ಸಹ್ಯಾದ್ರಿಯ ಮಡಿಲಿನ ಬೆಚ್ಚಗಿನ ಕುರುಹು


Team Udayavani, Jul 12, 2018, 2:48 PM IST

12-july-15.jpg

ಸ್ನೇಹಿತರ ಗುಂಪು ಕಟ್ಟಿಕೊಂಡು ಪ್ರವಾಸ ಹೊರಡುವ ಯೋಜನೆಯೊಂದು ಸಿದ್ಧವಾಯಿತು. ಆದರೆ ಎಲ್ಲಿಗೆ, ಹೇಗೆ, ಯಾವಾಗ ಎಂಬ ಪ್ರಶ್ನೆಗಳು ಆರಂಭವಾದಾಗ ಗೋವಾದಿಂದ ಚರ್ಚೆ ಶುರುವಾಗಿ ಕೊನೆಗೆ ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಕರೆಯಲ್ಪಡುವ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ನಿಂತಿತು.

ಮುಂಜಾನೆ ವೇಳೆ ಹಕ್ಕಿಗಳ ಚಿಲಿಪಿಲಿ ಕಲರವ ಕೇಳಿ ಬರುತ್ತಿರುವಾಗಲೇ ಮೊಬೈಲ್‌ ಅಲರಾಂ ಹೊಡೆಯಲು ಪ್ರಾರಂಭಿಸಿತು. ಎಲ್ಲರನ್ನೂ ಎಬ್ಬಿಸಿ, ನಿತ್ಯ ಕರ್ಮಾದಿಗಳನ್ನು ಮುಗಿಸಿ ಎಲ್ಲರೂ ಬಸ್‌ ನಿಲ್ದಾಣದಲ್ಲಿ ಒಟ್ಟು ಸೇರಿ ಮಂಗಳೂರಿನಿಂದ 119 ಕಿ.ಮೀ. ದೂರದಲ್ಲಿರುವ ಆಗುಂಬೆಯತ್ತ ಬಸ್‌ ಮೂಲಕ ನಮ್ಮ ಪ್ರಯಾಣ ಸುಮಾರು 7 ಗಂಟೆಗೆ ಪ್ರಾರಂಭವಾಯಿತು. 

ಮೂರು ಗಂಟೆಯ ಸುದೀರ್ಘ‌ ಪ್ರಯಾಣದ ಬಳಿಕ ನಾವೆಲ್ಲರೂ ಆಗುಂಬೆ ತಲುಪಿದೆವು. ದಟ್ಟವಾದ ಮಂಜು ಮುಸುಕಿದ ವಾತಾವರಣ ನಮ್ಮನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸುತ್ತಿತ್ತು. ಮಂಜು ಹೆಚ್ಚಾಗಿದ್ದರೆ ಚಳಿಯೂ ಹೆಚ್ಚಾಗತೊಡಗಿತು. ಈ ನಡುವೆ ಬಸ್‌ ನಿಲ್ದಾಣದ
ಹತ್ತಿರವಿದ್ದ ಹೊಟೇಲ್‌ ವೊಂದಕ್ಕೆ ತೆರಳಿ ತಿಂಡಿ, ಕಾಫಿ  ಮುಗಿಸಿದೆವು.

ಬಳಿಕ ದಟ್ಟ ಮಂಜು ಆವರಿಸಿದ ಆಗುಂಬೆಯನ್ನು ಹತ್ತತೊಡಗಿದೆವು. ಸಹ್ಯಾದ್ರಿ ಶ್ರೇಣಿಗಳ ಮೇಲಿನಿಂದ ಕೆಳಕ್ಕೆ ಧುಮ್ಮುಕ್ಕುವ ಚಿಕ್ಕಚಿಕ್ಕ ಜಲಪಾತಗಳು ಕಣ್ಮನಸ್ಸಿಗೆ ಮುದ ನೀಡಿದವು. ಪ್ರಕೃತಿಯ ಸೌಂದರ್ಯದ ನಡುವೆ ಬೀಗುತ್ತಿರುವ ಜೈನ ಮಂದಿರಗಳು, ಕೆಲವು ಜಲಪಾತಗಳು ನಮ್ಮನ್ನು ಕೈ ಬೀಸಿ ಕರೆದವು. ಈ ನಡುವೆ ಹೊಟ್ಟೆಯ ಹಸಿವನ್ನು ತಣಿಸಿದೆವು. ಎಲ್ಲೆಡೆ ಸುತ್ತಾಡಿ ಬರುವಷ್ಟರಲ್ಲಿ ಸೂರ್ಯಾಸ್ತಮಾನದ ಸಮಯವಾಗುತ್ತಿತ್ತು. ಕಟ್ಟಿಕೊಂಡು ಬಂದಿದ್ದ ತಿಂಡಿಪೊಟ್ಟಣಗಳೆಲ್ಲ ಖಾಲಿಯಾಗಿದ್ದವು. ದಾರಿಯಲ್ಲಿ ಮುಂದೆಮುಂದೆ ಸಾಗುತ್ತಿದ್ದಾಗ ದೈತ್ಯ ವೃಕ್ಷಗಳು ನಮ್ಮನ್ನು ತಲೆಯೆತ್ತಿ ಇಣುಕಿ ಮತ್ತೊಮ್ಮೆ ಬನ್ನಿ ಎಂದು ಹೇಳಿದಂತೆ ಭಾಸವಾಗುತ್ತಿತ್ತು.

ಸೂರ್ಯಾಸ್ತಮಾನವನ್ನು ಸವಿಯಲು ಬೆಟ್ಟದ ತುದಿಗೆ ನಾವೆಲ್ಲರೂ ತೆರಳುತ್ತಿದ್ದಂತೆಯೇ ಸೂರ್ಯನು ನಮಗೆ ಬೀಳ್ಕೊಡಲು ಸಿದ್ಧನಾಗಿ ನಿಂತಿದ್ದ. ಮಳೆಗಾಲವಾದ್ದರಿಂದ ಪ್ರಕೃತಿಯ ಸೊಬಗನ್ನು ಸವಿಯಲು ಬಂದಿದ್ದ ಪ್ರವಾಸಿಗರ ದಂಡೇ ಇಲ್ಲಿ ನೆರೆದಿತ್ತು. ಸೂರ್ಯಾಸ್ತಮಾನದ ಸೊಬಗನ್ನು ಕಣ್ತುಂಬಿಕೊಂಡು ಒಲ್ಲದ ಮನಸ್ಸಿನಿಂದ ಆಗುಂಬೆಯಿಂದ ಹಿಂತಿರುಗಿ ಮಂಗಳೂರಿನ ಹಾದಿ ಹಿಡಿದೆವು.

ರೂಟ್‌ ಮ್ಯಾಪ್‌
· ಮಂಗಳೂರಿನಿಂದ ಉಡುಪಿ ಮೂಲಕ ಆಗುಂಬೆಗೆ ಸುಮಾರು 119 ಕಿ.ಮೀ. ದೂರ
· ಸಾಕಷ್ಟು ಬಸ್‌ ಸೌಲಭ್ಯಗಳಿವೆ. ಖಾಸಗಿ ವಾಹನ ಮಾಡಿಕೊಂಡು ಹೋದರೆ ಹೆಚ್ಚಿನ ಸ್ಥಳಗಳನ್ನು ಸುತ್ತಾಡಬಹುದು.
· ಸೂರ್ಯಾಸ್ತಮಾನ, ಎತ್ತರದಿಂದ ಧುಮ್ಮಿಕ್ಕುವ ಜಲಪಾತಗಳು ಇಲ್ಲಿನ ಪ್ರಮುಖ ಆಕರ್ಷಣೆ 
· ಗುಡ್ಡಗಾಡು ಪ್ರದೇಶವಾದ್ದರಿಂದ ಹತ್ತಿರದಲ್ಲಿ ಊಟ, ವಸತಿ ವ್ಯವಸ್ಥೆಯಿಲ್ಲ.

 ಸುಶಾಂತ್‌

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.