ಉಪಬೆಳೆಯಾಗಿ ದಾಳಿಂಬೆ


Team Udayavani, Mar 22, 2020, 4:20 AM IST

promegrnate

ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ ಬೆಳೆಯಲಾಗುತ್ತದೆ. ಆಯುರ್ವೇದ ಔಷಧಗಳಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಾಗುತ್ತಿದೆ.
ಆಂಗ್ಲ ಭಾಷೆಯಲ್ಲಿ ಪೊಮೋಗ್ರೊನೆಟ್‌ ಎಂದು ಕರೆಯಲಾಗುವ ಇದರ ವೈಜ್ಞಾನಿಕ ಹೆಸರು ಪುನಿಕ್‌ ಗ್ರೆನೇಟಮ್‌ ಸಸ್ಯಶಾಸ್ತ್ರದ ಪ್ರಕಾರ ಲಿತ್ರಾಸಿಯೆ ಕುಟುಂಬ ವರ್ಗಕ್ಕೆ ಸೇರಿದೆ. ಇದರಲ್ಲಿ ವಿಟಮಿನ್‌ ಬಿ, ಸಿ, ಇ ಹಾಗೂ ಫಾಸ್ಫರಸ್‌ ಅಂಶ ಅಧಿಕ ಪ್ರಮಾಣದಲ್ಲಿದೆ.

ಮಣ್ಣು ಮತ್ತು ಹವಾಮಾನ
ಫ‌ಲವತ್ತಾದ ನೀರು ಬಸಿದು ಹೋಗುವಂತಹ ಕೆಂಪು, ಕಪ್ಪು ಮಣ್ಣು ದಾಳಿಂಬೆ ಕೃಷಿಗೆ ಉತ್ತಮ. ಸಮಶೀತೋಷ್ಣ ಪ್ರದೇಶಗಳು ದಾಳಿಂಬೆ ಬೆಳೆಯಲು ಸಹಕಾರಿ. ತೇವಾಂಶ, ತಂಗಾಳಿ ಮಿಶ್ರಿತ ಮಳೆಯ ವಾತಾವರಣ ದಾಳಿಂಬೆ ಕೃಷಿಗೆ ಅಷ್ಟು ಸೂಕ್ತವಲ್ಲ. ಈ ವಾತಾವರಣದಲ್ಲಿ ದಾಳಿಂಬೆ ನಾನಾ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ.

ಕೃಷಿ ವಿಧಾನ
ಎರಡರಿಂದ ಮೂರು ಅಡಿ ಉದ್ದ, ಅಗಲ ಮತ್ತು ಎರಡು ಅಡಿ ಆಳದ ಹೊಂಡ ತೋಡಿ. ಗಿಡದಿಂದ ಗಿಡಕ್ಕೆ ಹಾಗೂ ಸಾಲಿನಿಂದ ಸಾಲಿಗೆ ಸುಮಾರು 8ರಿಂದ 10 ಅಡಿ ಅಂತರ ಇರಲಿ. ಪ್ರತಿ ಹೊಂಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಡುಮಣ್ಣು, ಒಣಗಿದ ಹಟ್ಟಿಗೊಬ್ಬರ ಮಿಶ್ರ ಮಾಡಿ ಹಾಕಿ. ಬಳಿಕ ನರ್ಸರಿಯಿಂದ ಉತ್ತಮ ತಳಿಯ ಗಿಡ ತಂದು ನಾಟಿ ಮಾಡಬೇಕು. ಪ್ರತಿ ದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರು ಒದಗಿಸಿ. ಹನಿ ನೀರಾವರಿ ವ್ಯವಸ್ಥೆ ಮಾಡಿದರೆ ಉತ್ತಮ. ಸಮರ್ಪಕವಾಗಿ ನೀರಿನ ನಿರ್ವಹಣೆ ಮಾಡುವ ಮೂಲಕ ದಾಳಿಂಬೆ ಹಣ್ಣು ಸೀಳು ಬಿಡುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಸುಮಾರು ಐದರಿಂದ ಎಂಟು ಮೀಟರ್‌ ಎತ್ತರಕ್ಕೆ ಬೆಳೆಯುವ ದಾಳಿಂಬೆ ಗಿಡ ವರ್ಷಕ್ಕೆ ಮೂರು ಬಾರಿ ಫ‌ಸಲು ನೀಡುತ್ತದೆ. ಗಿಡ ನೆಟ್ಟ ದಿನದಿಂದ ಫ‌ಸಲು ಕೈಗೆ ಬರಲು 22 ತಿಂಗಳು ಬೇಕು. ಅನಂತರ 2 ವರ್ಷಕ್ಕೆ 3 ಬಾರಿ ಬೆಳೆ ತೆಗೆಯಬಹುದು. ಒಮ್ಮೆ ನಾಟಿ ಮಾಡಿದ ದಾಳಿಂಬೆ ಗಿಡ ಕನಿಷ್ಠ 15 ವರ್ಷಗಳ ಕಾಲ ಫ‌ಸಲು ನೀಡುತ್ತದೆ.

ಎಜಿ.ಕೆ.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.