ಮೀನು ತ್ಯಾಜ್ಯ ನೀರಿನ ವಾಸನೆಯಿಂದ ನಗರಕ್ಕೆ  ಮುಕ್ತಿ ಸಿಗಲಿ


Team Udayavani, Mar 17, 2019, 7:54 AM IST

17-marc1h-12.jpg

ಯಾವುದೇ ತ್ಯಾಜ್ಯವನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೊಂಡೊಯ್ಯುವಾಗ ಸೂಕ್ತ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಏಕೆಂದರೆ, ತ್ಯಾಜ್ಯ ಕೊಂಡೊಯ್ಯುವಾಗ ಅದರಿಂದ ಹೊರ ಹೋಗುವ ವಾಸನೆಯಿಂದಾಗಿ ದೇಹಾರೋಗ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರೆ ಮಂಗಳೂರಿನಲ್ಲಿ ಮೀನಿನ ತ್ಯಾಜ್ಯ ನೀರನ್ನು ಕೊಂಡೊಯ್ಯುವಾಗ ಇಂತಹ ನಿಯಮಗಳನ್ನು ಗಾಳಿಗೆ ತೂರಿ ಬಿಡಲಾಗುತ್ತಿದೆ ಎಂಬುದು ಅಷ್ಟೇ ಸತ್ಯ.

ನಗರದ ದಕ್ಕೆಯಿಂದ ತೊಕ್ಕೊಟ್ಟು ಕಡೆ ತೆರಳುವ ಮೀನು ತುಂಬಿದ ಲಾರಿಯಿಂದ ತ್ಯಾಜ್ಯ ನೀರೆಲ್ಲ ರಸ್ತೆ ಪಾಲಾಗುತ್ತದೆ. ಇದರಿಂದಾಗಿ ಸುತ್ತಮುತ್ತಲಿನ ಜನ, ಈ ರಸ್ತೆಯಲ್ಲಿ ತೆರಳುವ ವಾಹನ ಸವಾರರು ಮೂಗು ಮುಚ್ಚಿಕೊಂಡೇ ತೆರಳಬೇಕಾದ ಪರಿಸ್ಥಿತಿ ಇದೆ.

ದಕ್ಕೆಯಿಂದ ಪಾಂಡೇಶ್ವರ, ಎಮ್ಮೆಕೆರೆ, ಮಂಕಿಸ್ಟಾಂಡ್‌, ಮೊರ್ಗನ್ಸ್‌ ಗೇಟ್‌, ಮಹಾಕಾಳಿಪಡ್ಪು, ಜೆಪ್ಪಿನಮೊಗರು ಮೂಲಕ ರಾಷ್ಟ್ರೀಯ ಹೆದ್ದಾರಿ ಸೇರಿ ತೊಕ್ಕೊಟ್ಟು ಕಡೆಗೆ ಈ ಲಾರಿ ಮತ್ತು ಟೆಂಪೋಗಳು ಹೋಗುತ್ತವೆ. ಹೀಗೆ ಮೀನಿನ ತ್ಯಾಜ್ಯ ಕೊಂಡೊಯ್ಯುವಾಗ ಇಡೀ ತ್ಯಾಜ್ಯ ನೀರು ರಸ್ತೆಗೆ ಸಿಂಪಡಣೆಯಾಗುತ್ತದೆ. ಲಾರಿ ಹೋಗುವಾಗ ಹಿಂದಿನಿಂದ ವಾಹನ ಸವಾರರು ಪ್ರಯಾಣಿಸುವಂತೆಯೇ ಇಲ್ಲ; ತಪ್ಪಿ ಪ್ರಯಾಣಿಸಿದರೂ ವಾಹನ ಮಾತ್ರವಲ್ಲದೆ, ಧರಿಸಿದ ಬಟ್ಟೆಯ ಮೇಲೂ ಮೀನಿನ ನೀರು ಸಿಂಪಡಣೆಯಾಗುವುದು ಖಚಿತ.

ಹೀಗೆ ರಸ್ತೆಗೆ ಬೀಳುವ ನೀರು ಅತೀವ ವಾಸನೆಯಿಂದ ಕೂಡಿರುವುದಲ್ಲದೆ, ಶುದ್ಧ ಗಾಳಿಯ ಜತೆ ಬೆರೆತು ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ಮೀನಿನ ವಾಸನೆಯನ್ನೇ ಇಲ್ಲಿನ ಜನತೆ ಉಸಿರಾಡಬೇಕಾಗಿದೆ.

ಇದು ಇಂದು ನಿನ್ನೆಯ ಕಥೆಯಲ್ಲ; ಹಲವಾರು ಸಮಯಗಳಿಂದ ಹೀಗೇ ಪರಿಸ್ಥಿತಿ ಇದ್ದರೂ, ಸಂಬಂಧಪಟ್ಟವರು ಇದರಿಂದ ಮುಕ್ತಿ ಕೊಡಲು ಮುಂದಾಗುತ್ತಿಲ್ಲ ಎನ್ನುತ್ತಾರೆ ಸುತ್ತಮುತ್ತಲಿನ ನಿವಾಸಿಗಳು. ಹೀಗಾಗಿ ಇನ್ನು ಮುಂದಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಪ್ರಕೃತಿದತ್ತ ಸ್ವಚ್ಛ ಗಾಳಿ ಸೇವನೆಗೆ ಅವಕಾಶ ಮಾಡಿಕೊಡಬೇಕಿದೆ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.