ನಂಬಿಕೆ, ಶಕ್ತಿ, ಸಾಧನೆಗಿದು ಅನಿವಾರ್ಯ


Team Udayavani, Oct 29, 2018, 1:07 PM IST

29-october-10.gif

ಬದುಕಿನಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಅವರು ಅಂಜಲಿಲ್ಲ. ಅಧಿಕಾರ ಸಿಗುವ ಅವಕಾಶವಿದ್ದರೂ ಸಿಗದಿದ್ದಾಗ ಕುಗ್ಗಲಿಲ್ಲ. ತಮ್ಮದೇ ಹಾದಿಯಲ್ಲಿ ನಂಬಿಕೆ ಇರಿಸಿಕೊಂಡು ಮುನ್ನಡೆದ ವ್ಯಕ್ತಿಯೊಬ್ಬರು ಉಕ್ಕಿನ ಮನುಷ್ಯ ಎಂಬ ಬಿರುದನ್ನು ಸಂಪಾದಿಸಿದರು. ತಮ್ಮ ಸಾಮರ್ಥ್ಯದ ಬಗ್ಗೆ ಅಪಾರ ನಂಬಿಕೆ ಇರಿಸಿದ್ದ ವ್ಯಕ್ತಿ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌. ಅಕ್ಟೋಬರ್‌ 31 ಅವರ ಜನ್ಮ ದಿನ. ಎಲ್ಲರ ಬದುಕಿಗೂ ಆದರ್ಶವಾಗುವಂತೆ ಜೀವನ ನಡೆಸಿದ ಉಕ್ಕಿನ ಮನುಷ್ಯ ಹೇಳಿರುವ ಸ್ಫೂರ್ತಿದಾಯಕ ವಿಚಾರಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಲೇಬೇಕಿದೆ.

ಬದುಕಿನಲ್ಲಿ ನಂಬಿಕೆ ಮತ್ತು ಶಕ್ತಿ ಹೇಗಿರಬೇಕು ಎಂಬುದನ್ನು ತಮ್ಮ ಮಾತುಗಳ ಮೂಲಕ ಹೇಳಿ,
ತಮ್ಮ ಬದುಕಿನ ಮೂಲಕ ನಿರೂಪಿಸಿ ಉಕ್ಕಿನ ಮನುಷ್ಯ ಎಂದೇ ಹೆಸರು ಗಳಿಸಿದವರು ಸರ್ದಾರ್‌ ವಲ್ಲಭಭಾಯ್‌ ಪಟೇಲ್‌. 1875ರ ಅಕ್ಟೋಬರ್‌ 31 ರಂದು ಗುಜರಾತಿನಲ್ಲಿ ಜನಿಸಿದ ಅವರ ಬದುಕಿನ ಹಾದಿ ಸುಗಮವಾಗಿರಲ್ಲಿಲ್ಲ. ಒಂದು ಕಡೆ ಮನೆಯಲ್ಲಿ ಆರ್ಥಿಕ ಸಂಕಷ್ಟ ಮತ್ತೊಂದು  ಕಡೆ ಕಣ್ತುಂಬ ಕನಸುಗಳು ಜತೆಗೆ ದೇಶವನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸುವ ಛಲವನ್ನು ತಮ್ಮ ಬದುಕಿನಲ್ಲಿ ತುಂಬಿಕೊಂಡವರು ಪಟೇಲರು.

ಪಟೇಲ ಸಮುದಾಯದ ಸಂಪ್ರದಾಯದಂತೆ 18ರ ಹರೆಯದಲ್ಲೇ ವೈವಾಹಿಕ ಜೀವನಕ್ಕೆ ಪ್ರವೇಶಿಸಿದರು. ಕುಟುಂಬ ದೊಡ್ಡದು. ಜೀವನ ನಿರ್ವಹಣೆಗೆ ಶಕ್ತಿ ಮೀರಿ ದುಡಿಯುವುದು ಅನಿವಾರ್ಯವಾಗಿತ್ತು. ಈ ನಡುವೆ ಪಟೇಲರು ಸ್ವಂತ ಪರಿಶ್ರಮದಿಂದ ಓದಿ, ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಇಂಗ್ಲೆಂಡಿಗೆ ಹೋಗುವ ಕನಸು ಕಂಡಿದ್ದರು.

ಅವರ ಕನಸಿಗೆ ನೀರೆರೆಯುವಂತೆ ಇಂಗ್ಲೆಂಡ್‌ನಿಂದ ವಕೀಲಿ ವ್ಯಾಸಂಗದ ಪ್ರವೇಶಾತಿಯ ಕಾಗದ ಪತ್ರಗಳೂ, ಪ್ರಯಾಣದ ಟಿಕೇಟ್‌ ಕೂಡ ಬಂತು. ಆ ಎಲ್ಲ ದಾಖಲೆಗಳಲ್ಲೂ ಪಟೇಲರ ಹೆಸರನ್ನು ವಿ.ಜೆ. ಪಟೇಲ್‌ ಎಂದು ನಮೂದಿಸಲಾಗಿತ್ತು. ಆದರೆ ಆಗ, ಇಂಗ್ಲೆಂಡಿಗೆ ಹೋಗಿ ಕಲಿಯಲು ತನಗೂ ಆಸೆಯಿದೆ ಎಂದು ಸೋದರ ವಿಠಲಭಾಯಿ ಝವೆಬಾಯಿ ಪಟೇಲ್‌ ಬಂದು ಅಣ್ಣನ ಬಳಿ ಹೇಳಿಕೊಂಡ. ಅಣ್ಣ ವಲ್ಲಭಭಾಯಿ ತಮ್ಮನ ಆಸೆ ಮನ್ನಿಸಿ ಆತನಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟು ತಾವು ಭಾರತದಲ್ಲೇ ಉಳಿದರು.

ಈ ಮೂಲಕ ಅವರು ಸಹೋದರರು ಹೇಗಿರಬೇಕು ಎನ್ನುವುದನ್ನು ತಮ್ಮ ಬದುಕಿನ ಮೂಲಕವೇ ನಿರೂಪಿಸಿಕೊಟ್ಟರು. ಜತೆಗೆ ಬದುಕಿನಲ್ಲಿ ಎಲ್ಲವೂ ಪಡೆದುಕೊಳ್ಳುವುದರಲ್ಲಿ ಖುಷಿಯಿಲ್ಲ. ಬದಲಿಗೆ ಇನ್ನೊಬ್ಬರ ಖುಷಿಗಾಗಿ ನಮ್ಮ ಖುಷಿಯನ್ನು ತ್ಯಾಗ ಮಾಡುವುದರಲ್ಲೂ ನೆಮ್ಮದಿಯಿದೆ ಎಂಬದನ್ನು ಸ್ವತಃ ತಮ್ಮಬದುಕಿನಿಂದಲೇ ತೋರಿಸಿಕೊಟ್ಟರು.

ಅಂದು ಕೊಂಡಂತೆಯೇ ಆಗಿದ್ದರೆ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರು ಭಾರತದ ಮೊದಲ ಪ್ರಧಾನಿಯಾಗಬೇಕಿತ್ತು. ಆದರೆ ಮಹಾತ್ಮಾ ಗಾಂಧೀಜಿ ಅವರಿಗೆ ಜವಾಹರಲಾಲ್‌ ನೆಹರೂ ಮೇಲಿದ್ದ ಮಮಕಾರ ಪ್ರಧಾನಿ ಹುದ್ದೆಯನ್ನು ಪಟೇಲ್‌ರಿಂದ ತ್ಯಾಗ ಮಾಡಿಸಿತು. ಪಟೇಲ್‌ ಅವರು ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ದೇಶದ ಅಭಿವೃದ್ಧಿ ಕಡೆ ಸದಾ ಚಿಂತನೆ ಮಾಡುತ್ತಿದ್ದರು. ದೇಶ ಸದೃಢವಾಗಬೇಕಾದರೆ ಭಾಷಾವಾರು ಪ್ರಾಂತ್ಯಗಳು ಗಟ್ಟಿ ನೆಲೆಯಲ್ಲಿ ರೂಪಗೊಳ್ಳಬೇಕು. ಭಾರತ ಅನ್ನುವ ಭವ್ಯ ಸೌಧಕ್ಕೆ ಭಾಷಾವಾರು ಪ್ರಾಂತ್ಯಗಳು ಆಧಾರ ಸ್ತಂಭಗಳಿದ್ದಂತೆ ಎಂಬುದನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು. ಈ ಮೂಲಕ ಬದುಕಿನಲ್ಲಿ ಏನೇ ಸಾಧಿಸಬೇಕಿದ್ದರೂ ಅಧಿಕಾರ ಮುಖ್ಯವಲ್ಲ. ಬದಲಿಗೆ ದೃಢ ನಿಶ್ಚಯ ಹಾಗೂ ನಂಬಿಕೆ ಇರಬೇಕು ಎನ್ನುವುದನ್ನು ತೋರಿಸಿಕೊಟ್ಟರು. ತಮ್ಮ ಬದುಕಿನಲ್ಲಿ ಉತ್ತಮ ಆಲೋಚನ ಕ್ರಮಗಳನ್ನು ಅಳವಡಿಸಿಕೊಂಡಿದ್ದಕ್ಕಾಗಿ ಅವರಿಗೆ ಉಕ್ಕಿನ ಮನುಷ್ಯ ಎಂಬ ಹೆಸರು ಬಂತು.

ಉತ್ತಮ ಆಲೋಚನೆ, ವಿಷಯವಸ್ತುವನ್ನಿಟ್ಟುಕೊಂಡರೆ ಜೀವನದಲ್ಲಿ ಪ್ರಗತಿ ಸಾಧಿಸಬಹುದು ಎಂಬುವುದು ಅವರ ಅಚಲ ನಂಬಿಕೆಯಾಗಿತ್ತು. ಯಾವುದೇ ಒಂದು ಕೆಲಸ ಪೂರ್ಣಗೊಳ್ಳಲು ಒಗ್ಗಟ್ಟು ಅಗತ್ಯ ಎಂಬುದನ್ನು ಹೇಳಿರುವ ಅವರು, ಬದುಕಿನಲ್ಲಿ ಯಾವುದೇ ಕಾರ್ಯ ಮಾಡಬೇಕಿದ್ದರೂ ಮೊದಲಿಗೆ ಉತ್ತಮ ಆಲೋಚನೆ ಅತ್ಯಗತ್ಯ. ನಮ್ಮ ಆಲೋಚನೆ ಉತ್ತಮವಾಗಿದ್ದರೆ ಅದು ಎಲ್ಲರಿಗೂ ಮಾದರಿಯಾಗುತ್ತದೆ. ಇದು ನಿಮ್ಮನ್ನು ಮಹಾನ್‌ ವ್ಯಕ್ತಿಯನ್ನಾಗಿ ಮಾಡುತ್ತದೆ ಎನ್ನುವುದು ಅವರ ಮಾತಿನಲ್ಲಿ ಅಡಕವಾಗಿತ್ತು.

ಪ್ರತಿಯೊಬ್ಬರು ಬದುಕಿನಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಮನೋಭಾವನೆ ಇಟ್ಟು ಇತರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುವುದು ಅವರ ಇಚ್ಛೆಯಾಗಿತ್ತು. ಪ್ರತಿಯೊಬ್ಬರಲ್ಲೂ ದೇಶಕ್ಕಾಗಿ ಏನಾದರೂ ಕೊಡುಗೆ ನೀಡಬೇಕು ಎಂಬ ಅರಿವಿರಬೇಕು. ಯಾವುದಕ್ಕೂ ಭಯಪಡುವ ಅಗತ್ಯ ಇರುವುದಿಲ್ಲ ಎನ್ನುತ್ತಾರೆ ವಲ್ಲಭಭಾಯ್‌ ಪಟೇಲ್‌. ನಮ್ಮ ಸುತ್ತಮುತ್ತ ಇರುವವರಿಗೆ ಆತ್ಮವಿಶ್ವಾಸದ ಮಾತುಗಳಿಂದ ಸ್ಫೂರ್ತಿ ತುಂಬಬೇಕು. ಈ ಮೂಲಕ ಅವರಲ್ಲೂ ದೇಶಸೇವೆಯ ಕಲ್ಪನೆ ಬಿತ್ತಬಹುದು. ನೂರು ಪುಟಗಳ ದಾಖಲೆಗಿಂತ ಶ್ರೇಷ್ಠ ಹತ್ತು ಸಾಲು ಗಳು ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುತ್ತದೆ ಎಂದಿರುವ ಪಟೇಲರು, ತಾವು ಇತರರಿಂದ ಪ್ರೇರಣೆ ಪಡೆದು, ತಮ್ಮ ಮಾತುಗಳಿಂದ ಇತರಲ್ಲೂ ಸ್ಫೂರ್ತಿ ತುಂಬುತ್ತಿದ್ದರು. ಒಟ್ಟಿನಲ್ಲಿ ಅವರ ಬದುಕಿನಲ್ಲಿ ತಮ್ಮ ಕನಸು ಈಡೇರಿಸಿಕೊಳ್ಳಲಾಗದಿದ್ದರೂ, ತಮ್ಮನ್ನು ತಾವು ದೇಶಕ್ಕಾಗಿ ಮುಡಿಪಾಗಿಟ್ಟು ಎಲ್ಲರಿಗೂ ಆದರ್ಶವಾದರು.

ಒಳ್ಳೆಯತನ ನೀವು ನಡೆಯುವ ದಾರಿಯಲ್ಲಿದೆ. ಆದ್ದರಿಂದ ನಿಮ್ಮ ಕಣ್ಣುಗಳು ಕೋಪದಿಂದ ಕೆಂಪಗಾಗಲು ಅವಕಾಶ ಮಾಡಿಕೊಡದಿರಿ. ಅನ್ಯಾಯವನ್ನು ಪ್ರಶ್ನಿಸಿ.

ಒಗ್ಗಟ್ಟು ಇಲ್ಲದಿದ್ದರೆ ಮಾನವ ಶ್ರಮ ವ್ಯರ್ಥ.

ಜೀವನದಲ್ಲಿ ನಂಬಿಕೆ ಮತ್ತು ಶಕ್ತಿ ಎರಡೂ ಅಗತ್ಯ. ಇದರಲ್ಲಿ ಒಂದನ್ನು ಕಳೆದುಕೊಂಡರೂ ಬದುಕಿನಲ್ಲಿ ಯಶಸ್ಸು ಸಾಧಿಸುವುದು ಅಸಾಧ್ಯ.
– ಸರ್ದಾರ್‌ ವಲ್ಲಭ ಭಾಯ್‌ ಪಟೇಲ್‌

ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.