ಬಗೆ ಬಗೆ ಖಾದ್ಯ


Team Udayavani, Dec 1, 2018, 3:30 PM IST

1-december-13.gif

ಬೂದುಗುಂಬಳದ ಹಲ್ವ
ಬೇಕಾಗುವ ಸಾಮಗ್ರಿ

ಬೀಜ ತೆಗೆದ ಕುಂಬಳಕಾಯಿ ತುರಿ- 1ಕಪ್‌, ಹೆರೆದ ಉಂಡೆ ಬೆಲ್ಲದ ಪುಡಿ- 1 ಕಪ್‌, ದ್ರಾಕ್ಷಿ, ಗೋಡಂಬಿ, ಏಲಕ್ಕಿ ಪುಡಿ, ತುಪ್ಪ.

ಮಾಡುವ ವಿಧಾನ
ದಪ್ಪ ತಳದ ಪಾತ್ರೆಯಲ್ಲಿ ತುಪ್ಪ ಹಾಕಿ ದ್ರಾಕ್ಷಿ, ಗೋಡಂಬಿಯನ್ನು ಹುರಿದು ತೆಗೆದಿಟ್ಟುಕೊಳ್ಳಿ. ನಂತರ, ತುಪ್ಪದ ಜಿಡ್ಡಿಗೆ ಹೆರೆದ ಉಂಡೆ ಬೆಲ್ಲದ ಪುಡಿಯನ್ನು ಏಲಕ್ಕಿ ಪುಡಿಯೊಂದಿಗೆ ಹಾಕಿ ಬೆಚ್ಚಗಾಗಿಸಿ, ಅದಕ್ಕೆ ಕುಂಬಳಕಾಯಿ ತುರಿಯನ್ನು ಬೆರೆಸಿ ಸಣ್ಣ ಉರಿಯಲ್ಲಿ ಬೇಯಿಸಿ. ಕುಂಬಳಕಾಯಿ ತುರಿಯಲ್ಲಿ ನೀರಿನಂಶ ಇರುವುದರಿಂದ ಬೇರೆ ನೀರಿನ ಅಗತ್ಯ ಇರುವುದಿಲ್ಲ. ಸ್ವಲ್ಪ ಮೇಲು¤ಪ್ಪ ಹಾಕಿ ಮಗುಚುತ್ತಿರಿ. ಆ ಮಿಶ್ರಣ ಪಾತ್ರೆಯನ್ನು ಬಿಟ್ಟು ಬರುತ್ತಿದೆಯೆಂದರೆ ಹಲ್ವಾ ಸಿದ್ಧವಾದಂತೆ. ತುಪ್ಪ ಹಚ್ಚಿದ ಇನ್ನೊಂದು ಪಾತ್ರೆಗೆ ಈ ಮಿಶ್ರಣವನ್ನು ವರ್ಗಾಯಿಸಿ, ಹುರಿದ ದ್ರಾಕ್ಷಿ ಗೋಡಂಬಿಗಳನ್ನು ಸೇರಿಸಿದರೆ ಸ್ವಾದಿಷ್ಟ ಹಲ್ವಾ ಸಿದ್ಧ.

ಜಾಮೂನು 
ಬೇಕಾಗುವ ಸಾಮಗ್ರಿ:
ಜಾಮೂನು ಮಿಶ್ರಣ, ಬೆಲ್ಲದ ಪುಡಿ, ಏಲಕ್ಕಿ ಪುಡಿ.

ಮಾಡುವ ವಿಧಾನ: ಬೆಲ್ಲದ ಪುಡಿಗೆ ಸಮಪ್ರಮಾಣದ ನೀರು ಹಾಕಿ ಕರಗಿಸಿ, ಮಧ್ಯಮ ಉರಿಯಲ್ಲಿ ಬುರುಗು ಬರುವಷ್ಟು ಸಮಯ ಕುದಿಸಿ. ಹಾಗೆ ತಯಾರಾದ ಬೆಲ್ಲದ ದ್ರಾವಣವನ್ನು ಶೋಧಿಸಿ, ಅದನ್ನು ಬೇರೆ ಪಾತ್ರೆಗೆ ವರ್ಗಾಯಿಸಿ. ಪರಿಮಳಕ್ಕೆ ಏಲಕ್ಕಿ ಪುಡಿ ಸೇರಿಸಿ. ಅನಂತರ, ಸಣ್ಣ ಉರಿಯಲ್ಲಿ ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಲು ಬಿಟ್ಟು, ಜಾಮೂನು ಮಿಶ್ರಣವನ್ನು ತುಸು ನೀರು ಹಾಕಿ, ನಾದದೇ, ಮೃದುವಾಗಿ ಕಲೆಸಿಟ್ಟುಕೊಳ್ಳಿ. ಅಂಗೈಗೆ ತುಪ್ಪ ಸವರಿಕೊಂಡು, ಕಲಸಿಟ್ಟ ಹಿಟ್ಟನ್ನು ಸ್ವಲ್ಪ ತೆಗೆದು ಕೊಂಡು ಸಣ್ಣ ಉಂಡೆ/ಬೇಕಾದ ಆಕಾರ ಮಾಡಿಕೊಂಡು ಕಾದಿರುವ ಎಣ್ಣೆಯಲ್ಲಿ ಬಿಡಿ. (ಉರಿ ಹೆಚ್ಚಿಸಿದರೆ ಜಾಮೂನಿನ ಹೊರಭಾಗ ಕಂದು ಬಣ್ಣವಾಗಿ ಒಳಗೆ ಬೇಯದಿರುವ ಸಾಧ್ಯತೆ ಇದೆ) ಬಿಳಿಯ ಉಂಡೆಗಳು ಹೊಂಬಣ್ಣಕ್ಕೆ ತಿರುಗಿದಾಗ ತೆಗೆದು ಬದಿಗಿಟ್ಟುಕೊಳ್ಳಿ. ಮುಂದಿನ ಜಾಮೂನುಗಳ ಉಂಡೆ ತಯಾರಿಸಿ ಎಣ್ಣೆಯಲ್ಲಿ ಬೇಯಲು ಬಿಟ್ಟ ಅನಂತರ ತೆಗೆದಿರಿಸಿದ ಜಾಮೂನುಗಳನ್ನು (ಜಾಮೂನನ್ನು ಮುರಿದು ನೋಡಿದಾಗ ಮೇಲಿನ ಪದರ ತುಸು ಗರಿಗರಿ ಹಾಗೂ ಒಳಗಿನ ತಿರುಳು ಮೃದುವಾಗಿ ಸಂಪೂರ್ಣ ಬೆಂದಿರುವುದನ್ನು ಕಾಣಬಹುದು) ಬೆಲ್ಲದ ದ್ರಾವಣಕ್ಕೆ ಒಂದೊಂದಾಗಿ ಹಾಕಿ, ಸಿಹಿ ಹೀರಲು ಬಿಡಿ. 15-20 ನಿಮಿಷ ಸಿಹಿಯಲ್ಲಿ ಅದ್ದಿದ, ಬಿರುಕಿಲ್ಲದಂತೆ ಕಾಣಿಸುವ ಜಾಮೂನು ರುಚಿಕರವಾಗಿ ಇರುತ್ತದೆ.

ಬ್ರೆಡ್‌ ಪಕೋಡ 
ಬೇಕಾಗುವ ಸಾಮಗ್ರಿ
ಬ್ರೆಡ್‌- 1 ಪೌಂಡ್‌, ಕಡ್ಲೆ ಹಿಟ್ಟು- 1 ಕಪ್‌, ಜೀರಿಗೆ 1ಚಮಚ, ಆಲೂಗಡ್ಡೆ-4, ಇಂಗು-ಸ್ವಲ್ಪ, ಉದ್ದಿನಬೇಳೆ- 1ಚಮಚ, ಸಾಸಿವೆ -1 ಚಮಚ, ಕರಿಬೇವು-ಒಗ್ಗರಣೆಗೆ, ಅರಿಶಿಣ ಪುಡಿ -1/2ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ- ಕರಿಯಲು. 

ಮಾಡುವ ವಿಧಾನ: ಒಂದು ಪಾತ್ರೆಯಲ್ಲಿ ಕಡ್ಲೆ ಹಿಟ್ಟು, ಉಪ್ಪು , ಜೀರಿಗೆ ಮತ್ತು 1ಕಪ್‌ ನೀರನ್ನು ಹಾಕಿ, ಆ ಮಿಶ್ರಣವನ್ನು ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಆಲೂಗಡ್ಡೆಯನ್ನು ಕುಕ್ಕರ್‌ನಲ್ಲಿ ಬೇಯಿಸಿ, ಚೆನ್ನಾಗಿ ಹಿಸುಕಿಕೊಳ್ಳಿ. ಒಗ್ಗರಣೆಗೆ ಎಣ್ಣೆ, ಉದ್ದಿನಬೇಳೆ, ಸಾಸಿವೆ, ಕರಿಬೇವು, ಅರಿಶಿಣ ಪುಡಿ, ಇಂಗು ಹಾಕಿ, ಒಗ್ಗರಣೆಯನ್ನು ಮತ್ತು ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಿಚುಕಿದ ಆಲೂಗಡ್ಡೆಗೆ ಹಾಕಿ ಚೆನ್ನಾಗಿ ಕಲಸಿ. ಅನಂತರ, ಒಂದೊಂದು ಬ್ರೆಡ್‌ಅನ್ನು ತ್ರಿಕೋನಾಕಾರವಾಗಿ ಎರಡು ತುಂಡುಗಳಾಗಿ ಕತ್ತರಿಸಿ, ಒಂದು ಬ್ರೆಡ್‌ ತುಂಡಿಗೆ ಆಲೂಗಡ್ಡೆ ಮಿಶ್ರಣ ಹಾಕಿ, ಇನ್ನೊಂದು ಬ್ರೆಡ್‌ ತುಂಡಿನಿಂದ ಮುಚ್ಚಿ. ಅದನ್ನು, ಕಡ್ಲೆ ಹಿಟ್ಟಿನ ಮಿಶ್ರಣದಲ್ಲಿ ಅದ್ದಿ ತೆಗೆದು, ಕಾಯಿಸಿದ ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೂ ಕರಿದು ತೆಗೆಯಿರಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.