳಿಂದ ವಿಜಯ ರಾಘವೇಂದ್ರ ಅವರು ತಮ್ಮನ್ನು ಬೇರೆ ಯಾವ ಸಿನೆಮಾದಲ್ಲೂ ತೊಡಗಿಸದೆ ತಮ್ಮನ್ನು ಪೂರ್ತಿಯಾಗಿ ಅರ್ಪಿಸಿದ್ದಾರೆ. ಕಥಾ ನಾಯಕಿಯಾಗಿ ಗ್ರೀಷ್ಮಾ ಶ್ರೀಧರ್‌ ಅವರು ಮೊದಲ ಬಾರಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಅವರ ಜತೆ ಬಿಗ್‌ಬಾಸ್‌ ಖ್ಯಾತಿಯ ಧನರಾಜ್‌, ಗೋಪಿನಾಥ್‌ ಭಟ್‌, ರೂಪೇಶ್‌, ತೇಜಸ್ವಿನಿ, ಸಂದೇಶ್‌ ಜೈನ್‌ ಇದ್ದಾರೆ.

ಒಟ್ಟು 60 ದಿನಗಳ ಚಿತ್ರೀಕರಣವನ್ನು ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ತೀರ್ಥಹಳ್ಳಿ, ಪಾಂಡಿಚೇರಿ, ಬಾಳೆಹೊನ್ನೂರು, ಕಳಸ, ಶೃಂಗೇರಿ, ಆಗುಂಬೆ, ಸುತ್ತಮುತ್ತ ಮಾಡಲಾಗಿದೆ. ಗಗನ್‌ ಬಡೇರಿಯಾ ಸಂಗೀತ ನೀಡಿದ್ದು, ಒಟ್ಟು 6 ಹಾಡುಗಳಿವೆ. ಪ್ರದೀಪ್‌ ನಾಯಕ್‌ ಸಂಕಲನ, ಉದಯ್‌ ಲೀಲಾ ಕ್ಯಾಮೆರಾ ಕೈಚಳಕವಿದೆ.

ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ರವಿಶಂಕರ್‌ ಪೈ, ಪೋಸ್ಟರ್‌ ಡಿಸೈನರ್‌ ಆಗಿ ಅಶ್ವಿ‌ನ್‌ ರಮೇಶ್‌, ಕಾಸ್ಟೂಮ್‌ ಡಿಸೈನರ್‌ ಶಿಲ್ಪಾ ಹೆಗ್ಡೆ ಮತ್ತು ರೋಷನ್‌ ಅಯ್ಯಪ್ಪ ನಿರ್ವಹಿಸಿದ್ದಾರೆ. ವಿಜಯ ರಾಘವೇಂದ್ರ ಅವರ ವಿಶೇಷ ಪಾತ್ರದ ಪ್ರೊಸ್ತೆಟಿಕ್‌ ಮೇಕಪ್‌ ಅನ್ನು ಕೇರಳ ಮೂಲದ ರೋಷನ್‌ ಎನ್‌.ಜಿ. ಮಾಡಿದ್ದಾರೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.