ವರ್ಷಾಕಾಲದ ನಡುವೆ ಮೀನಾಕ್ಷಿ ಕಲ್ಯಾಣ


Team Udayavani, Jul 13, 2018, 6:00 AM IST

b-5.jpg

ಯಕ್ಷಸಿರಿ ವನಿತಾ ಬಳಗ, ಬ್ರಹ್ಮಾವರ ಇವರು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಇವರ ಸಹಕಾರದೊಂದಿಗೆ ಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ಮೀನಾಕ್ಷಿ ಕಲ್ಯಾಣ ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಡೆಸಿಕೊಟ್ಟರು. ಪಾಂಡ್ಯ ದೇಶದ ಅರಸ ಮಲಯಧ್ವಜನ ಮಗಳು ಮೀನಾಕ್ಷಿಗೆ ಹುಟ್ಟುತ್ತಲೆ ಮೂರು ಸ್ತನಗಳು. ಹಾಗಾಗಿ ಚಿಂತಾಕ್ರಾಂತನಾದ ಅರಸನಿಗೆ ನಾರದರು ಸಮಾಧಾನಿಸಿ ಮುಂದೆ ಈಕೆ ದಿಗ್ವಿಜಯಕ್ಕೆ ಹೋಗುವ ಸಂದರ್ಭದಲ್ಲಿ ಯಾವಾತನಿಂದ ಘಾಸಿಗೊಂಡು ಮೂರನೇ ಸ್ತನ ಮಾಯವಾಗುತ್ತದೋ ಆತನೇ ಇವಳ ಪತಿಯಾಗುತ್ತಾನೆ ಎಂದು ತಿಳಿಸಿರುತ್ತಾರೆ. ತಂದೆಯ ನಂತರ ಅಧಿಕಾರ ಪಡೆದ ಮೀನಾಕ್ಷಿ ಮಂತ್ರಿ ವೀರಸೇನನೊಂದಿಗೆ ದಿಗ್ವಿಜಯಕ್ಕೆ ಹೊರಟು, ಸುತ್ತುಮುತ್ತಲಿನ ರಾಜರನ್ನು ಸೋಲಿಸಿ, ಕಾಶ್ಮೀರದರಸ ಶೂರಸೇನನಲ್ಲಿ ಯುದ್ಧಗೈಯುವ ಸಂದರ್ಭ ನಾರದರು ತಡೆದು ಈಕೆ ನಿನ್ನ ಮಗಳಾದ ಕಾಂಚನಮಾಲೆಯ ಮಗಳು ಎಂದಾಗ ಮೊಮ್ಮಗಳಾದ ಆಕೆಯನ್ನು ಉಪಚರಿಸುತ್ತಾನೆ. ಮುಂದೆ ಸ್ತ್ರೀ ಮಲಯಾಳ ರಾಜ್ಯ ಪ್ರವೇಶಿಸಿ ರಾಣಿ ಪದ್ಮಗಂಧಿನಿಯನ್ನು ಸೋಲಿಸಿ ಕಪ್ಪ ಪಡೆದು, ಕೊನೆಯಲ್ಲಿ ಕೈಲಾಸಕ್ಕೆ ಲಗ್ಗೆಯಿಟ್ಟು ಶಿವನ ಗಣಗಳನ್ನು ಸೋಲಿಸಿ ಶಿವನೊಂದಿಗೆ ಸೆಣೆದಾಡಿ ಸೋತ ಸಂದರ್ಭದಲ್ಲಿ ಆಕೆಯ ಮೂರನೇ ಸ್ತನ ಮಾಯವಾಗುತ್ತದೆ. 

ನಾರದರ ಮಾತಿನಂತೆ ಈರ್ವರ ವಿವಾಹವಾಗುವಲ್ಲಿಗೆ ಪ್ರಸಂಗ ಮುಕ್ತಾಯವಾಗುತ್ತದೆ. ಮೀನಾಕ್ಷಿಯಾಗಿ ಭಾಗೀರಥಿ ಎಂ. ರಾವ್‌ ಅವರು ತನ್ನ ಲವಲವಿಕೆಯ ಹೆಜ್ಜೆ ಮತ್ತು ಧೀರತನದ ಮಾತಿನ ಶೈಲಿಯ ಮೂಲಕ ಪಾತ್ರವನ್ನು ಅನಾವರಣಗೊಳಿಸಿದ ಪರಿ ಸೊಗಸಾಗಿತ್ತು. ಶೂರಸೇನನ ಗಾಂಭೀರ್ಯತೆ ಮತ್ತು ಈಶ್ವರನ ಕೋಪಾವೇಷವನ್ನು ನಾಗರತ್ನಾ ಹೇಳೆìಯವರು ಉತ್ತಮವಾಗಿ ಅಭಿವ್ಯಕ್ತಿಗೊಳಿಸಿದ್ದರು. ಪದ್ಮಗಂಧಿನಿಯಾಗಿ ಕು| ಸಹನಾರವರ ಪಾತ್ರ ನಿರ್ವಹಣೆ ಚೆನ್ನಾಗಿದ್ದು, ಮಂತ್ರಿ ವೀರಸೇನನಾಗಿ ಕು| ವಿಶ್ರುತಾ ಹೇಳೆì, ನಾರದ ಮತ್ತು ನಂದಿಯಾಗಿ ಗಾಯತ್ರಿ ಶಾಸ್ತ್ರಿಯವರು ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿದರು. ಬಾಲಗೋಪಾಲರಾಗಿ ಮಾ| ವಿಭಾವನ ಹೇಳೆì ಮತ್ತು ಮಾ| ಸೃಜನ್‌ ಕುಂದರ್‌, ಪೀಠಿಕಾ ಸ್ತ್ರೀವೇಷದಲ್ಲಿ ಮಾ| ರೋಹನ್‌ ಹೆಬ್ಟಾರ್‌ ಮತ್ತು ಮಾ| ಪ್ರಣವ್‌ ಹೊಳ್ಳ ಇವರುಗಳು ಪೂರ್ವರಂಗದ ಚೆಲುವನ್ನು ಹೆಚ್ಚಿಸಿದರೆ, ಭಾಗವತರಾಗಿ ಉದಯ ಕುಮಾರ್‌ ಹೊಸಾಳ, ಮದ್ದಲೆಯಲ್ಲಿ ರಾಘವೇಂದ್ರ ಹೆಗಡೆ ಯಲ್ಲಾಪುರ, ಚೆಂಡೆಯಲ್ಲಿ ಕೃಷ್ಣಾನಂದ ಶೆಣೈ ಹಿಮ್ಮೇಳದ ಸೊಗಸನ್ನು ಹೆಚ್ಚಿಸಿದರು. ವೇಷಭೂಷಣ ಬಾಲಕೃಷ್ಣ ನಾಯಕ್‌ ಹಂದಾಡಿಯವರದ್ದಾಗಿತ್ತು. ಎರಡು ಗಂಟೆ ಅವಧಿಯ ಈ ಯಕ್ಷಗಾನ ಪ್ರೇಕ್ಷಕರಿಂದ ಮೆಚ್ಚುಗೆಗಳಿಸುವಲ್ಲಿ ಯಶಸ್ವಿಯಾಯಿತು.

ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Baba Siddique Case: ಮುಂಬೈ ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ…

Baba Siddique Case: ಮುಂಬೈ ಪೊಲೀಸರಿಂದ ಇನ್ನೋರ್ವನ ಬಂಧನ… ಬಂಧಿತರ ಸಂಖ್ಯೆ 4ಕ್ಕೆ ಏರಿಕೆ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

13

Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ

12

Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ

14

Swarajya 1942 Movie: ಸ್ವರಾಜ್ಯದಲ್ಲಿ ಕ್ರಾಂತಿಯ ಕಹಳೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.