![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 4, 2019, 5:30 AM IST
ಇಂದು ಹಣಕಾಸು ವ್ಯವಹಾರವೂ ಬೆರಳು ತುದಿಯಲ್ಲೇ ನಡೆಯುತ್ತಿರುವುದು ಗಮನಾರ್ಹವಾದ ಸಂಗತಿ. ಡಿಜಿಟಲ್ ಮಾಧ್ಯಮಗಳ ಮೂಲಕ ಹಣಕಾಸು ವ್ಯವಹಾರವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡುತ್ತಿರುವುದನ್ನು ನಾವು ಗಮನಿಸಬಹುದು. ಆದರೆ ಇದರಿಂದ ಹಲವು ರೀತಿಯಲ್ಲಿ ಉಪಯೋಗವಾಗಿದೆ. ಆದರೆ ಅಷ್ಟೇ ಪ್ರಮಾಣದ ಎಚ್ಚರಿಕೆಯನ್ನು ನಾವು ವಹಿಸಬೇಕಾಗುತ್ತದೆ. ಈ ಇಂಟರ್ನೆಟ್ ಯುಗದಲ್ಲಿ, ಸುರಕ್ಷತೆಯ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ನಾವು ಎಲ್ಲೆಲ್ಲ ಎಚ್ಚರಿಕೆ ವಹಿಸಬೇಕು ಗೊತ್ತಾ? ಈ ಬಗ್ಗೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.
ವಿಳಾಸ ನೋಡಿ
ಹಣಕಾಸು ವ್ಯವಹಾರ ನಡೆಸುವ ಸಂದರ್ಭದಲ್ಲಿ ಆನ್ಲೈನ್ ತಾಣ ಅಥವಾ ಬ್ಯಾಂಕ್ ವೆಬ್ಸೈಟ್ ತೆರೆಯುವಾಗ ಅದರ ವಿಳಾಸವನ್ನು (ಯು.ಆರ್.ಎಲ್) ಪರೀಕ್ಷಿಸಿ. ಮೋಸಗಾರರು ಬ್ಯಾಂಕ್ ವೆಬ್ಸೈಟ್ನೆ°à ಹೋಲುವ ನಕಲಿ ಜಾಲತಾಣಗಳನ್ನು ಸೃಷ್ಟಿಸಿಕೊಂಡಿರುತ್ತಾರೆ. ಅದರಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ನೀಡಿದರೆ ಅದನ್ನು ಅವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ವಿಳಾಸ ನೋಡಿದರೆ ಅಸಲೀಯತ್ತು ಗೊತ್ತಾಗುತ್ತದೆ.
ಸಾರ್ವಜನಿಕ ವೈಫೈ ಬಳಕೆ ಬಗ್ಗೆ ಗಮನವಿರಲಿ
ವೈಯಕ್ತಿಕ ವ್ಯವಹಾರ ನಡೆಸಲು ಸುರಕ್ಷಿತ ಸ್ವಂತ ನೆಟ್ವರ್ಕ್ ಬರುವವರೆಗೆ ಕಾಯುವುದು ಉತ್ತಮ. ಸಾರ್ವಜನಿಕ ವೈಫೈಗಳಲ್ಲಿ ಹಣಕಾಸು ವ್ಯವಹಾರಗಳನ್ನು ಮಾಡದಿರುವುದು ಹೆಚ್ಚು ಸೂಕ್ತ.
ನಿಬಂಧನೆಗಳನ್ನು ತಿಳಿದುಕೊಳ್ಳಿ
ಶಾಪಿಂಗ್ ಮಾಡುವಾಗ, ಗ್ರಾಹಕರು ಪಾಲಿಸಬೇಕಿರುವ ನಿಬಂಧನೆಗಳ ಪಟ್ಟಿಯನ್ನು ಸಾಮಾನ್ಯವಾಗಿ ಯಾರೂ ಓದುವುದಿಲ್ಲ. ಆದರೆ ಅದನ್ನು ಓದುವುದರಿಂದ ತಿಳಿವಳಿಕೆ ಮತ್ತು ಜಾಗೃತಿ ಹೆಚ್ಚುತ್ತದೆ. ಆಯಾ ಉತ್ಪನ್ನದ ಕುರಿತಂತೆ ಬಳಕೆದಾರರ ರಿವ್ಯೂಗಳನ್ನು ಓದಿ.
ಬೇಕಾಬಿಟ್ಟಿ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ
ವಿಶೇಷ ಡೀಲ್ಗಳು, ದರ ಕಡಿತ ಮಾರಾಟ ಅಥವಾ ಇನ್ನಾವುದೋ ಆಕರ್ಷಕ ಜಾಹೀರಾತಿಗೆ ಮರುಳಾಗಿ ಬ್ರೌಸರ್ ಬದಿಯಲ್ಲಿ ಕಾಣುವ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ. ಅದರಿಂದ ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ಗಳಿಗೆ ಮಾಲ್ ವೇರ್ಗಳು, ವೈರಸ್ಗಳು ದಾಳಿ ನಡೆಸಬಹುದು. ಅವು ಸ್ಮಾರ್ಟ್ಫೋನಿನಲ್ಲಿನ ಸೂಕ್ಷ್ಮ ಮಾಹಿತಿಯನ್ನು ಕದ್ದು ಮೂರನೆಯವರಿಗೆ ಕೊಡಬಹುದು. ಇದರಿಂದ ಎಚ್ಚರಿಕೆ ವಹಿಸಬೇಕಾಗುತ್ತದೆ.
ಇ-ಮೇಲ್ ಗಾಳ
“ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ. ಬಹುಮಾನದ ಮೊತ್ತ ನಿಮಗೆ ತಲುಪಲು ನಿರ್ದಿಷ್ಟ ಮೊತ್ತವನ್ನು ಡೆಪಾಸಿಟ್ ಆಗಿ ಕೊಡಬೇಕು. ನಂತರ ಅದನ್ನು ಮರಳಿಸಲಾಗುವುದು ಈ ರೀತಿಯ ಇಮೇಲ್ ಕಳಿಸಿ ಮೋಸ ಮಾಡುವ ದೊಡ್ಡ ಜಾಲವೇ ಇದೆ. ಇಂಥ ಇ-ಮೇಲ್ಗಳಿಗೆ ಪ್ರತಿಕ್ರಿಯಿಸಲು ಹೋಗಬಾರದು. ಬದಲಿಗೆ ಸ್ಪಾಮ್ ಪಟ್ಟಿಗೆ ಸೇರಿಸಿ ಅನಂತರ ಡಿಲೀಟ್ ಮಾಡಿಬಿಡಬೇಕು.
- ವಿಜಯಕುಮಾರ್ ಎಸ್.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.