UV Fusion: ಯುಗಾದಿ ಸಂಭ್ರಮೋತ್ಸವ


Team Udayavani, Apr 24, 2024, 3:03 PM IST

6-uv-fusion

ಯುಗಾದಿ ಭಾರತೀಯರ ವರ್ಷಾರಂಭದ ದಿನ. ಮನ್ವಂತರದ ಬದಲಾವಣೆಯ ಕಾಲ. ಯುಗಾದಿ ಎನ್ನುವುದು ನಿಸರ್ಗಕ್ಕೊಂದು ಮರುಹುಟ್ಟು. ಯುಗಾದಿ ಎಂದರೆ ಸೃಷ್ಟಿಯ ಆರಂಭ ಅಷ್ಟೇ ಅಲ್ಲ ಮುಂದೆ ಬರಲಿರುವ ಎಲ್ಲ ಹಬ್ಬಗಳಿಗೂ ಮುನ್ನುಡಿ. ಚೈತ್ರ ಮಾಸದ ಹೊಸ ವರ್ಷದ ಮೊದಲನೆಯ ದಿನ ಸಂಭ್ರಮದಿಂದ ಆಚರಿಸಲ್ಪಡುವ ಮಹಾಪರ್ವವೇ ಯುಗಾದಿ.

ವಸಂತಮಾಸದ ಆಗಮನವೇ ಯುಗಾದಿ ಹಬ್ಬ. ಋತುಗಳ ರಾಜ ವಸಂತ ಕಾಲಿಟ್ಟನೆಂದರೆ, ಶಿಶಿರ ಋತು ವಿನಲ್ಲಿ ನಿಸ್ತೇಜವಾಗಿದ್ದ ಮರ – ಗಿಡಗಳು ಎಲೆಗಳನ್ನೆಲ್ಲ ಕಳಚಿಕೊಂಡು ಮತ್ತೆ ಚಿಗುರೊಡೆದು ಮರು ಜೀವ ಪಡೆಯುವ ನವೋಲ್ಲಾಸ ನೀಡುವ ಸಮಯವಿದು. ಪ್ರಕೃತಿಯಲ್ಲಿನ ಚಿಗುರಿನ ಮೋಹಕತೆಯ ಸುಂದರವಾದ ಗಳಿಗೆ.

ಈ ಸಮಯ ಮಾನವನ ಬದುಕಿನ ಏರಿಳಿತಗಳನ್ನು ಅರ್ಥಪೂರ್ಣವಾಗಿ ಬಿಂಬಿಸುವ ಪ್ರಕೃತಿಯ ಬದಲಾವಣೆಯ ರೂಪಕ. ಚೈತ್ರ-ವಸಂತರ ಆಗಮನವು ಹಳೆಯದೆಲ್ಲವ ಮರೆತು ಹೊಸತನ್ನು ಹುಡುಕುವ ಜನಸಾಮಾನ್ಯರಿಗೆ ಏನೊ ಒಂಥರಾ ಖುಷಿ, ಕಚಗುಳಿ ನೀಡುವ ಗಳಿಗೆ. ಮಾವಿನ ಚಿಗುರನ್ನು ತಿಂದು ಪಂಚಮ ಸ್ವರದಲ್ಲಿ ಹಾಡುವ ಕೋಗಿಲೆಯ ಕುಹೂ ಕುಹೂ ಗಾನ. ಸಡಗರ, ಸಂಭ್ರಮ, ಉಲ್ಲಾಸ ನೀಡುವ ಮನ.

ಯುಗಾದಿ ಹಬ್ಬದ ಚೈತ್ರ ಮಾಸವೆಂದರೆ ಅದು ಪ್ರಕೃತಿ ತನ್ನ ಹಳೆಯ ತೊಗಲನ್ನು ಬಿಟ್ಟು ಹೊಸ ಮೈ ತುಂಬಿಕೊಂಡು ನವೀನತೆ ಪಡೆಯುವ ಕಾಲ. ಅಂತೆಯೇ ಈ ಋತುವಿನಲ್ಲಿ ಹೊಂಗೆಯ ನೆರಳು, ತುಂಗೆಯ ಕಂಪು, ಬೇವು-ಮಾವುಗಳ ಗೊಂಚಲು-ಗೊಂಚಲುಗಳ ತೊನೆದಾಟ, ಎಲ್ಲೆಡೆ ಹೊಸ ಚಿಗುರಿನಿಂದ ಕಂಗೊಳಿಸುವ ಮರಗಳು ಹೊಸ ರೂಪ ತಳೆದು ಮನ ತಣಿಸುತ್ತವೆ.

ಹಿಂದೂ ಶಾಸ್ತ್ರಗಳ ಪ್ರಕಾರ, ಬ್ರಹ್ಮ ದೇವನು ಚೈತ್ರಮಾಸದ ಶುಕ್ಲಪಕ್ಷದ ಮೊದಲನೆಯ ದಿನದ ಸೂರ್ಯೋದಯ ಕಾಲ ಅರ್ಥಾತ್‌ ಯುಗಾದಿಯಂದು ಭೂಮಂಡಲವನ್ನು ಸೃಷ್ಟಿಸಿದ ಎಂಬುದು ಜನಜನಿತ. ಹಬ್ಬಗಳೆಂದರೆ ಸಂತೋಷ, ಸಡಗರ, ಸಂಭ್ರಮಗಳನ್ನು ಹೊತ್ತು ತರುವ ನೋವುಗಳನ್ನೆಲ್ಲಾ ಮರೆಸಿ ಮನಸ್ಸಿಗೆ ನೆಮ್ಮದಿ, ಖುಷಿ ನೀಡುವ ಬಾಂಧವ್ಯ. ಹಬ್ಬಗಳೆಂದರೆ ಸಂಸ್ಕೃತಿ, ಸಂಪ್ರದಾಯ ಮತ್ತು ಧ್ಯಾತ್ಮಿಕತೆಯನ್ನು ಒಟ್ಟಾಗಿ ಬೆಸೆಯುವ ಶುಭ ಸಂದರ್ಭ. ಈ ಹಬ್ಬಗಳಿಂದ ನಮ್ಮ ನಿತ್ಯ ಜೀವನದ ಏಕತಾನತೆಯು ದೂರವಾಗುತ್ತದೆ ಹಾಗೂ ಪ್ರಾಕೃತಿಕವಾಗಿ ನಮ್ಮ ಆರೋಗ್ಯಕ್ಕೆ ಈ ಹಬ್ಬಗಳು ಪೂರಕವಾಗುತ್ತವೆ.

ನಮ್ಮ ದೇಶ ಸಾಂಸ್ಕೃತಿಕವಾಗಿ ಸಂಪದ್ಭರಿತವಾಗಿದೆ. ಕೌಟುಂಬಿಕ / ಸಾಮಾಜಿಕ ಸಾಮರಸ್ಯ ಕಾಪಾಡುವಲ್ಲಿ ಹಬ್ಬಗಳು ಮಹತ್ವದ ಪಾತ್ರವಹಿಸುವುದರಿಂದ ಭಾರತೀಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಪ್ರಾಧಾನ್ಯತೆಯಿದೆ. ಹಬ್ಬಗಳೆಂದರೆ ಸಡಗರದ ಜತೆಗೆ ಧಾರ್ಮಿಕ ಹಾಗೂ ಸಾಮಾಜಿಕ ವಾಗಿ ಮನಗಳನ್ನು ಜತೆಗೂಡಿಸುತ್ತದೆ.

ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ಇತಿಹಾಸಿಕ, ಪೌರಾಣಿಕ, ವೈಜ್ಞಾನಿಕ ಮಹತ್ವಗಳಿವೆ. ಆದರೆ ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ಹಬ್ಬಗಳು ಮಹತ್ವ ಕಳೆದುಹೋಗುತ್ತಿವೆ ಎಂಬುದು ಎಲ್ಲರ ಕೊರಗು. ಆಧುನಿಕತೆಯ ವ್ಯಾಮೋಹಕ್ಕೆ ಬಲಿಯಾಗಿರುವ ಇಂದಿನ ಜನಾಂಗಕ್ಕೆ ಮನೆಗಳಲ್ಲಿ ಹಬ್ಬ ಆಚರಣೆಗಳೆಂದರೆ ಒಂಥರಾ ನಿರ್ಲಕ್ಷ್ಯಭಾವ.

ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ಹಬ್ಬಗಳ ಆಚರಣೆಯೇ ಕಣ್ಮರೆಯಾಗುತ್ತಿರುವುದು ವಿಪರ್ಯಾಸ. ಹಬ್ಬಗಳು ನಾಗರಿಕತೆಯೊಂದರ ಹಿರಿಮೆಯ ಧ್ಯೋತಕ. ಒಂದು ಸಮುದಾಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಎತ್ತಿಹಿಡಿಯುವ ಕಂಬಗಳಿದ್ದಂತೆ.

ನಶಿಸಿ ಹೋಗುತ್ತಿರುವ ನಮ್ಮ ಹಬ್ಬಗಳ ಉಳಿವಿಕೆಗಾಗಿ ಪರಂಪರಾಗತವಾಗಿ ಆಚರಣೆಗೆ ಒಳಪಟ್ಟ ಹಬ್ಬ ಹರಿದಿನಗಳನ್ನು ಹಿರಿಯರು ಆಚರಿಸುತ್ತಾ ಹಬ್ಬಗಳ ಮಹತ್ವ ಮತ್ತು ಔಚಿತ್ಯತೆಯನ್ನು, ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ತಮ್ಮ ಮಕ್ಕಳಿಗೂ ಮನವರಿಕೆ ಮಾಡಿ, ಅದು ಮುಂದಿನ ಪೀಳಿಗೆಯವರೆಗೆ ಮುಂದುವರಿಯುವಂತೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.

ಮಾನವರನ್ನು ಆತ್ಮ ಸಾಕ್ಷಾತ್ಕಾರದ ಮೂಲಕ ದೈವತ್ವದೆಡೆಗೆ ಕರೆದೊಯ್ಯುವುದು ಎಲ್ಲ ಹಬ್ಬಗಳ ಉದ್ದೇಶವಾಗಿದೆ. ನಾವು ಆಚರಿಸುವ ಹಬ್ಬಗಳು ಯಾವುದೇ ಆಗಿರಲಿ ಅವುಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸೋಣ. “ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷದ ಹೊಸತು ಹೊಸತು ತರುತಿದೆ’ ಎಂದು ಹೇಳುತ್ತಾ ನಾವೆಲ್ಲರೂ ಯುಗಾದಿಯ ನಿಜ ಅರ್ಥ ತಿಳಿದು  ಹಬ್ಬವನ್ನು ಆಚರಿಸೋಣ. ಯುಗಾದಿ  ಮರಳಿ ಬರಲಿ, ಎಲ್ಲರಿಗೂ ಸುಖ ಶಾಂತಿ ಸಮೃದ್ಧಿಯನ್ನು ತರಲಿ.

-ಪ್ರಕಾಶ ತದಡಿಕರ

ನವಿಮುಂಬಯಿ

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-uv-fusion

Life: ಬಯಸಿದಂತೆಲ್ಲಾ ಇರುವುದಿಲ್ಲ ಬದುಕು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

6-uv-fusion

UV Fusion: ಸಹವಾಸ ದೋಷ

5-uv-fusion

UV Fusion: ಬೆಳವಣಿಗೆ ಯಾವುದು?

4-uv-fusion

Women: ಹೆಣ್ಣು ಹೊರೆಯಲ್ಲ ಶಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.