ರುಚಿರುಚಿಯಾದ ರಾಗಿ ಸಂಡಿಗೆ ಮಾಡಿನೋಡಿ


Team Udayavani, Mar 23, 2019, 7:48 AM IST

10.jpg

ಹಪ್ಪಳ, ಸಂಡಿಗೆ ಊಟದ ರುಚಿಯನ್ನೇ ಹೆಚ್ಚಿಸುತ್ತದೆ. ಪಲ್ಯ, ಸಾಂಬಾರು ಜತೆಗಿಲ್ಲದಿದ್ದರೂ ಸ್ವಲ್ಪ ಸಿಹಿ, ಸ್ವಲ್ಪ ಖಾರವಾಗಿರುವ ಸಂಡಿಗೆ ಇದ್ದರೆ ಸುಲಭವಾಗಿ ಊಟ ಮಾಡಿ ಮುಗಿಸಬಹುದು. ಹೆಚ್ಚಿನವರು ಸಂಡಿಗೆಯನ್ನು ಹಣ ಕೊಟ್ಟು ತಂದು ಮನೆಯಲ್ಲಿ ಎಣ್ಣೆಯಲ್ಲಿ ಕಾಯಿಸಿ ಸವಿಯುತ್ತಾರೆ. ಆದರೆ ಮನೆಯಲ್ಲೇ ಮಾಡುವ ಸಂಡಿಗೆ ಹೆಚ್ಚು ರುಚಿಯಾಗಿರುತ್ತದೆ ಮತ್ತು ಆರೋಗ್ಯಕರವಾಗಿಯೂ ಇರುತ್ತದೆ. ಈರುಳ್ಳಿ, ಬೆಳ್ಳುಳ್ಳಿ, ಅಕ್ಕಿ ಹಿಟ್ಟಿ ನಿಂದ ಸಂಡಿಗೆ ಮಾಡುವುದು ಹೆಚ್ಚಿನವರಿಗೆ ಗೊತ್ತೇ ಇರುತ್ತದೆ. ಆದರೆ ಆರೋಗ್ಯಕರವಾದ ರಾಗಿ ಸಂಡಿಗೆ ಮಾಡುವ ಬಗ್ಗೆ ತಿಳಿದಿರಲಿಕ್ಕಿಲ್ಲ.

ಹೆಚ್ಚಿನ ತಾಳೆ ಮತ್ತು ಸಮಯವನ್ನು ಬೇಡುವ ಸಂಡಿಗೆಯಲ್ಲಿ ರಾಗಿ ಸೆಂಡಿಗೆ ಅತ್ಯಂತ ರುಚಿಯಾಗಿರುತ್ತದೆ ಮಾತ್ರವಲ್ಲ ಆರೋಗ್ಯಕ್ಕೆ ಕೂಡ ಇದು ಉತ್ತಮ. ರಾಗಿ ಸಂಡಿಗೆ ಮಾಡುವುದು ಬಲು ಸುಲಭ. ಇದಕ್ಕಾಗಿ ಬೇಕಾಗಿರುವ ಅಗತ್ಯದ ವಸ್ತುಗಳೆಂದರೆ ರಾಗಿ ಹಿಟ್ಟು, ಮಜ್ಜಿಗೆ, ನೀರು, ಉಪ್ಪು, ಹಸಿ ಮೆಣಸು, ಜೀರಿಗೆ, ಇಂಗು, ಬಿಳಿ ಎಳ್ಳು. ರಾಗಿ ಹಿಟ್ಟಿಗಾಗಿ ರಾಗಿಯನ್ನು ತಂದು ಚೆನ್ನಾಗಿ ಒಣಗಿಸಿ ಹಿಟ್ಟು ಮಾಡಿಟ್ಟುಕೊಳ್ಳಿ.

ಸುಮಾರು ಅರ್ಧಕಪ್‌ ರಾಗಿಗೆ ಅರ್ಧ ಕಪ್‌ ಮಜ್ಜಿಗೆ, ಸ್ವಲ್ಪ ನೀರು ಹಾಕಿ ಗಂಟಿಲ್ಲದಂತೆ ಕಲಸಿಟ್ಟು ಕೊಳ್ಳಿ. 2 ಹಸಿ ಮೆಣಸು, ಅರ್ಧ ಚಮಚ ಜೀರಿಗೆ, ಸ್ವಲ್ಪ ಇಂಗು ಸೇರಿಸಿ ತರಿತರಿಯಾಗಿ ರುಬ್ಬಿ ಕೊಳ್ಳಿ. ಬಾಣಲೆಗೆ ಎರಡು ಲೋಟ ನೀರು ಹಾಕಿ ಕುದಿಯಲು ಇಡಿ. ಕುದಿಯುತ್ತಿರುವ ನೀರಿಗೆ ಉಪ್ಪು, ಜೀರಿಗೆಯ ಮಿಶ್ರಣವನ್ನು ಹಾಕಿ. 

ಅನಂತರ ಕಲಸಿಟ್ಟ ರಾಗಿ ಹಿಟ್ಟನ್ನು ಸೇರಿಸಿ. ಚೆನ್ನಾಗಿ ಮಗುಚುತ್ತಾ ಇರಬೇಕು. ರಾಗಿ ಕುದಿಯುತ್ತ ದಪ್ಪವಾಗುತ್ತದೆ. ಆಗ ಬಿಳಿ ಎಳ್ಳು ಸೇರಿಸಿ. ಹಿಟನ್ನು ಒಂದು ಚಮಚದ ಅಳತೆಯಲ್ಲಿ ಬಟ್ಟೆ ಅಥವಾ ಪ್ಲಾಸ್ಟಿಕ್‌ ಶೀಟ್‌ ಮೇಲೆ ಹರಡಿ. ಎರಡು ಮೂರು ದಿನ ಬಿಸಿಲಿಗೆ ಚೆನ್ನಾಗಿ ಒಣಗಿಸಿ. ಅನಂತರ ಗಾಳಿಯಾಡದ ಡಬ್ಬದಲ್ಲಿ ಸಂಗ್ರಹಿಸಿಟ್ಟರೆ ಬೇಕಾದಾಗ ಎಣ್ಣೆಯಲ್ಲಿ ಕರಿದು ರಾಗಿ ಸೆಂಡಿಗೆಯನ್ನು ಸವಿಯಬಹುದು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.