ಕಂತು ಕಾಯುವುದಿಲ್ಲ! 

ಇಎಂಐ ಮಾಡಿಸುವ ಮುನ್ನ

Team Udayavani, Jan 6, 2020, 5:46 AM IST

15

ಹಿಂದೆಲ್ಲಾ ಒಂದು ಕಾರು, ಒಂದು ಮನೆ ಅಥವಾ ಟಿ.ವಿ ಕೊಳ್ಳುವುದೆಂದರೆ ಅದು ಜೀವಮಾನ ಸಾಧನೆಯಂತೆ ಬಿಂಬಿತವಾಗುತ್ತಿತ್ತು. ಅದರ ಹಿಂದೆ ಸಾಲ ಮತ್ತು ದಶಕಗಳ ಕಾಲ ಹಣಕಾಸು ನಿರ್ವಹಣೆ ಮಾಡಬೇಕಿರುತ್ತಿತ್ತು. ಆದರೆ ಇಂದು ಹಾಗಿಲ್ಲ. ತಮಗೆ ಬೇಕಾದುದನ್ನು ಕೊಳ್ಳುವ ಸ್ವಾತಂತ್ರ್ಯ ಜನರಿಗಿದೆ. ಬ್ಯಾಂಕ್‌ ಲೋನ್‌, ಕ್ರೆಡಿಟ್‌ ಕಾರ್ಡುಗಳಂಥ ಸವಲತ್ತುಗಳಿಂದ ಒಂದೇ ದಿನದಲ್ಲಿ ಸಾಲ ಪಡೆದು ಏನು ಬೇಕಾದರೂ ಖರೀದಿಸಬಹುದು ಎಂಬ ನಂಬಿಕೆಯಂತೂ ಜನರಲ್ಲಿ ಮೂಡಿದೆ.

ಅದರಲ್ಲೂ, ಇಎಂಐ ಎಂಬ ಕಂತು ಸಾಲ ಪಾವತಿಸುವ ವ್ಯವಸ್ಥೆಯಿಂದ ಪ್ರತಿಯೊಂದು ಮನೆಗಳಲ್ಲೂ ತಿಂಗಳಿಗೆ ಎರಡೋ ಮೂರೋ ಇಎಂಐ ಕಮಿಟ್‌ಮೆಂಟ್‌ಗಳು ಇರುವುದನ್ನು ಕಾಣಬಹುದಾಗಿದೆ. ಇಎಂಐ ಎಂದರೆ ಈಕ್ವೇಟೆಡ್‌ ಮನಿ ಇನ್‌ಸ್ಟಾಲ್‌ಮೆಂಟ’. ಸರಳವಾಗಿ ಹೇಳುವುದಾದರೆ- ಕಂತು ಸಾಲ. ಮಾಡಿರುವ ಸಾಲದ ಒಟ್ಟು ಮೊತ್ತಕ್ಕೆ ಇಂತಿಷ್ಟು ಬಡ್ಡಿ ಸೇರಿಸಿ ಪ್ರತಿ ತಿಂಗಳ ಲೆಕ್ಕದಲ್ಲಿ ನಿಗದಿತ ಮೊತ್ತವನ್ನು ಕಟ್ಟುತ್ತಾ ಬರುವುದು ಅದರ ವ್ಯವಸ್ಥೆ. ಪ್ರತಿ ತಿಂಗಳು ಸ್ವಲ್ಪ ಸ್ವಲ್ಪ ಮೊತ್ತವನ್ನು ಕಟ್ಟುವುದರಿಂದ ಹೊರೆಯಾಗದು ಎನ್ನುವುದು ಇಎಂಐನ ಹೆಗ್ಗಳಿಕೆ.

ಇಎಂಐ ನಿರ್ವಹಣೆಗೆ ಸಲಹೆಗಳು
ನೂರು ಸಾರಿ ಯೋಚಿಸಿ: ಸಾಲ, ಯಾವತ್ತಿಗೂ ಶೂಲ ಎಂಬ ಹಿರಿಯರ ಮಾತು ನೆನಪಿರಲಿ. ಕಂತಿನಲ್ಲಿ ಯಾವುದೇ ವಸ್ತು ಅಥವಾ ಆಸ್ತಿ ಖರೀದಿ ಮಾಡುವ ಮುನ್ನ ಹಲವು ಬಾರಿ ಯೋಚಿಸಿ. ನಿಜವಾಗಿಯೂ ಅದರ ಅಗತ್ಯವಿದ್ದರೆ ಮಾತ್ರ ಖರೀದಿಸಿ. ಸಾಲ ಮತ್ತು ಇಎಂಐಗಳು ಯಾವತ್ತೂ ಅಸೆಟ್‌ ಎಂದು ಪರಿಗಣಿತವಾಗುವುದಿಲ್ಲ. ಏಕೆಂದರೆ, ಅವುಗಳಿಂದ ಯಾವುದೇ ಮೊತ್ತ ಉತ್ಪನ್ನವಾಗದ ಕಾರಣ. ಈ ವಿಷಯದಲ್ಲಿ, ಶಿಕ್ಷಣ ಸಾಲಕ್ಕೆ ಮಾತ್ರ ವಿನಾಯಿತಿ ನೀಡಬಹುದಾಗಿದೆ. ಏಕೆಂದರೆ, ಅದು ಬದುಕಿಗೆ ಅಸೆಟ್‌ ದೊರಕಿಸಿಕೊಡುವ ಮಾರ್ಗವಾಗಿರುವುದರಿಂದ ಈ ವಿನಾಯಿತಿ. ಆದರೆ, ತುರ್ತಿದ್ದರೆ ಮಾತ್ರ ಇವು ಆಪತಾºಂಧವ ಎನ್ನುವುದರಲ್ಲೂ ಸತ್ಯಾಂಶವಿದೆ.

ಪರ್ಯಾಯ ಆದಾಯ ಮೂಲ ಇರಲಿ
ದೀರ್ಘಾವಧಿಯ ಕಾಲ ಕಂತು ಸಾಲ ತೀರಿಸಬೇಕಿರುವಾಗ, ಅಷ್ಟೂ ಸಮಯ ಆದಾಯ ಬರುತ್ತಿರುವಂತೆ ನೋಡಿಕೊಳ್ಳಬೇಕಾಗುತ್ತದೆ. ಹೀಗಾಗಿ ಕಂತು ಸಾಲ ತೀರಿಸಲು ಒಂದೇ ಉದ್ಯೋಗವನ್ನು ನೆಚ್ಚಿಕೊಳ್ಳದೆ, ಇನ್ನಿತರೆ ಆದಾಯದ ಮೂಲಗಳನ್ನೂ ಆಶ್ರಯಿಸಿಕೊಂಡರೆ ಅನಿಶ್ಚಿತತೆ ಇರುವುದಿಲ್ಲ.
ಕಂತು ಕಟ್ಟಲು ಮರೆಯದಿರಿ ತಿಂಗಳ ಕಂತನ್ನು ಕಟ್ಟದಿದ್ದರೆ ದಂಡದ ರೂಪದಲ್ಲಿ, ಹೆಚ್ಚುವರಿ ಹಣ ಕಟ್ಟಬೇಕಾಗುತ್ತದೆ. ಅಲ್ಲದೆ ಕ್ರೆಡಿಟ್‌ ಸ್ಕೋರ್‌ ಮೇಲೂ ದುಷ್ಪರಿಣಾಮ ಬೀರುತ್ತದೆ.

ಕಡಿಮೆ ಅವಧಿಯ ಪ್ಲಾನ್ ಆರಿಸಿ
ನಿಮ್ಮ ಹಣಕಾಸು ಸ್ಥಿತಿಗತಿ ಚೆನ್ನಾಗಿದ್ದರೆ ಬೇಗನೆ ಮುಗಿದುಹೋಗುವ ಇಎಂಐ ಪ್ಲ್ರಾನ್‌ ಆರಿಸಿಕೊಳ್ಳಿ. ಆಗ ತಿಂಗಳ ಕಂತಿನ ರೂಪದಲ್ಲಿ ಹೆಚ್ಚು ಹಣ ಕಟ್ಟಬೇಕಾಗುತ್ತದೆ. ಅದಕ್ಕಿಂತ ಮಿಗಿಲಾಗಿ, ಕೆಲ ಬ್ಯಾಂಕ್‌ಗಳು ಮುಂದಿನ ತಿಂಗಳ ಇಎಂಐ ಕಂತುಗಳನ್ನು ಮುಂಚಿತವಾಗಿ ಕಟ್ಟುವ ಸವಲತ್ತನ್ನೂ ನೀಡುತ್ತವೆ. ಸಂಬಳ ಹೆಚ್ಚಳ ಮಾಡಿದರೆ, ಉಡುಗೊರೆಯಾಗಿ ಹಣ ಬಂದರೆ ಇಲ್ಲವೇ ಆರ್‌ಡಿ/ಎಫ್ಡಿ ಮೆಚೂರ್‌ ಆಗಿ ಹಣ ಕೈ ಸೇರಿದರೆ, ಆ ಮೊತ್ತವನ್ನು ಇಎಂಐ ಕಂತುಗಳಿಗೆ ಸೇರಿಸಿ ಕಂತು ಸಾಲ ಬಹಳ ಬೇಗ ಮುಗಿಯುವಂತೆ ಮಾಡಬಹುದು.

- ಹವನ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.