UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ


Team Udayavani, Sep 18, 2024, 5:08 PM IST

17-uv-fusion

ಭೂಮಿಯ ಮೇಲೆ ಮನುಷ್ಯ ಆರೋಗ್ಯಕರವಾಗಿ ಜೀವನ ನಡೆಸಲು ಅತೀ ಮುಖ್ಯವಾಗಿ ಬೇಕಾಗಿರುವ ಗಾಳಿ, ನೀರು, ಬೆಳಕು ಎಲ್ಲವೂ ಪ್ರಕೃತಿ ಮಾತೆಯ ವರದಾನ. ಪ್ರಕೃತಿ ಇಲ್ಲದೆ ಮಾನವನ ಬದುಕೇ ಇಲ್ಲ. ಈ ಎಲ್ಲ ಸಂಗತಿಗಳನ್ನು ನಾವು ತಿಳಿದಿದ್ದರೂ ಪ್ರಕೃತಿಯನ್ನು ಉಳಿಸಿಕೊಳ್ಳುವಲ್ಲಿ ವಿಫ‌ಲರಾಗುತ್ತಿದ್ದೇವೆ. ಇದರರ್ಥ ಮುಂದೆ ನಮ್ಮನ್ನು ನಾವು ಉಳಿಸಿಕೊಳ್ಳಲು ಆಗದಂತಹ ಪರಿಸ್ಥಿತಿಗೆ ಬರುತ್ತೇವೆ ಎಂದು.

ಇತ್ತೀಚೆಗೆ ಅನೇಕ ಪ್ರಕೃತಿ ವಿಕೋಪಗಳು ನಮ್ಮ ಕೆಣ್ಣೆದುರೇ ನಡೆಯುತ್ತಿ¤ದೆ. ಇದಕ್ಕೆಲ್ಲ ಕಾರಣ ನಾವೇ… ಬುದ್ಧಿವಂತ ಮನುಜರು. ಬೇಸಗೆಯ ಪ್ರಾರಂಭದಲ್ಲೇ ನೀರಿಗಾಗಿ ಪರದಾಟ, ಮಳೆಗಾಲ ಪ್ರಾರಂಭವಾಗುತ್ತಲೇ ಭೂಕುಸಿತ, ಪ್ರವಾಹಗಳು. ಇನ್ನು ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ, ಹಾನಿಗೊಳ್ಳುತ್ತಿರುವ ಸೂರ್ಯನ ನೇರಳಾತೀತ ಕಿರಣಗಳನ್ನು ತಡೆದು ಜೀವ ಸಂಕುಲವನ್ನು ರಕ್ಷಿಸುತ್ತಿರುವ ಓಝೋನ್‌ ಪದರ, ಹೀಗೆ ಅನೇಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದೆ. ಇದಕ್ಕೆಲ್ಲ ಪ್ರಮುಖ ಕಾರಣ ಏನು ಎಂದು ಯೋಚಿಸಿದರೆ ನಮ್ಮ ಕಣ್ಣ ಎದುರು ಕಾಣುವುದು ಪರಿಸರ ನಾಶ.

ನಮ್ಮ ಹಿರಿಯರು ಹೇಳುತ್ತಿದ್ದ ಕಾಲ, ಗತಿಗಳು ಈಗಿಲ್ಲ, ಎಲ್ಲವೂ ಬದಲಾಗಿದೆ. ಹವಾಮಾನ ವೈಪರೀತ್ಯದಿಂದ ವ್ಯತಿರಿಕ್ತ ಪರಿಣಾಮವನ್ನು ನಾವು ಕಾಣುತ್ತಿದ್ದೇವೆ. ಎಲ್ಲವೂ ನಮ್ಮಿಂದಲೇ, ನಾವೇ ಮಾಡಿಕೊಂಡಿರುವುದು. ಇಂದು ಪರಿಸರ ಸಂರಕ್ಷಣೆ ಎನ್ನುವುದು ಕೇವಲ ಒಂದು ದಿನಕ್ಕೆ ಸೀಮಿತವಾದ ಪದವಾಗಿ ಬಿಂಬಿತವಾಗುತ್ತಿದೆ. ಒಂದು ಕಡೆ ಅಭಿವೃದ್ಧಿಯ ಹೆಸರಿನಲ್ಲಿ ಕಡಿಯುತ್ತಿರುವ ಮರ-ಗಿಡಗಳು ಮತ್ತೂಂದೆಡೆ ಕೇವಲ ಛಾಯಾಚಿತ್ರಕ್ಕಾಗಿ ಗಿಡ ನೆಟ್ಟು ಮತ್ತೆ ಅದರತ್ತ ಹೋಗದ ನಾವುಗಳು.

ಹೀಗಿರುವಾಗ ಹೇಗೆ ತಾನೆ ಪ್ರಕೃತಿ ಬೆಳೆಯಲು ಸಾಧ್ಯ. ಒಬ್ಬ ಮನುಷ್ಯನಿಗೆ ಆಮ್ಲಜನಕಯುಕ್ತ ಶುದ್ಧ ಗಾಳಿ ದೊರಕಬೇಕಾದರೆ ತಲಾ ಒಬ್ಬರಿಗೆ  ಏಳು ಮರ ಗಿಡಗಳು ಬೇಕು ಎಂದು ಹೇಳಲಾಗುತ್ತದೆ. ಇದಂತೂ ನಗರ ಪ್ರದೇಶಗಳಲ್ಲಿ ಅಸಾಧ್ಯವೇ ಸರಿ. ಇನ್ನು ಮುಂದಿನ ಜನಾಂಗದ ಜೀವನ ಮಟ್ಟ ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ.

ಈ ಕುರಿತಂತೆ ಪ್ರತಿಯೊಬ್ಬರು ಜಾಗೃತಗೊಳ್ಳುವ ಅವಶ್ಯಕತೆ ಇದೆ. ಇಲಾಖೆಯೂ ಆರ್ಥಿಕ ಲಾಭದ ಉದ್ದೇಶಕ್ಕೆ ಗಿಡಗಳನ್ನು ನೆಟ್ಟು ಬೆಳೆಸದೆ ವಾಸ್ತವವಾಗಿ ಸಮಾಜವನ್ನು ನೋಡಬೇಕು. ಹಸುರಿದ್ದರೆ ಉಸಿರು ಎನ್ನುವುದು ಸರ್ವಕಾಲಕ್ಕೂ ಸತ್ಯ. ಈ ನಿಟ್ಟಿನಲ್ಲಿ ನಮ್ಮ ಮನುಕುಲವನ್ನು ಉಳಿಸಿಕೊಳ್ಳವಲ್ಲಿ ನಾವೆಲ್ಲರೂ ಕಟಿಬದ್ಧರಾಗೋಣ.

-ಲತಾ ಚೆಂಡೆಡ್ಕ ಪಿ.

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

16-uv-fusion

UV Fusion: ಎಲ್ಲರಿಗೂ ಬದುಕುವ ಹಕ್ಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.